AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಟ್ಟು ಹೋದ ಬೈಕ್​ಗೆ ಖಾಯಂ ನೊಂದಣಿ ಇಲ್ಲ ಎಂದು ಪರಿಹಾರ ನೀಡಲು ನಿರಾಕರಿಸಿದ ಕಂಪನಿಗೆ 15 ಲಕ್ಷ ದಂಡ ವಿಧಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ

ಖಾಯಂ ರಜಿಸ್ಟ್ರೇಶನ್ ಮಾಡಿಸದ ಕಾರಣ ಸುಟ್ಟ ಬೈಕ್​ಗೆ ಪರಿಹಾರದ ಹಣ ನೀಡಲು ನ್ಯೂ ಇಂಡಿಯಾ ಅಶುರೆನ್ಸ್ ವಿಮಾ ಕಂಪನಿ ನಿರಾಕರಿಸಿತ್ತು. ಸದ್ಯ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಭಾರೀ ದಂಡ ವಿಧಿಸಿದೆ.

ಸುಟ್ಟು ಹೋದ ಬೈಕ್​ಗೆ ಖಾಯಂ ನೊಂದಣಿ ಇಲ್ಲ ಎಂದು ಪರಿಹಾರ ನೀಡಲು ನಿರಾಕರಿಸಿದ ಕಂಪನಿಗೆ 15 ಲಕ್ಷ ದಂಡ ವಿಧಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ
ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ
ಆಯೇಷಾ ಬಾನು
ಆಯೇಷಾ ಬಾನು|

Updated on: Mar 02, 2023 | 3:50 PM

Share

ಧಾರವಾಡ: ಪರಿಹಾರದ ಹಣ ನೀಡದ ನ್ಯೂ ಇಂಡಿಯಾ ಅಶುರೆನ್ಸ್ ವಿಮಾ ಕಂಪನಿಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಭಾರೀ ದಂಡ ವಿಧಿಸಿದೆ. 15,59,000 ರೂ ದಂಡ ಮತ್ತು ಪರಿಹಾರ ನೀಡುವಂತೆ ತೀರ್ಪು ನೀಡಿದೆ.

ಹುಬ್ಬಳ್ಳಿಯ ವಿದ್ಯಾನಗರದ ನಿವಾಸಿ ತುಷಾರ್ ಪವಾರ್ ಎಂಬುವವರು ಮುಂಬೈ ಶೋ ರೂಮ್‌ನಿಂದ ಬೈಕ್ ಖರೀದಿಸಿದ್ದರು. 2021 ಮೇ ತಿಂಗಳಲ್ಲಿ 14,99,000 ರೂ. ಹಣವನ್ನು ನೀಡಿ ಕವಾಸಾಕಿ ಕಂಪನಿಯ ಕವಾಸಾಕಿ-900 ಸುಪರ್ ಬೈಕ್ ಖರೀದಿಸಿದ್ದರು. ವಿಮಾ ಹಣ ರೂ.39,006/- ಪ್ರೀಮಿಯಮ್ ಕಟ್ಟಿದ್ದರು. ಬಳಿಕ ಆರ್.ಟಿ.ಓ ಕಚೇರಿಯಿಂದ ತಾತ್ಕಾಲಿಕ ನೋಂದಣಿ ಮಾಡಿಸಲಾಗಿತ್ತು. ಆದ್ರೆ ತಿಂಗಳೊಳಗಾಗಿ ಖಾಯಂ ರಜಿಸ್ಟ್ರೇಶನ್ ಮಾಡಿಸಬೇಕಿತ್ತು. ಅದೇ ಸಮಯಕ್ಕೆ ಲಾಕ್‌ಡೌನ್ ಘೋಷಣೆಯಾಗಿತ್ತು. ಆಗ ಆರ್.ಟಿ. ಓ. ಕಚೇರಿ ಬಂದ್ ಆಗಿತ್ತು. ಕೆಲ ದಿನಗಳ ಬಳಿಕ ಆಕಸ್ಮಿಕ ಬೆಂಕಿಗೆ ಬೈಕ್ ಸುಟ್ಟು ಹೋಗಿತ್ತು. ವಿಮೆ ಚಾಲ್ತಿಯಿದ್ದುದರಿಂದ 14,99,000 ನೀಡುವಂತೆ ಕ್ಲೇಮ್ ಮಾಡಲಾಗಿದೆ. ಆಗ ವಿಮಾ ಕಂಪನಿ ವಾಹನಕ್ಕೆ ಖಾಯಂ ನೋಂದಣಿ ಆಗಿರಲಿಲ್ಲ. ಹೀಗಾಗಿ ವಿಮೆ ನೀಡಲು ಸಾಧ್ಯವಿಲ್ಲ ಎಂದಿದೆ.

ಆಗ ತುಷಾರ್ ಕಂಪನಿ ವಿರುದ್ಧ ಆಯೋಗದ ಮೊರೆ ಹೋಗಿದ್ದು ಆಯೋಗದಿಂದ ತುಷಾರ್ ಪರ ತೀರ್ಪು ಬಂದಿದೆ. ಬೈಕಿನ ಪೂರ್ತಿ ಮೌಲ್ಯ ರೂ.14,99,000ಗಳ ಪರಿಹಾರ, ದೂರುದಾರರಿಗೆ ಮಾನಸಿಕ ತೊಂದರೆಗಾಗಿ ರೂ.50,000 ಪರಿಹಾರ, ಪ್ರಕರಣದ ಖರ್ಚು ವೆಚ್ಚ ರೂ.10,000 ಸೇರಿದಂತೆ ಒಟ್ಟು ರೂ. 15,59,000/- ದಂಡ ಮತ್ತು ಪರಿಹಾರ ನೀಡುವಂತೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಆದೇಶ ಹೊರಡಿಸಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ