AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಟ್ಟು ಹೋದ ಬೈಕ್​ಗೆ ಖಾಯಂ ನೊಂದಣಿ ಇಲ್ಲ ಎಂದು ಪರಿಹಾರ ನೀಡಲು ನಿರಾಕರಿಸಿದ ಕಂಪನಿಗೆ 15 ಲಕ್ಷ ದಂಡ ವಿಧಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ

ಖಾಯಂ ರಜಿಸ್ಟ್ರೇಶನ್ ಮಾಡಿಸದ ಕಾರಣ ಸುಟ್ಟ ಬೈಕ್​ಗೆ ಪರಿಹಾರದ ಹಣ ನೀಡಲು ನ್ಯೂ ಇಂಡಿಯಾ ಅಶುರೆನ್ಸ್ ವಿಮಾ ಕಂಪನಿ ನಿರಾಕರಿಸಿತ್ತು. ಸದ್ಯ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಭಾರೀ ದಂಡ ವಿಧಿಸಿದೆ.

ಸುಟ್ಟು ಹೋದ ಬೈಕ್​ಗೆ ಖಾಯಂ ನೊಂದಣಿ ಇಲ್ಲ ಎಂದು ಪರಿಹಾರ ನೀಡಲು ನಿರಾಕರಿಸಿದ ಕಂಪನಿಗೆ 15 ಲಕ್ಷ ದಂಡ ವಿಧಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ
ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ
ಆಯೇಷಾ ಬಾನು
|

Updated on: Mar 02, 2023 | 3:50 PM

Share

ಧಾರವಾಡ: ಪರಿಹಾರದ ಹಣ ನೀಡದ ನ್ಯೂ ಇಂಡಿಯಾ ಅಶುರೆನ್ಸ್ ವಿಮಾ ಕಂಪನಿಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಭಾರೀ ದಂಡ ವಿಧಿಸಿದೆ. 15,59,000 ರೂ ದಂಡ ಮತ್ತು ಪರಿಹಾರ ನೀಡುವಂತೆ ತೀರ್ಪು ನೀಡಿದೆ.

ಹುಬ್ಬಳ್ಳಿಯ ವಿದ್ಯಾನಗರದ ನಿವಾಸಿ ತುಷಾರ್ ಪವಾರ್ ಎಂಬುವವರು ಮುಂಬೈ ಶೋ ರೂಮ್‌ನಿಂದ ಬೈಕ್ ಖರೀದಿಸಿದ್ದರು. 2021 ಮೇ ತಿಂಗಳಲ್ಲಿ 14,99,000 ರೂ. ಹಣವನ್ನು ನೀಡಿ ಕವಾಸಾಕಿ ಕಂಪನಿಯ ಕವಾಸಾಕಿ-900 ಸುಪರ್ ಬೈಕ್ ಖರೀದಿಸಿದ್ದರು. ವಿಮಾ ಹಣ ರೂ.39,006/- ಪ್ರೀಮಿಯಮ್ ಕಟ್ಟಿದ್ದರು. ಬಳಿಕ ಆರ್.ಟಿ.ಓ ಕಚೇರಿಯಿಂದ ತಾತ್ಕಾಲಿಕ ನೋಂದಣಿ ಮಾಡಿಸಲಾಗಿತ್ತು. ಆದ್ರೆ ತಿಂಗಳೊಳಗಾಗಿ ಖಾಯಂ ರಜಿಸ್ಟ್ರೇಶನ್ ಮಾಡಿಸಬೇಕಿತ್ತು. ಅದೇ ಸಮಯಕ್ಕೆ ಲಾಕ್‌ಡೌನ್ ಘೋಷಣೆಯಾಗಿತ್ತು. ಆಗ ಆರ್.ಟಿ. ಓ. ಕಚೇರಿ ಬಂದ್ ಆಗಿತ್ತು. ಕೆಲ ದಿನಗಳ ಬಳಿಕ ಆಕಸ್ಮಿಕ ಬೆಂಕಿಗೆ ಬೈಕ್ ಸುಟ್ಟು ಹೋಗಿತ್ತು. ವಿಮೆ ಚಾಲ್ತಿಯಿದ್ದುದರಿಂದ 14,99,000 ನೀಡುವಂತೆ ಕ್ಲೇಮ್ ಮಾಡಲಾಗಿದೆ. ಆಗ ವಿಮಾ ಕಂಪನಿ ವಾಹನಕ್ಕೆ ಖಾಯಂ ನೋಂದಣಿ ಆಗಿರಲಿಲ್ಲ. ಹೀಗಾಗಿ ವಿಮೆ ನೀಡಲು ಸಾಧ್ಯವಿಲ್ಲ ಎಂದಿದೆ.

ಆಗ ತುಷಾರ್ ಕಂಪನಿ ವಿರುದ್ಧ ಆಯೋಗದ ಮೊರೆ ಹೋಗಿದ್ದು ಆಯೋಗದಿಂದ ತುಷಾರ್ ಪರ ತೀರ್ಪು ಬಂದಿದೆ. ಬೈಕಿನ ಪೂರ್ತಿ ಮೌಲ್ಯ ರೂ.14,99,000ಗಳ ಪರಿಹಾರ, ದೂರುದಾರರಿಗೆ ಮಾನಸಿಕ ತೊಂದರೆಗಾಗಿ ರೂ.50,000 ಪರಿಹಾರ, ಪ್ರಕರಣದ ಖರ್ಚು ವೆಚ್ಚ ರೂ.10,000 ಸೇರಿದಂತೆ ಒಟ್ಟು ರೂ. 15,59,000/- ದಂಡ ಮತ್ತು ಪರಿಹಾರ ನೀಡುವಂತೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಆದೇಶ ಹೊರಡಿಸಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?