AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಹಜ್ ಯಾತ್ರೆ ತಪ್ಪಿಸಿದ್ದಕ್ಕೆ ಅಲ್-ಹುದೆಬಿಯಾ ಟ್ರಾವೆಲ್ಸ್‌ಗೆ ದಂಡ ವಿಧಿಸಿದ ಗ್ರಾಹಕರ ಆಯೋಗ

ಧಾರವಾಡದ ನವಲೂರಿನ ಮುಸ್ಲಿಂ ಕುಟುಂಬವೊಂದು ಹಜ್‌ ಧಾರ್ಮಿಕ ಯಾತ್ರೆಗೆ ತೆರಳಲು ಯೋಜನೆ ಹಾಕಿತ್ತು. ಆದರೆ ಹುಬ್ಬಳ್ಳಿಯ ಅಲ್-ಹುದೆಬಿಯಾ ಟ್ರಾವೆಲ್ಸ್​ಗೆ ಹಣ ಪಾವತಿಸಿದ್ದರೂ ಸೌಲಭ್ಯ ಕಲ್ಪಿಸಿರಲಿಲ್ಲ. ಹೀಗಾಗಿ ಈ ಟ್ರಾವೆಲ್ಸ್​ಗೆ ಗ್ರಾಹಕರ ಆಯೋಗ ದಂಡ ವಿಧಿಸಿದೆ.

ಧಾರವಾಡ: ಹಜ್ ಯಾತ್ರೆ ತಪ್ಪಿಸಿದ್ದಕ್ಕೆ ಅಲ್-ಹುದೆಬಿಯಾ ಟ್ರಾವೆಲ್ಸ್‌ಗೆ ದಂಡ ವಿಧಿಸಿದ ಗ್ರಾಹಕರ ಆಯೋಗ
ಹಜ್ ಯಾತ್ರೆ ತಪ್ಪಿಸಿದ್ದಕ್ಕೆ ಅಲ್-ಹುದೆಬಿಯಾ ಟ್ರಾವೆಲ್ಸ್‌ಗೆ ದಂಡ ವಿಧಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Jul 22, 2023 | 4:58 PM

Share

ಧಾರವಾಡ, ಜುಲೈ 22: ಹಜ್ ಯಾತ್ರೆ ತಪ್ಪಿಸಿದ ಅಲ್-ಹುದೆಬಿಯಾ ಟೂರ್ಸ್ ಟ್ರಾವೆಲ್ಸ್ ಸಂಸ್ಥೆಗೆ ಧಾರವಾಡದ (Dharwad) ಜಿಲ್ಲಾ ಗ್ರಾಹಕರ ಆಯೋಗವು ದಂಡ ವಿಧಿಸಿ ದೂರುದಾರರಿಗೆ ಪರಿಹಾರ ನೀಡುವಂತೆ ಆದೇಶಿಸಿದೆ. ಧಾರವಾಡದ ನವಲೂರಿನ ಮುಸ್ಲಿಂ ಕುಟುಂಬವೊಂದು ಹಜ್‌ ಧಾರ್ಮಿಕ ಯಾತ್ರೆಗೆ (Hajj Yatra) ತೆರಳಲು ಯೋಜನೆ ಹಾಕಿತ್ತು. ಆದರೆ ಹುಬ್ಬಳ್ಳಿಯ ಅಲ್-ಹುದೆಬಿಯಾ ಟ್ರಾವೆಲ್ಸ್​ಗೆ ಹಣ ಪಾವತಿಸಿದ್ದರೂ ಸೌಲಭ್ಯ ಕಲ್ಪಿಸಿರಲಿಲ್ಲ. ಹೀಗಾಗಿ ಈ ಟ್ರಾವೆಲ್ಸ್​ಗೆ ಗ್ರಾಹಕರ ಆಯೋಗ ದಂಡ ವಿಧಿಸಿದೆ.

ಧಾರವಾಡದ ನವಲೂರಿನ ಹಜರತ್‌‌ಸಾಬ್, ಫಾತಿಮಾ, ಬಿಬಿಶಾ ಕುಸುಗಲ್ ಮತ್ತು ಸಮೀರ್ ಬಾನಿ ಎಂಬ ಒಂದೇ ಕುಟುಂಬದ ಸದಸ್ಯರು ಉಮರ್ ಮತ್ತು ಹಜ್‌ ಧಾರ್ಮಿಕ ಯಾತ್ರೆಗೆ ತೆರಳಲು ಯೋಜನೆ ಹಾಕಿದ್ದರು. ಅದಕ್ಕಾಗಿ ಹುಬ್ಬಳ್ಳಿಯ ಅಲ್-ಹುದೆಬಿಯಾ ಇಂಟರ್‌ನ್ಯಾಶನಲ್ ಟೂರ್ಸ್ ಮತ್ತು ಟ್ರಾವೆಲ್ಸ್ ಸಂಸ್ಥೆಗೆ 3.16 ಲಕ್ಷ ರೂ. ಕಟ್ಟಿ ಪ್ರಯಾಣ ನಿಗದಿಪಡಿಸಿಕೊಂಡಿದ್ದರು.

ಟ್ರಾವೆಲ್ಸ್‌ನವರು 2022 ಅಕ್ಟೋಬರ್ 3 ನೇ ವಾರದಲ್ಲಿ ಯಾತ್ರೆಗೆ ತೆರಳಲು ಸೌಲಭ್ಯ ಕಲ್ಪಿಸಬೇಕಾಗಿತ್ತು. ಆದರೆ, ಅಕ್ಟೋಬರ್ ಕಳೆದು ಹಲವು ತಿಂಗಳು ಕಳೆದರೂ ಯಾತ್ರೆಗೆ ತೆರಳುವ ಸೌಲಭ್ಯ ಒದಗಿಸಿರಲಿಲ್ಲ. ಹೀಗಾಗಿ ತಮ್ಮ ಹಜ್ ಯಾತ್ರೆ ತಪ್ಪಿದ್ದಲ್ಲದೇ ಟ್ರಾವೆಲ್ಸ್‌ನವರಿಂದ ಮೋಸವಾಗಿದೆ ಎಂದು ಆರೋಪಿಸಿ ಟ್ರಾವಲ್ಸ್ ವಿರುದ್ಧ ಗ್ರಾಹಕರ ಆಯೋಗಕ್ಕೆ 2023 ರ ಜನವರಿ ತಿಂಗಳಲ್ಲಿ ದೂರು ನೀಡಲಾಗಿತ್ತು.

ಇದನ್ನೂ ಓದಿ: ಮದುವೆ ಫೋಟೋ ಕೊಡದ ಫೋಟೊಗ್ರಾಫರ್​ಗೆ​ ಜಿಲ್ಲಾ ಗ್ರಾಹಕರ ನ್ಯಾಯಾಲಯದಿಂದ ದಂಡ

ಈ ದೂರಿನ ವಿಚಾರಣೆ ನಡೆಸಿದ ಆಯೋಗ ಅಧ್ಯಕ್ಷ ಈಶಪ್ಪ ಭೂತೆ ಹಾಗೂ ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು ಹಿರೇಮಠ, ಹಜ್‌ ಯಾತ್ರೆಯ ಪ್ರಯಾಣದ ವೆಚ್ಚ 3.16 ಲಕ್ಷ ರೂ. ಪಡೆದುಕೊಂಡು ಪ್ರಯಾಣ ಏರ್ಪಡಿಸದೇ, ಹಣವನ್ನು ಸ್ವಂತಕ್ಕಾಗಿ ಬಳಸಿಕೊಂಡು ಹಜ್‌ ಯಾತ್ರೆ ಕೈಗೊಳ್ಳಬೇಕೆನ್ನುವವರ ಆಶಯಕ್ಕೆ ನೀರೆರಚ್ಚಿದ್ದಾರೆಂದು ಅಭಿಪ್ರಾಯಪಟ್ಟಿದ್ದಾರೆ.

ಜೊತೆಗೆ ದೂರುದಾರರು ಸಂದಾಯ ಮಾಡಿದ. 3.16 ಲಕ್ಷ ಹಾಗೂ ಪೂರ್ತಿ ಹಣ ಸಂದಾಯವಾಗುವವರೆಗೆ ಶೇ.8 ರಂತೆ ವಾರ್ಷಿಕ ಬಡ್ಡಿಯನ್ನು ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಕೊಡುವಂತೆ ಆಯೋಗವು ಆದೇಶಿಸಿದೆ. ದೂರುದಾರರಿಗೆ ಆಗಿರುವ ಅನಾನುಕೂಲತೆ ಮತ್ತು ಮಾನಸಿಕ ಹಿಂಸೆಗಾಗಿ 50 ಸಾವಿರ ರೂ. ಪರಿಹಾರ ಹಾಗೂ ಈ ಪ್ರಕರಣದ ವೆಚ್ಚವಾಗಿ 10,000 ರೂ. ನೀಡುವಂತೆ ಟ್ರಾವೆಲ್ಸ್‌ರವರಿಗೆ ಆಯೋಗ ಆದೇಶಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ