AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಒಪ್ಪಂದದಂತೆ ನಿವೇಶನ ಅಭಿವೃದ್ಧಿ ಮಾಡದ ಬಿಲ್ಡರ್‌ಗೆ ದಂಡ ವಿಧಿಸಿದ ಜಿಲ್ಲಾ ಗ್ರಾಹಕರ ಆಯೋಗ

ಒಪ್ಪಂದದಂತೆ ನಿವೇಶನ ಅಭಿವೃದ್ಧಿ ಮಾಡದ ಬಿಲ್ಡರ್ ವಿರುದ್ಧ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ನೀಡಲಾಗಿತ್ತು. ಇದರ ಅನ್ವಯ ವಿಚಾರಣೆ ನಡೆಸಿದ ಆಯೋಗವು ಇಂದು ಬಿಲ್ಡರ್​ಗೆ ದಂಡ ವಿಧಿಸಿ ಆದೇಶಿಸಿದೆ.

ಧಾರವಾಡ: ಒಪ್ಪಂದದಂತೆ ನಿವೇಶನ ಅಭಿವೃದ್ಧಿ ಮಾಡದ ಬಿಲ್ಡರ್‌ಗೆ ದಂಡ ವಿಧಿಸಿದ ಜಿಲ್ಲಾ ಗ್ರಾಹಕರ ಆಯೋಗ
ಒಪ್ಪಂದದಂತೆ ನಿವೇಶನ ಅಭಿವೃದ್ಧಿ ಮಾಡದ ಬಿಲ್ಡರ್‌ಗೆ ದಂಡ ವಿಧಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: Rakesh Nayak Manchi

Updated on: Jul 18, 2023 | 7:32 PM

ಧಾರವಾಡ, ಜುಲೈ 18: ಒಪ್ಪಂದದಂತೆ ನಿವೇಶನ ಅಭಿವೃದ್ಧಿ ಮಾಡದ ಬಿಲ್ಡರ್​ಗೆ ಜಿಲ್ಲಾ ಗ್ರಾಹಕರ ಆಯೋಗವು (Dharwad Consumer Commission) ದಂಡ ವಿಧಿಸಿದೆ. ಮುಂಗಡ ಹಣ 5 ಲಕ್ಷ ರೂ. ಮತ್ತು ಇದಕ್ಕೆ ಶೇ.8 ರಂತೆ ಬಡ್ಡಿ, ಮಾನಸಿಕ ಹಿಂಸೆಗಾಗಿ 50 ಸಾವಿರ ರೂ. ಪರಿಹಾರ ನೀಡುವಂತೆ ಆದೇಶಿಸಿದೆ.

ಹುಬ್ಬಳ್ಳಿಯ ನಗರದ ಮೃತ್ಯುಂಜಯ ಬಡಾವಣೆ ವಿದ್ಯಾನಗರ ನಿವಾಸಿ ಬಸವರಾಜ ಬಸಾಪುರ ಅವರು ಹುಬ್ಬಳ್ಳಿಯ ಪೃಥ್ವಿ ಬಿಲ್ಡರ್ಸ್ ವತಿಯಿಂದ ಅಮರಗೋಳ ಬಡಾವಣೆಯಲ್ಲಿ ಅಭಿವೃದ್ಧಿಪಡಿಸುತ್ತಿರುವ ಲೇಔಟ್​ನಲ್ಲಿ ಪ್ಲಾಟ್ ನಂ. 27 ನ್ನು 9.95 ಲಕ್ಷಕ್ಕೆ ಖರೀದಿಸಿದ್ದರು. ಆ ಪೈಕಿ 5 ಲಕ್ಷ ರೂ. ಮುಂಗಡ ಹಣ ಕೊಟ್ಟು 2015 ರ ಮೇ 29 ರಂದು ಖರೀದಿ ಕರಾರು ಒಪ್ಪಂದ ಮಾಡಿಕೊಂಡಿದ್ದರು. ಆದರೆ ಸಾಕಷ್ಟು ಕಾಲಾವಕಾಶ ನೀಡಿದರೂ ನಿವೇಶನ ಅಭಿವೃದ್ಧಿ ಮಾಡಿರಲಿಲ್ಲ. ಅಷ್ಟೇ ಅಲ್ಲದೆ, ಮುಂಗಡ ಹಣವನ್ನು ಸಹ ವಾಪಸ್ಸು ಕೊಟ್ಟಿರಲಿಲ್ಲ. ಆದ್ದರಿಂದ ಬಿಲ್ಡರ್ ವಿರುದ್ಧ ಗ್ರಾಹಕರ ರಕ್ಷಣಾಕಾಯ್ದೆ ಅಡಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಗ್ರಾಹಕರ ಆಯೋಗಕ್ಕೆ ಬಸವರಾಜ ಅವರು ದೂರು ಸಲ್ಲಿಸಿದ್ದರು.

ಇದನ್ನೂ ಓದಿ: Viral News: ಮಸಾಲೆ ದೋಸೆಯೊಂದಿಗೆ ಸಾಂಬಾರ್ ನೀಡದಿದ್ದಕ್ಕೆ ರೆಸ್ಟೋರೆಂಟ್‌ಗೆ 3,500 ರೂ. ದಂಡ

ಈ ದೂರಿನ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಹಾಗೂ ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು ಹಿರೇಮಠ 2015 ರಲ್ಲಿ ದೂರುದಾರನಿಂದ 5 ಲಕ್ಷ ರೂ. ಹಣ ಪಡೆದುಕೊಂಡು ನಿವೇಶನ ಅಭಿವೃದ್ಧಿ ಮಾಡದೇ ಹಣವನ್ನು ತಮ್ಮ ಸ್ವಂತಕ್ಕೆ ಉಪಯೋಗಿಸಿಕೊಂಡು ದೂರುದಾರರಿಗೆ ಮೋಸ ಎಸಗಿ ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ತೀರ್ಪು ನೀಡಿದ್ದಾರೆ.

ಮುಂಗಡ ಹಣ 5 ಲಕ್ಷ ರೂ. ಮತ್ತು ಅದರ ಮೇಲೆ ಶೇ. 8 ರಂತೆ ಬಡ್ಡಿ ಹಾಕಿ ಒಪ್ಪಂದವಾದ ದಿನದಿಂದ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಕೊಡುವಂತೆ ಆಯೋಗ ಬಿಲ್ಡರ್​ಗೆ ಆದೇಶಿಸಿದೆ. ದೂರುದಾರರಿಗೆ ಆಗಿರುವ ಅನಾನುಕೂಲತೆ ಮತ್ತು ಮಾನಸಿಕ ಹಿಂಸೆಗಾಗಿ 50 ಸಾವಿರ ರೂ. ಪರಿಹಾರ ಹಾಗೂ ಈ ಪ್ರಕರಣದ ಖರ್ಚು ವೆಚ್ಚವೆಂದು 10 ಸಾವಿರ ರೂ. ನೀಡುವಂತೆ ತೀರ್ಪಿನಲ್ಲಿ ಆಯೋಗ ಹೇಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ರಾಜಶೇಖರ್
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ರಾಜಶೇಖರ್
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ
ರಾಮೋಜಿ ಫಿಲ್ಮ್​ಸಿಟಿಯಲ್ಲಿ 16 ಮಹಾನಟಿಯರ ಭರ್ಜರಿ ಫೋಟೋಶೂಟ್
ರಾಮೋಜಿ ಫಿಲ್ಮ್​ಸಿಟಿಯಲ್ಲಿ 16 ಮಹಾನಟಿಯರ ಭರ್ಜರಿ ಫೋಟೋಶೂಟ್
ಸಕಲೇಶಪುರ: ರಸ್ತೆಯಲ್ಲೇ ಕಾಡಾನೆಗಳ ಪರೇಡ್! ಬೆಚ್ಚಿಬಿದ್ದ ಗ್ರಾಮಸ್ಥರು
ಸಕಲೇಶಪುರ: ರಸ್ತೆಯಲ್ಲೇ ಕಾಡಾನೆಗಳ ಪರೇಡ್! ಬೆಚ್ಚಿಬಿದ್ದ ಗ್ರಾಮಸ್ಥರು
ಸಚಿವ ಶಿವರಾಜ್ ತಂಗಡಗಿ ಬೆಂಗಾವಲು ಪಡೆ ವಾಹನ ಅಪಘಾತ, ಇಬ್ಬರಿಗೆ ಗಾಯ
ಸಚಿವ ಶಿವರಾಜ್ ತಂಗಡಗಿ ಬೆಂಗಾವಲು ಪಡೆ ವಾಹನ ಅಪಘಾತ, ಇಬ್ಬರಿಗೆ ಗಾಯ
Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
Daily Devotional: ಈ 5 ವಿಷಯಗಳನ್ನ ಯಾರಿಗೂ ಹೇಳಬಾರದು
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?