AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇವಾ ನ್ಯೂನ್ಯತೆ – ಬಡ್ಡಿ ಸಮೇತ 8 ಲಕ್ಷ ಹಣ ಹಿಂದಿರುಗಿಸಲು ಶೆಲ್ಟರ್ಸ್​​​ ಕಂಪನಿಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಆದೇಶ

Dharwad District Consumer Commission: ವಿಜಯ ಕುಮಾರ ಸಂದಾಯ ಮಾಡಿದ 8 ಲಕ್ಷ 50 ಸಾವಿರ ರೂ. ಮತ್ತು ಅದರ ಮೇಲೆ ಹಣ ನೀಡಿದ ದಿನದಿಂದ ಇಲ್ಲಿಯವರೆಗೆ ಶೇ.8 ರಂತೆ ಬಡ್ಡಿಯಂತೆ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಕೊಡುವಂತೆ ಆಯೋಗ ಆದೇಶಿಸಿದೆ.

ಸೇವಾ ನ್ಯೂನ್ಯತೆ - ಬಡ್ಡಿ ಸಮೇತ 8 ಲಕ್ಷ ಹಣ ಹಿಂದಿರುಗಿಸಲು ಶೆಲ್ಟರ್ಸ್​​​ ಕಂಪನಿಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಆದೇಶ
ಸೇವಾ ನ್ಯೂನ್ಯತೆ ಎಸಗಿದ ಶೆಲ್ಟರ್ಸ್​​​ ಕಂಪನಿಗೆ ಬಡ್ಡಿ ಸಮೇತ 8 ಲಕ್ಷ ಹಣ ಹಿಂದಿರುಗಿಸಲು ಆದೇಶ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Dec 21, 2023 | 3:08 PM

Share

ಹುಬ್ಬಳ್ಳಿಯ ವಿದ್ಯಾನಗರದ ವಿಜಯ ಕುಮಾರ ಬಗಾಡೆ ಎಂಬುವವರು 2013 ರಲ್ಲಿ ಹುಬ್ಬಳ್ಳಿಯ ವಾಣಿಜ್ಯ ಮಳಿಗೆಯಲ್ಲಿ ವ್ಯಾಪಾರ ಮಾಡಲು ಎಸ್. ಎಸ್. ವಿ. ಶೆಲ್ಟರ್ಸ್ ನಿರ್ಮಿಸುತ್ತಿದ್ದ ಹುಬ್ಬಳ್ಳಿ ಸೆಂಟರ್‌ನಲ್ಲಿ ನಂ. 31 ಎ, 165 ಚ. ಅಡಿ ವಿಸ್ತೀರ್ಣದ ಮಳಿಗೆ ಖರೀದಿಸಲು ನಿರ್ಧರಿಸಿದ್ದರು. ಬಳಿಕ ರೂ. 8 ಲಕ್ಷ 50 ಸಾವಿರಗಳಿಗೆ ಫೆಬ್ರವರಿ 21, 2013 ರಂದು ಒಪ್ಪಂದ ಪತ್ರ ಕೂಡ ಮಾಡಿಕೊಂಡಿದ್ದರು. ಈ ಒಪ್ಪಂದದಂತೆ ಎಲ್ಲ ಹಣವನ್ನು ಸಂದಾಯ ಮಾಡಿದ್ದರು. ಒಪ್ಪಂದದ ಪ್ರಕಾರ ನಿಗದಿತ ಅವಧಿಯಲ್ಲಿ ಮಳಿಗೆಯನ್ನು ವಿಜಯ ಕುಮಾರ್ ಅವರ ಸುಪರ್ದಿಗೆ ಕೊಡಲು ಕಂಪನಿ ನಿರಾಕರಿಸಿದೆ. ಖರೀದಿ ಪತ್ರವನ್ನೂ ಕೂಡ ಮಾಡಿಕೊಟ್ಟಿರುವುದಿಲ್ಲ. ಇದರಿಂದ ಬೇಸತ್ತ ವಿಜಯ ಕುಮಾರ್, ಇದು ಗ್ರಾಹಕರ ಸಂರಕ್ಷಣಾ ಕಾಯಿದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಎಂದು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ (Dharwad District Consumer Commission) ದೂರು ಸಲ್ಲಿಸಿದ್ದರು.

ಈ ದೂರಿನ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ, ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಹಾಗೂ ಪ್ರಭು ಹಿರೇಮಠ, 2013 ರಲ್ಲಿ ರೂ.8 ಲಕ್ಷ 50 ಸಾವಿರ ಹಣ ಪಡೆದುಕೊಂಡು ಒಪ್ಪಂದದ ಪ್ರಕಾರ ಖರೀದಿ ಪತ್ರ ಮಾಡಿಕೊಡಬೇಕಿತ್ತು. ಆದರೆ ಹಾಗೆ ಮಾಡದೇ ವಿಜಯ ಕುಮಾರ್ ಅವರಿಗೆ ಮೋಸ ಮಾಡಿ ಎಸ್.ಎಸ್.ವಿ. ಶೆಲ್ಟರ್ಸ್‌ನವರು ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ಅಭಿಪ್ರಾಯಪಟ್ಟು ತೀರ್ಪು ನೀಡಿದ್ದಾರೆ.

ಇದನ್ನೂ ಓದಿ: ಠೇವಣಿ ವಾಪಸ್​ ಕೊಡದ ಬ್ಯಾಂಕ್ ಆಫ್ ಬರೋಡಾ ಶಾಖೆಗೆ 97 ಸಾವಿರ ರೂ ದಂಡ ವಿಧಿಸಿದ ಧಾರವಾಡ ಗ್ರಾಹಕ ವೇದಿಕೆ

ವಿಜಯ ಕುಮಾರ ಸಂದಾಯ ಮಾಡಿದ 8 ಲಕ್ಷ 50 ಸಾವಿರ ರೂ. ಮತ್ತು ಅದರ ಮೇಲೆ ಹಣ ನೀಡಿದ ದಿನದಿಂದ ಇಲ್ಲಿಯವರೆಗೆ ಶೇ.8 ರಂತೆ ಬಡ್ಡಿಯಂತೆ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಕೊಡುವಂತೆ ಆಯೋಗ ಆದೇಶಿಸಿದೆ. ದೂರುದಾರರಿಗೆ ಆಗಿರುವ ಅನಾನುಕೂಲತೆ ಮತ್ತು ಮಾನಸಿಕ ಹಿಂಸೆಗಾಗಿ ರೂ.50,000/- ಪರಿಹಾರ ಹಾಗೂ ಈ ಪ್ರಕರಣದ ಖರ್ಚು ವೆಚ್ಚ ಅಂತಾ ರೂ.10,000/- ನೀಡುವಂತೆ ಎಸ್.ಎಸ್.ವಿ. ಶೆಲ್ಟರ್ಸ್‌ನವರಿಗೆ ಆಯೋಗ ತನ್ನ ತೀರ್ಪಿನಲ್ಲಿ ಹೇಳಿದೆ.

ಮತ್ತಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?