AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ತುರ್ತು ಕಾಮಗಾರಿ, ಈ ಭಾಗದಲ್ಲಿ ಡಿಸೆಂಬರ್ 21 ರಂದು ವಿದ್ಯುತ್ ವ್ಯತ್ಯಯ

ನಗರದ ಕೃಷಿ ವಿ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ. 21 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 4 ಗಂಟೆಯವರೆಗೆ  ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನಿರ್ವಹಣೆ ಕಾಮಗಾರಿ ನಡೆಯಲಿದ್ದು, ಈ ಹಿನ್ನಲೆ ಈ ಸ್ಥಳಗಳಲ್ಲಿ ಅಂದು ವಿದ್ಯುತ್​ ವ್ಯತ್ಯಯವಾಗಲಿದೆ.

ಧಾರವಾಡ: ತುರ್ತು ಕಾಮಗಾರಿ, ಈ ಭಾಗದಲ್ಲಿ ಡಿಸೆಂಬರ್ 21 ರಂದು ವಿದ್ಯುತ್ ವ್ಯತ್ಯಯ
ಧಾರವಾಡ ವಿದ್ಯುತ್​​ ವ್ಯತ್ಯಯ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Dec 20, 2023 | 3:47 PM

Share

ಧಾರವಾಡ, ಡಿ.20: ನಗರದ ಕೃಷಿ ವಿ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ. 21 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 4 ಗಂಟೆಯವರೆಗೆ  ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ನಿರ್ವಹಣೆ ಕಾಮಗಾರಿ ನಡೆಯಲಿದ್ದು, ಈ ಹಿನ್ನಲೆ ಅಂದು(ಡಿ.21) ಈ ಕೆಳಗಿನ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು

ನಗರದ ಎತ್ತಿನಗುಡ್ಡ, ಕೃಷಿ ವಿಶ್ವವಿದ್ಯಾಲಯ ಆವರಣ, ಕುಮಾರೇಶ್ವರ ನಗರ, ಸೈದಾಪುರ, ಬೆಳಗಾವಿ ಮುಖ್ಯ ರಸ್ತೆ, ನಾರಾಯಣಪುರ, ಸಿ.ಐ.ಟಿ. ಶ್ರೀ ಬಿ. ಕೆ.ಎಚ್.ಬಿ ಕಾಲೋನಿ, ಸಂಪಿಗೆ ನಗರ, ತಾವರಗೇರಿ ಹಾಸ್ಪಿಟಲ್, ಸನ್ಮತಿ ನಗರ, ಜಿ.ಟಿ.ಸಿ ಕ್ಯಾಂಪಸ್, ಮೆಹಬೂಬ ನಗರ, ಹಶ್ಮಿ ನಗರ, ಮಾಳಾಪುರ, ಏರ್‌ಟೆಕ್, ಜಯಲಕ್ಷ್ಮೀ ಇಂಡಸ್ಟ್ರಿಸ್, ಬಸವ ಕಾಲೋನಿ, ಪವರ್ ಗ್ರಿಡ್, ಪೆಪ್ಪಿ ಕಾರ್ಖಾನೆ, ಕಿಲ್ಲಾ, ಸಾಧುನವರ ಎಸ್ಟೇಟ್, ನರೇಂದ್ರ, ಮಮ್ಮಿಗಟ್ಟಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಲಿದೆ.

ಇದನ್ನೂ ಓದಿ:KPTCL ಹೈಟೆನ್ಷನ್ ಲೈನ್ ಕೆಳಗೆ ಮಸೀದಿ ನಿರ್ಮಾಣ: ತೆರವಿಗೆ ಹಿಂದೂ ಸಂಘಟನೆಗಳು ಪಟ್ಟು, ಕಟ್ಟಡ ನೆಲಸಮಕ್ಕೆ ಬಿಬಿಎಂಪಿ ಸೂಚನೆ

ಚಿಕ್ಕಮಲ್ಲಿಗವಾಡ, ಹಿರೇಮಲ್ಲಿಗವಾಡ, – ಶಿರಡಿನಗರ, ತಾಜನಗರ, ಬಿ.ಎಸ್. ಕೆ ಬಡಾವಣೆ, ಮಾಳಾಪುರ ಲಾಸ್ಟ್ ಬಸ್ ಸ್ಟಾಪ್, ರಾಜನಗರ, ತಮದಂಡಿ ಪ್ಲಾಟ್, ಹರಿಜನ ಕೇರಿ, ಎಪಿಎಂಸಿ, ಫೈರ್ ಸ್ಟೇಷನ್, ರಾಮನಗೌಡ ಹಾಸ್ಪಿಟಲ್, ದುರ್ಗಾದೇವಿ ದೇವಸ್ಥಾನ, ಮರಾಠಾ ಕಾಲೋನಿ, ಕೊಪ್ಪದಕೇರಿ, ಗುಲಗಂಜಿಕೊಪ್ಪ, ಎಂ.ಬಿ. ನಗರ, ಸಿವಿಲ್ ಹಾಸ್ಪಿಟಲ್, ನಿತಿನ್ ನಗರ, ಹಳೆಯ ಎಸ್.ಪಿ. ವೃತ್ತ, ಲಕ್ಷ್ಮೀ ಗುಡಿ, ಪೋಲಿಸ್ ಹೆಡ್ ಕ್ವಾಟರ್ಸ್‌ ಪ್ರದೇಶ, ಬೇಂದ್ರೆ ನಗರ, ಹಿರೇಮಠ ಬಡಾವಣೆ, ಐಶ್ವರ್ಯ ನ್ಯಾನೋಸಿಟಿ, ನಂದಿ ಹೈವೇ ಬೈಪಾಸ್, ಮಲ್ಲಿಗೆ ನಗರ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:46 pm, Wed, 20 December 23

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More