AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ ರೈತರಿಗೂ ಶುರುವಾಯ್ತು ವಕ್ಫ್‌ ನಡುಕ: ಪಹಣಿಯಲ್ಲಿ ವಕ್ಫ್‌ ಬೋರ್ಡ್‌ ಹೆಸರು ಉಲ್ಲೇಖ

ವಿಜಯಪುರ ಜಿಲ್ಲೆ ಹೊನವಾಡ ಗ್ರಾಮದ 12000 ಎಕರೆ ವಕ್ಫ್‌ಬೋರ್ಡ್‌ ಹೆಸರಿನಲ್ಲಿದೆ ಎಂಬ ಆರೋಪ ಕೇಳಿಬಂದಿತ್ತು. ಒಬ್ಬರ ಬಳಿಕ ಒಬ್ಬರಿಗೆ ನೋಟಿಸ್‌ ಬರುತ್ತಿದ್ದಂತೆ ರೈತರು ಆತಂಕಗೊಂಡಿದ್ದಾರೆ. ಇದೀಗ ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿ ಗ್ರಾಮದ ರೈತರಿಗೂ ವಕ್ಫ್‌ ಭಯ ಶುರುವಾಗಿದೆ. ಧಾರವಾಡ ರೈತರ ವಕ್ಫ್ ಭೀತಿ ಕುರಿತ ವಿವರ ಇಲ್ಲಿದೆ.

ಧಾರವಾಡ ರೈತರಿಗೂ ಶುರುವಾಯ್ತು ವಕ್ಫ್‌ ನಡುಕ: ಪಹಣಿಯಲ್ಲಿ ವಕ್ಫ್‌ ಬೋರ್ಡ್‌ ಹೆಸರು ಉಲ್ಲೇಖ
ಧಾರವಾಡ ರೈತರಿಗೂ ಶುರುವಾಯ್ತು ವಕ್ಫ್‌ ನಡುಕ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Oct 31, 2024 | 7:11 AM

Share

ಧಾರವಾಡ, ಅಕ್ಟೋಬರ್ 29: ದೇಶಾದ್ಯಂತ ಸದ್ದು ಮಾಡುತ್ತಿರುವ ವಕ್ಫ್ ಕಾಯ್ದೆಯ ಬಿಸಿ ಇದೀಗ ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿ ಗ್ರಾಮಕ್ಕೂ ತಟ್ಟಿದೆ. ಇಲ್ಲಿನ ಕೆಲ ರೈತರ ಜಮೀನಿನ ಪಹಣಿಯಲ್ಲಿ ಕೆಲವು ವರ್ಷಗಳ ಹಿಂದೆಯೇ ವಕ್ಫ್ ಹೆಸರು ದಾಖಲಾಗಿರುವುದು ಬೆಳಕಿಗೆ ಬಂದಿದೆ. ನೂರಾರು ವರ್ಷಗಳಿಂದ ಪಿತ್ರಾರ್ಜಿತವಾಗಿ ಬಂದಿರುವ ರೈತರ ಹೊಲಗಳ ಪಹಣಿಯ 11ನೇ ಇತರ ಹಕ್ಕುಗಳು ಮತ್ತು ಋಣಗಳು ಕಾಲಂನಲ್ಲಿ ‘ಸದರಿ ಜಮೀನು ವಕ್ಫ್ ಆಸ್ತಿಗೆ ಒಳಪಟ್ಟಿರುತ್ತದೆ’ ಎಂದು ದಾಖಲಾಗಿದೆ. ತಮ್ಮ ಪಿತ್ರಾರ್ಜಿತ ಆಸ್ತಿಯಾದ ಜಮೀನಿನ ಪಹಣಿಯಲ್ಲಿ ‘ವಕ್ಫ್’ ಹೆಸರು ದಾಖಲಾಗಿರುವುದು ಸಂಬಂಧಪಟ್ಟ ರೈತರಿಗೆ ದಿಗಿಲು ಹುಟ್ಟಿಸಿದೆ.

ಉಪ್ಪಿನಬೆಟಗೇರಿ ಗ್ರಾಮದ ಸರ್ವೆ ನಂಬರ್ 20 ರಲ್ಲಿ ರೈತರಾದ ಮರಬಸಪ್ಪ ತಂದೆ ಮಲ್ಲಪ್ಪ ಮಸೂತಿ ಹಾಗೂ ಶ್ರೀಶೈಲ ತಂದೆ ಮಲ್ಲಪ್ಪ ಮಸೂತಿ ಇವರ ಜಮೀನಿನ 3 ಎಕರೆ 13 ಗುಂಟೆಯ ಜಂಟಿ ಪಹಣಿಯಲ್ಲಿ ಹಾಗೂ ಸರ್ವೆ ನಂಬರ್ 141 ರ ಹಿಸ್ಸಾ 2 ರಲ್ಲಿ ಜವಳಗಿ ಬಾಳಪ್ಪ ರುದ್ರಪ್ಪ ಇವರ ಹೆಸರಿನ 26 ಗುಂಟೆ, ಇದೇ ಸರ್ವೆ ನಂಬರಿನ ಹಿಸ್ಸಾ 3 ರಲ್ಲಿ ಜವಳಗಿ ಸರೋಜಾ ಕರಬಸಪ್ಪ ಇವರ ಹೆಸರಿನ 2 ಎಕರೆ 12 ಗುಂಟೆ ಮತ್ತು ಹಿಸ್ಸಾ 4 ರಲ್ಲಿ ಜವಳಗಿ ಗಂಗಪ್ಪ ರುದ್ರಪ್ಪ ಇವರ ಹೆಸರಿನ 3 ಎಕರೆ 21 ಗುಂಟೆ ಜಮೀನಿನ ಪಹಣಿಯಲ್ಲಿ ‘ವಕ್ಫ್ ಆಸ್ತಿ’ ಎಂದು ದಾಖಲಾಗಿದೆ. ಇದನ್ನು ನೋಡಿದ ರೈತರು ಮುಂದೇನು ಮಾಡಬೇಕು ಎಂದು ತೋಚದೇ ತೊಳಲಾಡುತ್ತಿದ್ದಾರೆ. ವಕ್ಫ್ ಎಂದರೇನು? ಅದೆಲ್ಲಿದೆ? ನಮ್ಮ ಜಮೀನಿನ ಪಹಣಿಯಲ್ಲಿ ಅದರ ಹೆಸರೇಕಿದೆ? ಎಂದು ಮುಗ್ಧ ರೈತರು ತಿಳಿದವರನ್ನು ಪ್ರಶ್ನೆ ಮಾಡುತ್ತಿದ್ದಾರೆ.

ಈ ಅವಾಂತರವನ್ನು ಸರಿಪಡಿಸುವ ಕುರಿತು ಈಗಾಗಲೇ ರೈತರು ತಹಶೀಲ್ದಾರ್ ಹಾಗೂ ಧಾರವಾಡ ಜಿಲ್ಲಾ ವಕ್ಫ್ ಅಧಿಕಾರಿಗಳಿಗೆ ಲಿಖಿತವಾಗಿ ದಾಖಲೆ ಸಮೇತ ಅರ್ಜಿ ಸಲ್ಲಿಸಿದ್ದಾರೆ. ಆದರೆ ಅದರಿಂದ ಯಾವುದೇ ಪ್ರಯೋಜನವಾಗಿಲ್ಲ. ತಹಶೀಲ್ದಾರ್ ಕಚೇರಿ ಸಂಪರ್ಕಿಸಿದರೆ ವಕ್ಫ್ ಕಚೇರಿಯಲ್ಲಿ ಕೇಳಿ ಎನ್ನುತ್ತಿದ್ದಾರೆ. ಇನ್ನು ಜಿಲ್ಲಾ ವಕ್ಫ್ ಕಚೇರಿ ಸಂಪರ್ಕಿಸಿದರೆ ತಹಶೀಲ್ದಾರ್ ಕಚೇರಿಯಲ್ಲಿ ವಿಚಾರಿಸಿ ಎನ್ನುತ್ತಿದ್ದಾರೆ. ಅವರನ್ನು ಕೇಳಿದರೆ ಇವರು, ಇವರನ್ನು ಕೇಳಿದರೆ ಅವರು ಎಂದು ತಮ್ಮನ್ನು ಅಲೆದಾಡಿಸುತ್ತಿದ್ದಾರೆ ಎಂಬುದು ರೈತರ ಆರೋಪ. ಪಿತ್ರಾರ್ಜಿತವಾಗಿ ಬಂದಿರುವ ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದಾದರೆ ಮುಂದೇನು ಮಾಡಬೇಕೆಂದು ತಿಳಿಯದೇ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರ ಸಮಸ್ಯೆಯಷ್ಟೇ ಅಲ್ಲ!

ಇದು ಕೇವಲ ಈ ರೈತರದ್ದಷ್ಟೇ ಸಮಸ್ಯೆಯಲ್ಲ. ಬದಲಿಗೆ ಜಿಲ್ಲೆಯಲ್ಲಿ ಇಂಥ ಅನೇಕ ಪ್ರಕರಣಗಳು ನಡೆದಿದ್ದು, ಬಹುತೇಕ ಪ್ರಕರಣಗಳು ರೈತರ ಗಮನಕ್ಕೆ ಬಂದಿಲ್ಲ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಆತಂಕಗೊಂಡಿರುವ ರೈತರು ಇದೀಗ ತಮ್ಮ ಪಹಣಿಗಳನ್ನು ಪರಿಶೀಲಿಸಲು ಸಂಬಂಧಿಸಿದ ಕಚೇರಿಗಳತ್ತ ದೌಡಾಯಿಸುತ್ತಿದ್ದಾರೆ. ಒಟ್ಟಿನಲ್ಲಿ ತಮ್ಮದಲ್ಲದ ತಪ್ಪಿಗೆ ರೈತರು ಪರದಾಡುವಂತಾಗಿದೆ.

ಪರಿಶೀಲನೆ ಹೆಸರಲ್ಲೇ ಬಿಜೆಪಿ ಬಿಗ್‌ ಹೈಡ್ರಾಮಾ

ಪಹಣಿಯಲ್ಲಿ ವಕ್ಫ್‌ ಹೆಸರು ಬಂದಿರುವುದನ್ನೇ ಅಸ್ತ್ರ ಮಾಡಿಕೊಂಡಿರುವ ಬಿಜೆಪಿ, ಪರಿಶೀಲನೆಗೆಂದೇ ಒಂದು ತಂಡ ರಚಿಸಿದೆ. ಆ ತಂಡ ಇಂದು ವಿಜಯಪುರಕ್ಕೆ ಆಗಮಿಸಲಿದೆ. ತಂಡದಲ್ಲಿ ಸಂಸದ ರಮೇಶ್‌ ಜಿಗಜಿಣಗಿ ಹಾಗೂ ಶಾಸಕ ಯತ್ನಾಳ್‌ ಹೆಸರಿಲ್ಲ. ಇದರಿಂದ ಕೆರಳಿರುವ ಯತ್ನಾಳ್‌, ಇದು ವಿಜಯೇಂದ್ರ ಟೀಂ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ವಿಜಯಪುರದಲ್ಲಿ ವಕ್ಫ್‌​ನ ಒಟ್ಟು ಆಸ್ತಿಪಾಸ್ತಿ ಎಷ್ಟಿದೆ? ಎಳೆ ಎಳೆಯಾಗಿ ಬಿಚ್ಚಿಟ್ಟ ಕಂದಾಯ ಸಚಿವ

ಯತ್ನಾಳ್ ಆಕ್ರೋಶದ ಬೆನ್ನಲ್ಲೇ ಪರಿಶೀಲನಾ ತಂಡವನ್ನ ಪುನರ್‌ ರಚಿಸಲಾಗಿದ್ದು, ಗೋವಿಂದ್ ಕಾರಜೋಳ, ಶಾಸಕ ಹರೀಶ್ ಪೂಂಜಾ, ಶಾಸಕ ಮಹೇಶ ಟೆಂಗಿನಕಾಯಿ ಹೆಸರಿನ ಜತೆಗೆ ಜಿಗಜಿಣಗಿ ಹಾಗೂ ಯತ್ನಾಳ್‌ ಹೆಸರು ಸೇರ್ಪಡೆ ಮಾಡಲಾಗಿದೆ.

ನೋಟಿಸ್‌ ವಾಪಸ್‌ ಪಡೆಯುತ್ತೇವೆ ಎಂದ ಸಚಿವ

ವಕ್ಫ್‌ ವಿವಾದ ದಿನದಿಂದ ದಿನಕ್ಕೆ ದೊಡ್ಡದಾಗುತ್ತಿದ್ದಂತೆಯೇ ಸರ್ಕಾರ ಎಚ್ಚೆತ್ತುಕೊಂಡಿದೆ. ಕಂದಾಯ ಸಚಿವ ಕೃಷ್ಣೇಭೈರೇಗೌಡ, ಜಮೀರ್‌ ಅಹ್ಮದ್, ಎಂಬಿ ಪಾಟೀಲ್‌ ಸೋಮವಾರ ಸುದ್ದಿಗೋಷ್ಠಿ ನಡೆಸಿದರು. 121 ನೋಟಿಸ್​ಗಳನ್ನು ನೀಡಿರುವುದು ನಿಜ. ಇದನ್ನು ವಾಪಸ್ ಪಡೆಯುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:56 am, Tue, 29 October 24

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ