AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಯದ ಮೇಲೆ ಬರೆ: ಸಂಕಷ್ಟದಲ್ಲಿರುವ ಧಾರವಾಡದ ರೈತರಿಗೆ ಬ್ಯಾಂಕ್​ನಿಂದ ನೋಟಿಸ್​!

ಧಾರವಾಡ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ ನವಲಗುಂದ ತಾಲೂಕಿನ ರೈತರ ಬೆಳೆ ಹಾನಿಯಾಗಿದೆ. ಈ ನಡುವೆ, ಮೊರಬ ಗ್ರಾಮದ ರೈತರಿಗೆ ಬ್ಯಾಂಕ್ ಆಫ್ ಬರೋಡಾ ಸಾಲ ಮರುಪಾವತಿ ನೋಟೀಸ್ ನೀಡಿದೆ. ಹೀಗಾಗಿ ರೈತರು ಸರ್ಕಾರದಿಂದ ಸಹಾಯ ಕೋರುತ್ತಿದ್ದಾರೆ. ಸರ್ಕಾರ ರೈತರ ಸಾಲ ಮನ್ನಾ ಮಾಡಿ ಅವರನ್ನು ಬೆಂಬಲಿಸಬೇಕೆಂಬುದು ರೈತ ಮುಖಂಡರು ಆಗ್ರಹಿಸಿದ್ದಾರೆ.

ಗಾಯದ ಮೇಲೆ ಬರೆ: ಸಂಕಷ್ಟದಲ್ಲಿರುವ ಧಾರವಾಡದ ರೈತರಿಗೆ ಬ್ಯಾಂಕ್​ನಿಂದ ನೋಟಿಸ್​!
ರೈತರಿಗೆ ನೋಟೀಸ್​
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: ವಿವೇಕ ಬಿರಾದಾರ|

Updated on: Jul 01, 2025 | 7:32 PM

Share

ಧಾರವಾಡ, ಜುಲೈ 01: ಧಾರವಾಡ (Dharwad) ಜಿಲ್ಲೆಯಾದ್ಯಂತ ವಾಡಿಕೆಗಿಂತಲೂ ಅಧಿಕ ಮಳೆಯಾಗುತ್ತಿದೆ. ಇದರಿಂದ ನವಲಗುಂದ (Navalgund) ತಾಲೂಕಿನಾದ್ಯಂತ ಮಳೆಗೆ ಬೆಳೆ ಹಾಳಾಗಿದೆ. ಇದರ ಮಧ್ಯೆ ನವಲಗುಂದ ತಾಲೂಕಿನ ಮೊರಬ ಗ್ರಾಮದ ರೈತರಿಗೆ ಬ್ಯಾಂಕ್ ಆಫ್ ಬರೋಡಾ ಶಾಕ್ ನೀಡಿದೆ. ಮೊರಬ ಗ್ರಾಮದ ರೈತರಿಗೆ ಬ್ಯಾಂಕ್​ನವರು ಸಾಲ ಮರುಪಾವತಿ ಮಾಡುವಂತೆ ನೋಟಿಸ್​ ನೀಡುತ್ತಿದ್ದಾರೆ. ಮೊರಬ ಗ್ರಾಮದ ರೈತರು ಕೃಷಿ ಚಟುವಟಿಕೆಗಾಗಿ ಬ್ಯಾಂಕ್ ಆಫ್ ಬರೋಡಾದಲ್ಲಿ ಸಾಲ ಪಡೆದಿದ್ದಾರೆ. ಕೆಲ ವರ್ಷ ಬಡ್ಡಿ ಸಹ ತುಂಬಿ ಬ್ಯಾಂಕಿನಲ್ಲಿ ತಮ್ಮ ವ್ಯವಹಾರಕ್ಕೆ ತೊಂದರೆಯಾಗದಂತೆ ನೋಡಿಕೊಂಡಿದ್ದರು. ಆದರೆ, ಇತ್ತೀಚಿಗೆ ರೈತರು ಸಾಲ ಮರುಪಾವತಿ ಮಾಡಿರಲಿಲ್ಲ.

ಅತಿವೃಷ್ಟಿ ಮತ್ತು ಅನಾವೃಷ್ಟಿಯಾಗಿ ಬೆಳೆ ಬಾರದ ಹಿನ್ನೆಲೆಯಲ್ಲಿ ಹಣ ಇಲ್ಲದೆ ರೈತರು ಸಾಲ ಮರುಪಾವತಿ ಮಾಡಿಲ್ಲ. ಸಾಲ ಮರುಪಾವತಿ ಮಾಡುವಂತೆ ಹಾಗೂ ಬಾಕಿ ತುಂಬುವಂತೆ ಬ್ಯಾಂಕ್​ನವರು ರೈತರಿಗೆ ನೋಟಿಸ್ ನೀಡುತ್ತಿದ್ದಾರೆ. ಹೀಗಾಗಿ, ಮೊರಬ ಗ್ರಾಮದ ರೈತರು ಆತಂಕಕ್ಕೀಡಾಗಿದ್ದಾರೆ. ಜೊತೆಗೆ ನೋಟಿಸ್ ವಾಪಸ್ ಪಡೆಯುವಂತೆ ಬ್ಯಾಂಕ್‌ಗೆ ನಿರ್ದೇಶನ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತಿದ್ದಾರೆ.

ನವಲಗುಂದ ಭಾಗದ ರೈತರು ಮಳೆಯಿಂದ ಬೆಳೆ ನಷ್ಟ ಅನುಭವಿಸಿದ್ದಾರೆ. ಬೆಳೆದ ಬೆಳೆ ನೀರು ಪಾಲಾಗಿದೆ. ಮತ್ತೆ ಬಿತ್ತಬೇಕು ಎಂದರೆ ಭೂಮಿ ಹದ ಇಲ್ಲ. ಇದರ ಜೊತೆಗೆ ಬೀಜ ಮತ್ತು ಗೊಬ್ಬರಕ್ಕಾಗಿ ರೈತರು ಮತ್ತೆ ಸಾಲ ಮಾಡಲೇಬೇಕು. ಹೀಗಿರುವಾಗ ಸಾಲ ಮರುಪಾವತಿ ಮಾಡುವಂತೆ ನೋಟಿಸ್ ಬಂದಿರುವುದು ರೈತರನ್ನು ನಿಜಕ್ಕೂ ಆತಂಕಕ್ಕೀಡು ಮಾಡಿದೆ. ಹೀಗಾಗಿ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಿ ರೈತರ ಪರ ನಿಲ್ಲಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರೈತರಿಗಾಗಿ ಏನನ್ನೂ ಮಾಡಿಲ್ಲ. ಸದ್ಯ ಕಷ್ಟದಲ್ಲಿರುವ ರೈತರ ಸಾಲವನ್ನಾದರೂ ಮನ್ನಾ ಮಾಡಿ ರೈತರ ಪರ ನಿಲ್ಲಬೇಕು ಎಂದು ರೈತ ಮುಖಂಡರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ
Image
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ: ಭದ್ರತೆ ಹೆಚ್ಚಳ
Image
ಆಷಾಢ ಏಕಾದಶಿ ಪ್ರಯುಕ್ತ ಎರಡು ವಿಶೇಷ ರೈಲು: ಇಲ್ಲಿದೆ ಸಂಚಾರ ವೇಳಾಪಟ್ಟಿ
Image
ಬಾಹ್ಯಾಕಾಶಕ್ಕೆ ಧಾರವಾಡದ ಮೆಂತ್ಯ, ಹಸಿರು ಕಾಳು ಹೋಗಲು ಕಾರಣ ಇಲ್ಲಿದೆ
Image
ಮಳೆ ಬರುತ್ತೆ ಅಂದ್ರೆ ಮಕ್ಕಳು ಶಾಲೆಗೆ, ಜನ್ರು ಕೆಲಸಕ್ಕೆ ಹೋಗುವುದೇ ಇಲ್ಲಾ

ಇದನ್ನೂ ಓದಿ: ಜು.1ರಂದು ಧಾರವಾಡದಲ್ಲಿ ಹುತಾತ್ಮ ದಿನ ಆಚರಣೆ ಆಚರಿಸುವುದ್ಯಾಕೆ? ಇದಕ್ಕಿದೆ ಬ್ರಿಟಿಷರ ಲಿಂಕ್

ಈಗಾಗಲೇ ಹಲವಾರು ಸಮಸ್ಯೆಗಳಿಂದ ಕಂಗೆಟ್ಟಿರುವ ರೈತರು ಇದೀಗ ಈ ಬ್ಯಾಂಕುಗಳ ನೋಟಿಸ್​ಗಳಿಂದ ಆಕ್ರೋಶಗೊಂಡಿದ್ದಾರೆ. ಒಟ್ಟಾರೆಯಾಗಿ ಧಾರವಾಡ ಜಿಲ್ಲೆಯ ರೈತರಿಗೆ ‌ಬ್ಯಾಂಕ್​ಗಳು ಅಕ್ಷರಶಃ ಗಾಯದ ಮೇಲೆ ಬರೆ ಎಳೆದಂತೆ ಮಾಡಿವೆ. ಇಂಥ ಸಂದರ್ಭದಲ್ಲಿ ಸರ್ಕಾರ ರೈತರ ಬೆನ್ನೆಲುಬಿಗೆ ನಿಲ್ಲುವ ಕೆಲಸ ಮಾಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು