ಧಾರವಾಡ: ನೀರಿಲ್ಲ, ಮೇವಿಲ್ಲ ಜಾನುವಾರು ಮಾರಲು ಹೋದರು ಖರೀದಿಸುವವರಿಲ್ಲ, ಅನ್ನದಾತನ ಕಣ್ಣೀರು ವರಿಸುವವರ‍್ಯಾರು?

ರಾಜ್ಯದಲ್ಲಿ ಈ ಬಾರಿ ಭಾರೀ ಬರ ಆವರಿಸಿದೆ. ಇದರಿಂದಾಗಿ ಎಲ್ಲೆಡೆ ಈಗಾಗಲೇ ಹಾಹಾಕಾರ ಎದ್ದಿದೆ. ಈ ಮಧ್ಯೆ ರೈತರಿಗೆ ಮತ್ತೊಂದು ಸಮಸ್ಯೆ ಎದುರಾಗಿದೆ. ಮೇವು, ನೀರಿನ ಬರದ ನಡುವೆ ಜಾನುವಾರುಗಳನ್ನು ಸಾಕಣೆ ಮಾಡೋದು ಕಷ್ಟವಾಗಿದೆ. ಇದರಿಂದಾಗಿ ಜಾನುವಾರು ಮಾರಾಟ ಮಾಡಲು ಹೋದರೆ ಅಲ್ಲಿ ಮತ್ತೊಂದು ಸಮಸ್ಯೆ ಎದುರಾಗಿದೆ.

ಧಾರವಾಡ: ನೀರಿಲ್ಲ, ಮೇವಿಲ್ಲ ಜಾನುವಾರು ಮಾರಲು ಹೋದರು ಖರೀದಿಸುವವರಿಲ್ಲ, ಅನ್ನದಾತನ ಕಣ್ಣೀರು ವರಿಸುವವರ‍್ಯಾರು?
ಬರ ಹಿನ್ನೆಲೆ ರೈತರು ಸಂಕಷ್ಟದಲ್ಲಿ
Edited By: ಆಯೇಷಾ ಬಾನು

Updated on: Sep 27, 2023 | 3:17 PM

ಧಾರವಾಡ, ಸೆ.27: ರಾಜ್ಯದಲ್ಲಿ ಮಳೆ ಕೈಗೊಟ್ಟಿದೆ. ಹಲವು ಜಿಲ್ಲೆಗಳಲ್ಲಿ ಬರ (Drought) ತಾಂಡವವಾಡುತ್ತಿದೆ. ಹನಿ ನೀರಿಗೂ ಪರದಾಡೊ ಸ್ಥಿತಿ ನಿರ್ಮಾಣವಾಗುತ್ತಿದೆ. ಸಾಕು ಪ್ರಾಣಿಗಳಿಗೂ ತಿನ್ನಲು ಮೇವಿಲ್ಲ, ಕುಡಿಯೋದಕ್ಕೂ ನೀರಿಲ್ಲ. ಬರದ ಛಾಯೆ ನಡುವೆ ಅನ್ನದಾತರಿಗೆ (Farmers) ಮತ್ತೊಂದು ಸಂಕಷ್ಟ ಎದುರಾಗಿದೆ. ಧಾರವಾಡದ ಮಾಳಾಪುರ ಬಡಾವಣೆಯಲ್ಲಿ ಪ್ರತಿ ಮಂಗಳವಾರ ಜಾನುವಾರುಗಳ ಸಂತೆ ನಡೆಯುತ್ತೆ. ಆದರೆ ಸಂತೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜಾನುವಾರುಗಳು ಕಂಡು ಬರುತ್ತಿವೆ. ಯಾಕಂದ್ರೆ ಬರದಿಂದ ಕಂಗಾಲಾಗಿರೋ ರೈತರು ಜಾನುವಾರುಗಳನ್ನು ಸಾಕಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಹಸುಗಳನ್ನ ಮಾರುತ್ತಿದ್ದಾರೆ.

ಧಾರವಾಡದಲ್ಲಿ ಮೇವು ಹಾಗೂ ನೀರಿನ ಅಭಾವ ಹೆಚ್ಚಾಗಿದೆ. ಹಾಲು ಕರೆಯುವ ಒಂದು ರಾಸುವಿಗೆ ಮೇವು, ಹಿಂಡಿ, ಬೂಸಾ ಸೇರಿದಂತೆ ಇತರ ಖರ್ಚಿಗೆ 300 ರೂಪಾಯಿ ಖರ್ಚಾಗುತ್ತದೆ. ಆದರೆ ಪ್ರತಿ ದಿನ 6 ರಿಂದ 8 ಲೀಟರ್ ಹಾಲು ಉತ್ಪಾದಿಸಿ ಡೇರಿಗೆ ಮಾರಿದರೆ ಕೇವಲ 250 ರೂಪಾಯಿ ಆದಾಯ ದೊರಕುತ್ತಿದೆ. ಇದರಿಂದ ಹೈನುಗಾರರು ತಮ್ಮ ಹಾಲು ಕರೆಯುವ ಹಸುಗಳನ್ನು ಕೂಡ ಸಂತೆಗಳಲ್ಲಿ ಮಾರಾಟ ಮಾಡುತ್ತಿದ್ದಾರೆ. ಜಾನುವಾರುಗಳನ್ನು ಮಾರಾಟಕ್ಕೆ ತಂದರೆ ಅರ್ಧಕ್ಕಿಂತ ಕಡಿಮೆ ಬೆಲೆಗೆ ಕೇಳಲಾಗುತ್ತಿದೆ ಅನ್ನೋದು ರೈತರ ನೋವು.

ಇದನ್ನೂ ಓದಿ: ಮಳೆ ಕೊರತೆ; ಹೊರ ರಾಜ್ಯಗಳಿಗೆ ಮೇವು ಸಾಗಾಟ ನಿಷೇಧಿಸಿದ ಕರ್ನಾಟಕ

ಗ್ರಾಮೀಣ ಭಾಗದಲ್ಲಿ ಜಾನುವಾರು ಸಾಕಿದವರ ಸಮಸ್ಯೆ ಹೇಳತೀರದಾಗಿದೆ. ಹಸುಗಳಿಗೆ ಮೇವು ಇಲ್ಲದೇ ರೈತರು ಪರದಾಡುತ್ತಿದ್ದರೆ. ಮೇವು ಖರೀದಿಸಿ ಜಾನುವಾರುಗಳನ್ನು ರಕ್ಷಿಸಿಕೊಳ್ಳೋಣ ಅಂದರೆ ಎಲ್ಲಿಯೂ ಮೇವು ಸಿಗತ್ತಿಲ್ಲ. ಈ ಬಾರಿ ಬರದಿಂದಾಗಿ ರೈತರಲ್ಲಿನ ಆರ್ಥಿಕ ಶಕ್ತಿಯೂ ತೀರಾನೇ ಕುಗ್ಗಿ ಹೋಗಿದೆ. ಹೀಗಾಗಿ ಎತ್ತು, ಎಮ್ಮೆ, ಆಕಳು ಸೇರಿದಂತೆ ಎಲ್ಲ ಬಗೆಯ ಜಾನುವಾರುಗಳನ್ನು ರೈತರು ಸಂತೆಗೆ ತಂದು ಮಾರ್ತಿದ್ದಾರೆ. ಆದ್ರೆ ಹಸುಗಳನ್ನ ಖರೀದಿ ಮಾಡಲು ಜನರು ಮುಂದಾಗುತ್ತಿಲ್ಲ. ಹೀಗಾಗಿ ರೈತರು ದಿಕ್ಕೇ ತೋಚದೆ ಕೂತಿದ್ದಾರೆ. ರೈತರ ಸಂಕಷ್ಟದ ಬಗ್ಗೆ ಉಸ್ತುವಾರಿ ಸಚಿವರನ್ನ ಕೇಳಿದ್ರೆ ಕ್ರಮ ಕೈಗೊಳ್ಳುತ್ತೇವೆ ಅಂತಾ ಹೇಳಿದ್ದಾರೆ.

ರಾಜ್ಯದಲ್ಲಿ ಸರಿಯಾಗಿ ಮಳೆಯಾಗದೆ ಅನ್ನದಾತರ ಬದುಕು ಬೀದಿಗೆ ಬಂದಿದೆ. ಬೆಳೆ ಸರ್ವನಾಶ ಆಗಿದ್ರೆ, ಇತ್ತ ಸಾಕಿರೋ ಪ್ರಾಣಿಗಳನ್ನು ಉಳಿಸಿಕೊಳ್ಳಲು ರೈತರು ಸಂಕಷ್ಟದ ಸುಳಿಗೆ ಸಿಲುಕಿದ್ದಾರೆ. ಇನ್ನಾದ್ರೂ ಸರ್ಕಾರ ನೇಗಿಲಯೋಗಿ ಕಣ್ಣೀರು ಒರೆಸಬೇಕಿದೆ.

ಧಾರವಾಡಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಕಿಕ್ ಮಾಡಿ

Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
Follow Us