AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ‌ ನಡ್ಡಾ ಮೇಲಿನ ಪ್ರಕರಣಕ್ಕೆ ಮಧ್ಯಂತರ ತಡೆ: ಧಾರವಾಡ ಹೈಕೋರ್ಟ್‌

ಚುನಾವಣಾ ಸಂಹಿತೆ ಅಧಿಕಾರಿಯಾಗಿದ್ದ ಲಕ್ಷ್ಮಣ ನಂದಿ ಎನ್ನುವವರು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ನಡ್ಡಾ ವಿರುದ್ಧ ದೂರು ದಾಖಲಿಸಿದ್ದರು. ಇಂದು(ಅ.12) ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ‌ ನಡ್ಡಾ ಮೇಲಿನ ಪ್ರಕರಣಕ್ಕೆ ಮಧ್ಯಂತರ ತಡೆ: ಧಾರವಾಡ ಹೈಕೋರ್ಟ್‌
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ
ಶಿವಕುಮಾರ್ ಪತ್ತಾರ್
| Edited By: |

Updated on:Oct 12, 2023 | 5:09 PM

Share

ಧಾರವಾಡ, ಅ.12: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕೇಸ್​ಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ‌. ನಡ್ಡಾ(Jp Nadda)ಮೇಲಿನ ಪ್ರಕರಣಕ್ಕೆ ಇದೀಗ ಧಾರವಾಡ ಹೈಕೋರ್ಟ್‌(Dharwad High Court) ಮಧ್ಯಂತರ ತಡೆ ನೀಡಿದೆ. ವಿಧಾನ ಸಭೆ ಚುನಾವಣೆ ವೇಳೆ ಹಾವೇರಿ‌ ಜಿಲ್ಲೆಯ ಶಿಗ್ಗಾವಿಯಲ್ಲಿ‌ ಮೇ 1ರಂದು ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಮಾಡುವ ಸಂದರ್ಭದಲ್ಲಿ ‘ಮತದಾರರ ಮೇಲೆ ಮೋದಿ ಆಶೀರ್ವಾದ ಇರುತ್ತೆ ಎಂದಿದ್ದರು. ಈ ಮೂಲಕ ಮತದಾರರಿಗೆ ಆಮಿಷವೊಡ್ಡಿರುವ ಆರೋಪ ಕೇಳಿಬಂದಿತ್ತು.

ಪ್ರಕರಣಕ್ಕೆ ತಡೆ ಕೋರಿ ಧಾರವಾಡ ಹೈಕೋರ್ಟ್ ಮೇಟ್ಟಿಲೇರಿದ್ದ ನಡ್ಡಾ ಪರ ವಕೀಲರು

ಈ ಕುರಿತು ಚುನಾವಣಾ ಸಂಹಿತೆ ಅಧಿಕಾರಿಯಾಗಿದ್ದ ಲಕ್ಷ್ಮಣ ನಂದಿ ಎನ್ನುವವರು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ನಡ್ಡಾ ವಿರುದ್ಧ ದೂರು ದಾಖಲಿಸಿದ್ದರು. ಇಂದು(ಅ.12) ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ:ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಜೆಪಿ ನಡ್ಡಾಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್

ಇನ್ನು ವಿಜಯನಗರದ ಹರಪ್ಪನಹಳ್ಳಿ ಪೊಲೀಸ್​ ಠಾಣೆಯಲ್ಲೂ ಕೂಡ ಮತದಾರರಿಗೆ ಆಮಿಷವೊಡ್ಡಿದ ಆರೋಪದಡಿ ಎಫ್​ಐಆರ್​ ದಾಖಲಾಗಿತ್ತು. ಹೌದು, 2023 ಮೇ 07 ರಂದು ಬಹಿರಂಗವಾಗಿ ಭಾಷಣ ಮಾಡಿದ್ದ ಜೆಪಿ ನಡ್ಡಾ ವಿರುದ್ಧ ಪೊಲೀಸರೇ ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿದ್ದರು. ಈ ಹಿನ್ನಲೆ ಆಧಾರ ರಹಿತವಾಗಿ ದಾಖಲಾದ ದೂರನ್ನು ರದ್ದು ಪಡಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇನ್ನು ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ್ ಅವರು ಇದ್ದ ಏಕಸದಸದಸ್ಯ ಪೀಠವು, ದಾಖಲಾದ ದೂರಿನಲ್ಲಿ ಮತದಾರರಿಗೆ ಆಮಿಷವೊಡ್ಡುವ ಯಾವುದೇ ಹೇಳಿಕೆಗಳು ಕಾಣಿಸಿಲ್ಲ ಎಂದು ದಾಖಲಾಗಿದ್ದ ದೂರನ್ನು ರದ್ದುಪಡಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:55 pm, Thu, 12 October 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!