AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಚೇರಿ ವಿವಾದ: ಸಿದ್ದರಾಮಯ್ಯ ಸಂಪುಟ ತೀರ್ಮಾನಕ್ಕೆ ಕೋರ್ಟ್​​ ತಡೆ

ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠವು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ತಡೆ ನೀಡಿದೆ. ಈ ಜಾಗವನ್ನು ಮೂಲತಃ ಕುಡಿಯುವ ನೀರಿನ ಸಂಗ್ರಹಕ್ಕಾಗಿ ಮೀಸಲಿಡಲಾಗಿತ್ತು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಪರಿಗಣಿಸಿ ಈ ತೀರ್ಪು ನೀಡಿದೆ.

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಚೇರಿ ವಿವಾದ: ಸಿದ್ದರಾಮಯ್ಯ ಸಂಪುಟ ತೀರ್ಮಾನಕ್ಕೆ ಕೋರ್ಟ್​​ ತಡೆ
ಹೈಕೋರ್ಟ್​, ಸಿಎಂ ಸಿದ್ದರಾಮಯ್ಯ
ಶಿವಕುಮಾರ್ ಪತ್ತಾರ್
| Edited By: ವಿವೇಕ ಬಿರಾದಾರ|

Updated on:Mar 26, 2025 | 4:57 PM

Share

ಹುಬ್ಬಳ್ಳಿ, ಮಾರ್ಚ್​ 26: ಕುಡಿಯುವ ನೀರು ಸಂಗ್ರಹಣೆಗೆ ಮೀಸಲಿಟ್ಟಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ (Hubballi-Dharwad Municipal Corporation) ಜಾಗದಲ್ಲಿ ಕಾಂಗ್ರೆಸ್ (Congress) ಕಚೇರಿ ನಿರ್ಮಿಸಲು ಅನುಮತಿ ನೀಡಿದ್ದ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್​ನ ಧಾರವಾಡ ಪೀಠ ತಡೆ ನೀಡಿದೆ. ಈ ಮೂಲಕ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಸ್ಥಳ ಮಂಜೂರು ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಆರಂಭಿಕ ಹಿನ್ನಡೆಯಾಗಿದೆ.

ಹುಬ್ಬಳ್ಳಿಯ ಕೇಶ್ವಾಪುರ ಸರ್ಕಲ್ ಬಳಿಯ 25ಗುಂಟೆಗಿಂತಲೂ ಅಧಿಕ ಜಾಗದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕುಡಿಯುವ ನೀರು ಸಂಗ್ರಹಣೆಗೆ ಮೀಸಲಿಟ್ಟಿತ್ತು. ಈ ಜಾಗದಲ್ಲಿ ಕಾಂಗ್ರೆಸ್ ಕಚೇರಿ ಸ್ಥಾಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಶೇಕಡಾ 5 ರಷ್ಟು ಹಣವನ್ನು ಪಾಲಿಕೆಗೆ ನೀಡಿ, 25ಗುಂಟೆಗಿಂತಲೂ ಅಧಿಕ ಭೂಮಿಯ ಹಕ್ಕುನ್ನು ಪಡೆಯಲು ಕ್ಯಾಬಿನೆಟ್ ತೀರ್ಮಾನ ಮಾಡಿತ್ತು.

ಸಂಪುಟದ ಈ ನಿರ್ಧಾರಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರು. ಸರ್ಕಾರ ಮಹಾನಗರ ಪಾಲಿಕೆಯ ಭೂಮಿಯನ್ನು ಅತ್ಯಂತ ಕಡಿಮೆ ಬೆಲೆ ಖರೀದಿಸಿ, ಅಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಮಾಡಲು ಮುಂದಾಗಿದೆ. ಈ ಭೂಮಿಯಲ್ಲಿ ಸದ್ಯ ಹುಬ್ಬಳ್ಳಿ ನಗರಕ್ಕೆ ನೀರು ಪೂರೈಸುವ ಜಲ ಸಂಗ್ರಹ ಬೃಹತ್ ಟ್ಯಾಂಕ್​ಗಳಿವೆ. ಈ ಸ್ಥಳಕ್ಕೆ ಸಾರ್ವಜನಿಕರಿಗೆ ನಿರ್ಬಂಧಿತ ಪ್ರದೇಶವಾಗಿದೆ. ನಿರ್ಬಂಧಿತ ಪ್ರದೇಶ ಜಾಗವನ್ನು ಪಕ್ಷದ ಕಚೇರಿ ಕೊಟ್ಟಿದ್ದು ಸರಿಯಾದ ಕ್ರಮವಲ್ಲ ಎಂದು ಪಾಲಿಕೆ ಬಿಜೆಪಿ ಸದಸ್ಯರು ಅಸಮಾಧಾನ ಹೊರ ಹಾಕಿದ್ದರು.

ಇದನ್ನೂ ಓದಿ
Image
ಹುಬ್ಬಳ್ಳಿ: ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಅನ್ನಭಾಗ್ಯ ಅಕ್ಕಿ ಜಪ್ತಿ
Image
ಹಳೇ ಹುಬ್ಬಳ್ಳಿ ಗಲಭೆ ಕೇಸ್‌ ವಾಪಸ್​​​: ಸರ್ಕಾರಕ್ಕೆ ನೋಟಿಸ್
Image
ಹುಬ್ಬಳ್ಳಿ: ಕೋಟಿ ‌ಕೋಟಿ ರೂ. ಬೆಲೆಬಾಳುವ ಸ್ಥಳಕ್ಕಾಗಿ 3 ಪಕ್ಷಗಳ ಗುದ್ದಾಟ!
Image
ಮುಡಾ ಹಗರಣ: ಸಿದ್ದರಾಮಯ್ಯಗೆ ಬಿಗ್​ ರಿಲೀಫ್​​

ಇದನ್ನೂ ಓದಿ: ಧಾರವಾಡಲ್ಲಿವೆ ಪ್ಲಾಸ್ಟಿಕ್ ಮುಕ್ತ ಗ್ರಾಮಗಳು: ಕ್ಯಾನ್ಸರ್ ತಡೆಗೆ ಒಂದು ದಿಟ್ಟ ಹೆಜ್ಜೆ

ಅಲ್ಲದೇ, ಇದನ್ನು ಪ್ರಶ್ನಿಸಿ ಬಿಜೆಪಿ ಸದಸ್ಯರಾದ ಸಂತೋಷ ಚವ್ಹಾಣ್ ಹಾಗೂ ಬೀರಪ್ಪ ನ್ಯಾಯಾಲಯದ ಮೋರೆ ಹೋಗಿದ್ದರು. ವಾದ-ಪ್ರತಿವಾದ ಆಲಿಸಿದ ಕರ್ನಾಟಕ ಹೈಕೋರ್ಟ್​ನ ಧಾರವಾಡ ಪೀಠ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:52 pm, Wed, 26 March 25

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ