ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಚೇರಿ ವಿವಾದ: ಸಿದ್ದರಾಮಯ್ಯ ಸಂಪುಟ ತೀರ್ಮಾನಕ್ಕೆ ಕೋರ್ಟ್​​ ತಡೆ

ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠವು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ತಡೆ ನೀಡಿದೆ. ಈ ಜಾಗವನ್ನು ಮೂಲತಃ ಕುಡಿಯುವ ನೀರಿನ ಸಂಗ್ರಹಕ್ಕಾಗಿ ಮೀಸಲಿಡಲಾಗಿತ್ತು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಪರಿಗಣಿಸಿ ಈ ತೀರ್ಪು ನೀಡಿದೆ.

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಚೇರಿ ವಿವಾದ: ಸಿದ್ದರಾಮಯ್ಯ ಸಂಪುಟ ತೀರ್ಮಾನಕ್ಕೆ ಕೋರ್ಟ್​​ ತಡೆ
ಹೈಕೋರ್ಟ್​, ಸಿಎಂ ಸಿದ್ದರಾಮಯ್ಯ
Edited By: ವಿವೇಕ ಬಿರಾದಾರ

Updated on: Mar 26, 2025 | 4:57 PM

ಹುಬ್ಬಳ್ಳಿ, ಮಾರ್ಚ್​ 26: ಕುಡಿಯುವ ನೀರು ಸಂಗ್ರಹಣೆಗೆ ಮೀಸಲಿಟ್ಟಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ (Hubballi-Dharwad Municipal Corporation) ಜಾಗದಲ್ಲಿ ಕಾಂಗ್ರೆಸ್ (Congress) ಕಚೇರಿ ನಿರ್ಮಿಸಲು ಅನುಮತಿ ನೀಡಿದ್ದ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್​ನ ಧಾರವಾಡ ಪೀಠ ತಡೆ ನೀಡಿದೆ. ಈ ಮೂಲಕ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಸ್ಥಳ ಮಂಜೂರು ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಆರಂಭಿಕ ಹಿನ್ನಡೆಯಾಗಿದೆ.

ಹುಬ್ಬಳ್ಳಿಯ ಕೇಶ್ವಾಪುರ ಸರ್ಕಲ್ ಬಳಿಯ 25ಗುಂಟೆಗಿಂತಲೂ ಅಧಿಕ ಜಾಗದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕುಡಿಯುವ ನೀರು ಸಂಗ್ರಹಣೆಗೆ ಮೀಸಲಿಟ್ಟಿತ್ತು. ಈ ಜಾಗದಲ್ಲಿ ಕಾಂಗ್ರೆಸ್ ಕಚೇರಿ ಸ್ಥಾಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಶೇಕಡಾ 5 ರಷ್ಟು ಹಣವನ್ನು ಪಾಲಿಕೆಗೆ ನೀಡಿ, 25ಗುಂಟೆಗಿಂತಲೂ ಅಧಿಕ ಭೂಮಿಯ ಹಕ್ಕುನ್ನು ಪಡೆಯಲು ಕ್ಯಾಬಿನೆಟ್ ತೀರ್ಮಾನ ಮಾಡಿತ್ತು.

ಸಂಪುಟದ ಈ ನಿರ್ಧಾರಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರು. ಸರ್ಕಾರ ಮಹಾನಗರ ಪಾಲಿಕೆಯ ಭೂಮಿಯನ್ನು ಅತ್ಯಂತ ಕಡಿಮೆ ಬೆಲೆ ಖರೀದಿಸಿ, ಅಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಮಾಡಲು ಮುಂದಾಗಿದೆ. ಈ ಭೂಮಿಯಲ್ಲಿ ಸದ್ಯ ಹುಬ್ಬಳ್ಳಿ ನಗರಕ್ಕೆ ನೀರು ಪೂರೈಸುವ ಜಲ ಸಂಗ್ರಹ ಬೃಹತ್ ಟ್ಯಾಂಕ್​ಗಳಿವೆ. ಈ ಸ್ಥಳಕ್ಕೆ ಸಾರ್ವಜನಿಕರಿಗೆ ನಿರ್ಬಂಧಿತ ಪ್ರದೇಶವಾಗಿದೆ. ನಿರ್ಬಂಧಿತ ಪ್ರದೇಶ ಜಾಗವನ್ನು ಪಕ್ಷದ ಕಚೇರಿ ಕೊಟ್ಟಿದ್ದು ಸರಿಯಾದ ಕ್ರಮವಲ್ಲ ಎಂದು ಪಾಲಿಕೆ ಬಿಜೆಪಿ ಸದಸ್ಯರು ಅಸಮಾಧಾನ ಹೊರ ಹಾಕಿದ್ದರು.

ಇದನ್ನೂ ಓದಿ
ಹುಬ್ಬಳ್ಳಿ: ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಅನ್ನಭಾಗ್ಯ ಅಕ್ಕಿ ಜಪ್ತಿ
ಹಳೇ ಹುಬ್ಬಳ್ಳಿ ಗಲಭೆ ಕೇಸ್‌ ವಾಪಸ್​​​: ಸರ್ಕಾರಕ್ಕೆ ನೋಟಿಸ್
ಹುಬ್ಬಳ್ಳಿ: ಕೋಟಿ ‌ಕೋಟಿ ರೂ. ಬೆಲೆಬಾಳುವ ಸ್ಥಳಕ್ಕಾಗಿ 3 ಪಕ್ಷಗಳ ಗುದ್ದಾಟ!
ಮುಡಾ ಹಗರಣ: ಸಿದ್ದರಾಮಯ್ಯಗೆ ಬಿಗ್​ ರಿಲೀಫ್​​

ಇದನ್ನೂ ಓದಿ: ಧಾರವಾಡಲ್ಲಿವೆ ಪ್ಲಾಸ್ಟಿಕ್ ಮುಕ್ತ ಗ್ರಾಮಗಳು: ಕ್ಯಾನ್ಸರ್ ತಡೆಗೆ ಒಂದು ದಿಟ್ಟ ಹೆಜ್ಜೆ

ಅಲ್ಲದೇ, ಇದನ್ನು ಪ್ರಶ್ನಿಸಿ ಬಿಜೆಪಿ ಸದಸ್ಯರಾದ ಸಂತೋಷ ಚವ್ಹಾಣ್ ಹಾಗೂ ಬೀರಪ್ಪ ನ್ಯಾಯಾಲಯದ ಮೋರೆ ಹೋಗಿದ್ದರು. ವಾದ-ಪ್ರತಿವಾದ ಆಲಿಸಿದ ಕರ್ನಾಟಕ ಹೈಕೋರ್ಟ್​ನ ಧಾರವಾಡ ಪೀಠ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:52 pm, Wed, 26 March 25

Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us