AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಸೇವಾ ನ್ಯೂನ್ಯತೆ ಎಸಗಿದ ಹೋಟೆಲ್, ಮೇಕ್ ಮೈ ಟ್ರಿಪ್‌, ಓಯೋಗೆ ದಂಡ; ಗ್ರಾಹಕರ ಆಯೋಗದಿಂದ ಮಹತ್ತರ ಆದೇಶ

ಸೇವಾ ನ್ಯೂನ್ಯತೆ ಎಸಗಿದ ಹೋಟೆಲ್ ಸೇರಿ ಮೇಕ್ ಮೈ ಟ್ರಿಪ್‌, ಓಯೋಗೆ ಧಾರವಾಡ ಜಿಲ್ಲಾ ಗ್ರಾಹಕರ ವೇದಿಕೆ ಬರೋಬ್ಬರಿ 11.38 ಲಕ್ಷ ರೂ. ದಂಡ ವಿಧಿಸಿದೆ.

ಧಾರವಾಡ: ಸೇವಾ ನ್ಯೂನ್ಯತೆ ಎಸಗಿದ ಹೋಟೆಲ್, ಮೇಕ್ ಮೈ ಟ್ರಿಪ್‌, ಓಯೋಗೆ ದಂಡ; ಗ್ರಾಹಕರ ಆಯೋಗದಿಂದ ಮಹತ್ತರ ಆದೇಶ
ಸೇವಾ ನ್ಯೂನ್ಯತೆ ಎಸಗಿದ ಹೋಟೆಲ್, ಮೇಕ್ ಮೈ ಟ್ರಿಪ್‌, ಓಯೋಗೆ ದಂಡ ಹಾಕಿದ ಗ್ರಾಹಕರ ಆಯೋಗ
TV9 Web
| Edited By: |

Updated on:Feb 16, 2023 | 7:19 PM

Share

ಧಾರವಾಡ: ಸೇವಾ ನ್ಯೂನ್ಯತೆ ಎಸಗಿದ ಹೋಟೆಲ್, ಮೇಕ್ ಮೈ ಟ್ರಿಪ್‌, ಓಯೋ(MakeMy Trip, Oyo)ಗೆ ಜಿಲ್ಲಾ ಗ್ರಾಹಕರ ಆಯೋಗವು 11.38 ಲಕ್ಷ ರೂ. ದಂಡ ವಿಧಿಸಿದೆ. ಹುಬ್ಬಳ್ಳಿಯ ವಿದ್ಯಾನಗರ ಮೂಲದ ದೀಪಕ್ ರತನ್ ಹಾಗೂ ಸ್ನೇಹಿತರು ಸೇರಿ ಒಟ್ಟು 21 ಜನರು ಪ್ರವಾಸಕ್ಕೆ ಹೋಗಿದ್ದರು. ಈ ವೇಳೆ ಮುಂಚಿತವಾಗಿ ಬುಕ್ ಮಾಡಿದರೂ ರೂಮ್ ನೀಡದೆ. 21 ಜನರ ಕುಟುಂಬವೊಂದಕ್ಕೆ ತೊಂದರೆ ನೀಡಿರುವ ಹಿನ್ನೆಲೆ, ಹೋಟೆಲ್ ಹಾಗೂ ಬುಕ್ ಮಾಡಿಕೊಂಡ ಎರಡು ಕಂಪನಿಗಳಿಗೆ ಇದೀಗ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗವು ದಂಡ ವಿಧಿಸಿದೆ.

2019ರ ಡಿಸೆಂಬರ್‌ನಲ್ಲಿ ದೀಪಕ್ ಹಾಗೂ ಸ್ನೇಹಿತರು ಮೇಕ್ ಮೈ ಟ್ರಿಪ್ ಹಾಗೂ ಓಯೋ ಕಂಪನಿ ಮೂಲಕ ಆನ್‌ಲೈನ್ ಹಣ ಸಂದಾಯ ಮಾಡಿ, ಮಹಾರಾಷ್ಟ್ರದ ಲಾವಾಸಾದಲ್ಲಿನ ಹೋಟೆಲ್ ಅನಂತ ರೆಸಿಡೆನ್ಸಿಯಲ್ಲಿ ಡಿ. 23 ರಿಂದ 25ರವರೆಗೆ ಒಟ್ಟು ಎಂಟು ರೂಮ್‌ಗಳನ್ನು ಬುಕ್ ಮಾಡಿದ್ದರು. ನಂತರ ಅಲ್ಲಿಗೆ ಹೋಗಿ ಅನಂತ ರೆಸಿಡೆನ್ಸಿಯಲ್ಲಿ ವಿಚಾರಿಸಿದಾಗ ರೂಮ್‌ ಇಲ್ಲ ಎಂದು ಮ್ಯಾನೇಜರ್ ಹೇಳಿದ್ದಾರೆ. ಬಳಿಕ 5 ಮಹಿಳೆಯರು, 11 ಮಕ್ಕಳು ಸೇರಿ 21 ಜನ ವಾಹನದಲ್ಲಿಯೇ ಮಲಗಿದ್ದಾರೆ. ಈ ಕುರಿತು ಅನಂತ ರೆಸಿಡೆನ್ಸಿ ಹೋಟೆಲ್, ಮೇಕ್ ಮೈ ಟ್ರಿಪ್ ಹಾಗೂ ಓಯೋ ಕಂಪನಿಗಳ ವಿರುದ್ಧ ಗ್ರಾಹಕರ ಆಯೋಗಕ್ಕೆ ದೂರು ನೀಡಿದ್ದರು. ಇದೀಗ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗವು ಒಂದು ತಿಂಗಳೊಳಗಾಗಿ ಒಟ್ಟು 11.38 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶ ಹೊರಡಿಸಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:24 pm, Wed, 15 February 23

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?