AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಸೇವಾ ನ್ಯೂನ್ಯತೆ ಎಸಗಿದ ಹೋಟೆಲ್, ಮೇಕ್ ಮೈ ಟ್ರಿಪ್‌, ಓಯೋಗೆ ದಂಡ; ಗ್ರಾಹಕರ ಆಯೋಗದಿಂದ ಮಹತ್ತರ ಆದೇಶ

ಸೇವಾ ನ್ಯೂನ್ಯತೆ ಎಸಗಿದ ಹೋಟೆಲ್ ಸೇರಿ ಮೇಕ್ ಮೈ ಟ್ರಿಪ್‌, ಓಯೋಗೆ ಧಾರವಾಡ ಜಿಲ್ಲಾ ಗ್ರಾಹಕರ ವೇದಿಕೆ ಬರೋಬ್ಬರಿ 11.38 ಲಕ್ಷ ರೂ. ದಂಡ ವಿಧಿಸಿದೆ.

ಧಾರವಾಡ: ಸೇವಾ ನ್ಯೂನ್ಯತೆ ಎಸಗಿದ ಹೋಟೆಲ್, ಮೇಕ್ ಮೈ ಟ್ರಿಪ್‌, ಓಯೋಗೆ ದಂಡ; ಗ್ರಾಹಕರ ಆಯೋಗದಿಂದ ಮಹತ್ತರ ಆದೇಶ
ಸೇವಾ ನ್ಯೂನ್ಯತೆ ಎಸಗಿದ ಹೋಟೆಲ್, ಮೇಕ್ ಮೈ ಟ್ರಿಪ್‌, ಓಯೋಗೆ ದಂಡ ಹಾಕಿದ ಗ್ರಾಹಕರ ಆಯೋಗ
TV9 Web
| Edited By: |

Updated on:Feb 16, 2023 | 7:19 PM

Share

ಧಾರವಾಡ: ಸೇವಾ ನ್ಯೂನ್ಯತೆ ಎಸಗಿದ ಹೋಟೆಲ್, ಮೇಕ್ ಮೈ ಟ್ರಿಪ್‌, ಓಯೋ(MakeMy Trip, Oyo)ಗೆ ಜಿಲ್ಲಾ ಗ್ರಾಹಕರ ಆಯೋಗವು 11.38 ಲಕ್ಷ ರೂ. ದಂಡ ವಿಧಿಸಿದೆ. ಹುಬ್ಬಳ್ಳಿಯ ವಿದ್ಯಾನಗರ ಮೂಲದ ದೀಪಕ್ ರತನ್ ಹಾಗೂ ಸ್ನೇಹಿತರು ಸೇರಿ ಒಟ್ಟು 21 ಜನರು ಪ್ರವಾಸಕ್ಕೆ ಹೋಗಿದ್ದರು. ಈ ವೇಳೆ ಮುಂಚಿತವಾಗಿ ಬುಕ್ ಮಾಡಿದರೂ ರೂಮ್ ನೀಡದೆ. 21 ಜನರ ಕುಟುಂಬವೊಂದಕ್ಕೆ ತೊಂದರೆ ನೀಡಿರುವ ಹಿನ್ನೆಲೆ, ಹೋಟೆಲ್ ಹಾಗೂ ಬುಕ್ ಮಾಡಿಕೊಂಡ ಎರಡು ಕಂಪನಿಗಳಿಗೆ ಇದೀಗ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗವು ದಂಡ ವಿಧಿಸಿದೆ.

2019ರ ಡಿಸೆಂಬರ್‌ನಲ್ಲಿ ದೀಪಕ್ ಹಾಗೂ ಸ್ನೇಹಿತರು ಮೇಕ್ ಮೈ ಟ್ರಿಪ್ ಹಾಗೂ ಓಯೋ ಕಂಪನಿ ಮೂಲಕ ಆನ್‌ಲೈನ್ ಹಣ ಸಂದಾಯ ಮಾಡಿ, ಮಹಾರಾಷ್ಟ್ರದ ಲಾವಾಸಾದಲ್ಲಿನ ಹೋಟೆಲ್ ಅನಂತ ರೆಸಿಡೆನ್ಸಿಯಲ್ಲಿ ಡಿ. 23 ರಿಂದ 25ರವರೆಗೆ ಒಟ್ಟು ಎಂಟು ರೂಮ್‌ಗಳನ್ನು ಬುಕ್ ಮಾಡಿದ್ದರು. ನಂತರ ಅಲ್ಲಿಗೆ ಹೋಗಿ ಅನಂತ ರೆಸಿಡೆನ್ಸಿಯಲ್ಲಿ ವಿಚಾರಿಸಿದಾಗ ರೂಮ್‌ ಇಲ್ಲ ಎಂದು ಮ್ಯಾನೇಜರ್ ಹೇಳಿದ್ದಾರೆ. ಬಳಿಕ 5 ಮಹಿಳೆಯರು, 11 ಮಕ್ಕಳು ಸೇರಿ 21 ಜನ ವಾಹನದಲ್ಲಿಯೇ ಮಲಗಿದ್ದಾರೆ. ಈ ಕುರಿತು ಅನಂತ ರೆಸಿಡೆನ್ಸಿ ಹೋಟೆಲ್, ಮೇಕ್ ಮೈ ಟ್ರಿಪ್ ಹಾಗೂ ಓಯೋ ಕಂಪನಿಗಳ ವಿರುದ್ಧ ಗ್ರಾಹಕರ ಆಯೋಗಕ್ಕೆ ದೂರು ನೀಡಿದ್ದರು. ಇದೀಗ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗವು ಒಂದು ತಿಂಗಳೊಳಗಾಗಿ ಒಟ್ಟು 11.38 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶ ಹೊರಡಿಸಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:24 pm, Wed, 15 February 23

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​