AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೀರ್ತಿವೆತ್ತ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಮತ್ತೆ ನಿರ್ಲಕ್ಷ್ಯ, 15 ಸಾವಿರ ಅಂಕಪಟ್ಟಿಗಳಲ್ಲಿ ಯಡವಟ್ಟು

ಮಕ್ಕಳ ಭವಿಷ್ಯ ರೂಪಿಸಬೇಕಾದ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಅವರ ಭವಿಷ್ಯಕ್ಕೆ ಮೂಲ ಆಧಾರವಾಗಿರೋ ಅಂಕಪಟ್ಟಿಯಲ್ಲಿಯೇ ಎಡವಟ್ಟು ಮಾಡಿರೋದು ಚರ್ಚೆಗೆ ಕಾರಣವಾಗಿದೆ.

ಕೀರ್ತಿವೆತ್ತ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಮತ್ತೆ ನಿರ್ಲಕ್ಷ್ಯ, 15 ಸಾವಿರ ಅಂಕಪಟ್ಟಿಗಳಲ್ಲಿ ಯಡವಟ್ಟು
ಕೀರ್ತಿವೆತ್ತ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಮತ್ತೆ ನಿರ್ಲಕ್ಷ್ಯ
TV9 Web
| Edited By: ಸಾಧು ಶ್ರೀನಾಥ್​|

Updated on: Dec 19, 2022 | 3:01 PM

Share

ಪರೀಕ್ಷೆಯಲ್ಲಿ ಸರಿಯಾಗಿ ಬರೆದರೆ ಮಾತ್ರ ಒಳ್ಳೆ ಅಂಕ ಕೊಡ್ತಾರೆ. ಆ ಆಂಕಗಳ ಮೇಲೆಯೇ ವಿದ್ಯಾರ್ಥಿಗಳ (students) ಭವಿಷ್ಯ ನಿಂತಿರುತ್ತೆ. ಆದ್ರೆ ಹಾಗೇ ಕೊಡೋ ಅಂಕಪಟ್ಟಿಯಲ್ಲೇ (marks card) ಎಡವಟ್ಟಾದ್ರೆ ಹೇಗಿರಬೇಕು. ಅಂತಹ ಒಂದು ಎಡವಟ್ಟು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ (Dharwad Karnataka University) ನಡೆದಿದೆ.

ಇಡೀ ರಾಜ್ಯದಲ್ಲಿಯೇ‌ ಮೊಟ್ಟ ಮೊದಲಿಗೆ ಎನ್‌ಇಪಿ ಶಿಕ್ಷಣ ನೀತಿ ಅಳವಡಿಸಿಕೊಂಡು ಯಶಸ್ವಿಯಾದ ಕೀರ್ತಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಇದೆ. ಆದರೆ ಈ ಯಶಸ್ಸಿನ ಮೇಲೆ ಸುದ್ದಿಯಾಗಬೇಕಿದ್ದ ಈ ವಿಶ್ವವಿದ್ಯಾಲಯ ಎಡವಟ್ಟುಗಳಿಂದಲೇ ಸುದ್ದಿ ಆಗೋದು ಹೆಚ್ಚು. ಈಗ ವಿದ್ಯಾರ್ಥಿಗಳಿಗೆ ಕೊಡಬೇಕಾದ ಅಂಕಪಟ್ಟಿಯಲ್ಲೇ ಮಹಾ ಎಡವಟ್ಟು ನಡೆದು ಹೋಗಿದೆ. ವಾಣಿಜ್ಯ ವಿಭಾಗದ ಅಂತಿಮ ವರ್ಷದ ಪರೀಕ್ಷಾ ಅಂಕಪಟ್ಟಿಯಲ್ಲಿ ಕವಿವಿ ಎಡವಟ್ಟು ಮಾಡಿಕೊಂಡಿದೆ.

ಕಡ್ಡಾಯ ಕನ್ನಡ ವಿಷಯದಲ್ಲಿ ಬಂದ ಅಂಕಗಳನ್ನು ಒಟ್ಟಾರೆ ಫಲಿತಾಂಶಕ್ಕೆ ಸೇರ್ಪಡೆ ಮಾಡಲಾಗಿದೆ. ಮೊದಲು ಕನ್ನಡ ಕಲಿ ಎಂಬ ವಿಷಯ ಇತ್ತು. ಈಗ ಕಡ್ಡಾಯ ಕನ್ನಡ ಎಂದು ಮಾಡಲಾಗಿದೆ. ಕಡ್ಡಾಯ ಕನ್ನಡ ಕೋರ್ಸ್ ಸಬ್ಜೆಕ್ಟ್ ಅಲ್ಲದೇ ಇದ್ದರೂ ಆ ಅಂಕಗಳನ್ನು ಒಟ್ಟಾರೆ ಫಲಿತಾಂಶಕ್ಕೆ ಸೇರ್ಪಡೆ ಮಾಡಿ ಕವಿವಿ ಎಡವಟ್ಟು ಮಾಡಿಕೊಂಡಿದೆ. ಈ ರೀತಿ ರೀತಿ ಒಟ್ಟು 15 ಸಾವಿರ ಅಂಕಪಟ್ಟಿ ಸಿದ್ಧಪಡಿಸಿರುವ ಕವಿವಿಗೆ ತಪ್ಪು ಗಮನಕ್ಕೆ ಬಂದ ನಂತರ ಅಂಕಪಟ್ಟಿಯ ಮರು ಮುದ್ರಣಕ್ಕೆ ಮುಂದಾಗಿದೆ. ಇದು ತಾಂತ್ರಿಕ ತೊಂದರೆಯಿಂದ ಆಗಿದ್ದು ಸರಿಪಡಿಸುತ್ತೇವೆ ಅಂತಾ ಕವಿವಿ ಕುಲಪತಿ ಪ್ರೊ. ಕೆ.ಬಿ. ಗುಡಸಿ ಹೇಳುತ್ತಿದ್ದಾರೆ.

ಸದ್ಯ ಈ ಯಡವಟ್ಟಿನಿಂದ ಪಾಸಿಂಗ್ ಸರ್ಟಿಫಿಕೇಟ್‌ನಲ್ಲೂ ವ್ಯತ್ಯಾಸ ಉಂಟಾಗಿದೆ. ಪಾಸಿಂಗ್ ಸರ್ಟಿಫಿಕೇಟ್‌ನಲ್ಲಿ ಶೇ. 5 ರಷ್ಟು ವ್ಯತ್ಯಾಸ ಕಂಡುಬಂದಿದೆ. ಸಾಮಾನ್ಯವಾಗಿ ವಿದ್ಯಾರ್ಥಿಗಳು ಒಂದು ಸಲ ಅಂಕ ಪಟ್ಟಿ ತೆಗೆದುಕೊಳ್ಳಬೇಕಾದರೆ ಶುಲ್ಕ ಕೊಡಬೇಕು. ಮತ್ತೊಂದು ಸಲ ಕೇಳಿದ್ರೂ ಅದಕ್ಕೆ ಮತ್ತೆ ಶುಲ್ಕ ಕೊಡಬೇಕಾಗುತ್ತೆ. ಹೀಗಾಗಿ ಈಗ ಹೊಸ ಅಂಕಪಟ್ಟಿಗೆ ಮತ್ತೆ ವಿದ್ಯಾರ್ಥಿಗಳಿಂದಲೇ ಶುಲ್ಕ ಪಡೆದರೂ ಅಚ್ಚರಿ ಇಲ್ಲ. ಹೀಗಾಗಿ ಇದರಲ್ಲಿ ಯಾರು ತಪ್ಪು ಮಾಡಿದ್ದಾರೆಯೋ ಅವರಿಂದಲೇ ದಂಡದ ರೂಪದಲ್ಲಿ ವೆಚ್ಚ ಆಕರಿಸಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ.

ಒಟ್ಟಾರೆಯಾಗಿ ಮಕ್ಕಳ ಭವಿಷ್ಯ ರೂಪಿಸಬೇಕಾದ ವಿಶ್ವವಿದ್ಯಾಲಯ ಅವರ ಭವಿಷ್ಯಕ್ಕೆ ಮೂಲ ಆಧಾರವಾಗಿರೋ ಅಂಕಪಟ್ಟಿಯಲ್ಲಿಯೇ ಎಡವಟ್ಟು ಮಾಡಿರೋದು ಚರ್ಚೆಗೆ ಕಾರಣವಾಗಿದೆ. ಇದು ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಆಡುತ್ತಿರೋ ಚೆಲ್ಲಾಟವಲ್ಲದೇ ಮತ್ತೇನು? ಇಂಥ ವಿಷಯಗಳ ಬಗ್ಗೆ ಸರಕಾರ ನಿಗಾ ಇಡಬೇಕಿದೆ.

(ವರದಿ: ನರಸಿಂಹಮೂರ್ತಿ ಪ್ಯಾಟಿ, ಟಿವಿ 9, ಧಾರವಾಡ)

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ