AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಠ್ಯ ಕೈಬಿಟ್ಟರಷ್ಟೇ ಸಾಲದು, ಆ ಲೇಖಕನಿಗೆ ಗುಂಡು ಹೊಡೆಯಬೇಕು ಎಂದ ಪ್ರಮೋದ್ ಮುತಾಲಿಕ್

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಪಠ್ಯಪುಸ್ತಕದಲ್ಲಿನ ರಾಷ್ಟ್ರವಿರೋಧಿ ವಿಷಯದ ಕುರಿತು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಠ್ಯದಲ್ಲಿನ ಅವಮಾನಕರ ವಿಷಯಗಳನ್ನು ಖಂಡಿಸಿರುವ ಅವರು, ಲೇಖಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ವಿವಾದವು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಪಠ್ಯ ಕೈಬಿಟ್ಟರಷ್ಟೇ ಸಾಲದು, ಆ ಲೇಖಕನಿಗೆ ಗುಂಡು ಹೊಡೆಯಬೇಕು ಎಂದ ಪ್ರಮೋದ್ ಮುತಾಲಿಕ್
ಪಠ್ಯ ಕೈಬಿಟ್ಟರಷ್ಟೇ ಸಾಲದು, ಆ ಲೇಖಕನಿಗೆ ಗುಂಡು ಹೊಡೆಯಬೇಕು ಎಂದ ಪ್ರಮೋದ್ ಮುತಾಲಿಕ್
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Jan 31, 2025 | 3:52 PM

Share

ಧಾರವಾಡ, ಜನವರಿ 31: ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದ (Karnataka University) ಬಿಎ ಪದವಿ ಪುಸ್ತಕದಲ್ಲಿನ ಪಠ್ಯ ಕೈಬಿಟ್ಟರಷ್ಟೇ ಸಾಲದು, ಸಂಬಂಧಿಸಿದವರ ಮೇಲೆ ಕ್ರಮ ಆಗಬೇಕು. ಆ ಲೇಖಕನಿಗೆ ಗುಂಡು ಹೊಡೆಯಬೇಕು. ಭಾರತ ಮಾತೆಯ ಬಗ್ಗೆ ಅಪಮಾನ ಮಾಡಿದವರಿಗೆ ಕ್ಷಮೆ ‌ಇಲ್ಲ. ಅಕ್ಷಮ್ಯ ಅಪರಾಧ ಆಗಿದೆ. ಹೀಗಾಗಿ ಕ್ರಮ ಆಗಲೇಬೇಕು. ಇಲ್ಲದೇ ಹೋದಲ್ಲಿ ಹೋರಾಟ ಮುಂದುವರೆಯುತ್ತದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಾಗ್ದಾಳಿ ಮಾಡಿದ್ದಾರೆ.

ಕವಿವಿಯಲ್ಲಿ ನಡೆದ ಪುಷ್ಪ ನಮನ ಕಾರ್ಯಕ್ರಮ ಬಳಿಕ ಮಾತನಾಡಿದ ಅವರು, ಕವಿವಿಯಲ್ಲಿ ಅತ್ಯಂತ ಅವಮಾನಕರ ಘಟನೆ ಆಗಿದೆ. ಇದೊಂದು ಕಳಂಕದ ರೀತಿಯ ಘಟನೆ. ಬೆಳಗು-1 ರ ಪಠ್ಯ ವಿವಾದ ಆಗಿದೆ. ಭಾರತ ಮಾತಾ ಕೀ ಜೈ ಶಬ್ದಕ್ಕೆ ಅಪನಂಬಿಕೆ ಮೂಡಿಸುವ ಪಾಠ ಹಾಕಿದ್ದಾರೆ. ನಾನು ಈ ಸಂಬಂಧ ವಿಸಿ ಅವರಿಗೂ ಮನವಿ ಕೊಟ್ಟಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ವಿವಾದಕ್ಕೀಡಾದ ಧಾರವಾಡ ವಿವಿ ಕನ್ನಡ ಪಠ್ಯ ಪುಸ್ತಕ: ಎಡಪಂಥೀಯ ಚಿಂತನೆ ಹೇರಿದ ಆರೋಪ

ಪಾಠಗಳನ್ನು ನಾಲ್ಕು ಜನ ಪರಿಷ್ಕರಣೆ ಮಾಡುತ್ತಾರಂತೆ. ಸಂಪಾದಕೀಯ ಮಂಡಳಿ ಇದೆ. ಆ ನಾಲ್ಕು ಜನರ ಕಣ್ಣಿಗೆ ಇದು ಗೊತ್ತಾಗಲಿಲ್ಲವಾ? ಈ ರೀತಿಯ ಅಪಚಾರ ಮಹಾಅಪರಾಧ. ಇದು ದೇಶದ್ರೋಹಕ್ಕೆ ಸಮಾನವಾಗಿರೋದು. ಇದು ತುಕಡೆ ಗ್ಯಾಂಗ್​ನ ಕೆಲಸ. ಎಲ್ಲ ವಿವಿಗಳಲ್ಲಿ ತುಕಡೆ ಗ್ಯಾಂಗ್​ನವರು ಇದ್ದಾರೆ. ಎಲ್ಲ ಕಡೆ ಈ ರೀತಿಯ ವಿಕೃತವಾದಿಗಳು ಇದ್ದಾರೆ. ಅಂತಹ ಒಬ್ಬ ಮಾತ್ರವಲ್ಲ, ಒಂದು ತಂಡ ಕವಿವಿದಲ್ಲಿಯೂ ಇದೆ. ಇವರದ್ದು ಚೀನಾ ಡಿಎನ್‌ಎ. ಇವರ ಮಾನಸಿಕತೆ ಕಂಡು ಹಿಡಿಯಬೇಕು ಎಂದು ಕಿಡಿಕಾರಿದ್ದಾರೆ.

ಭಾರತ ಮಾತಾ ಕೀ ಜೈ ಅಂದರೆ ಏಕತೆ. ಇದು ಯಾವುದೇ ಜಾತಿ ಸೂಚಕ ಅಲ್ಲ. ಯಾವುದೇ ಭಾಷಾ ಸೂಚಕ ಅಲ್ಲ. ತಾಯಿ ಬಗ್ಗೆಯೇ ಅಪನಂಬಿಕೆಯಾ? ತಾಯಿ ಬಗ್ಗೆಯೇ ಅಪಪ್ರಚಾರವಾ? ಇದು ಬಹಳ ದೊಡ್ಡ ಅಪರಾಧ. ರಾಜ್ಯಪಾಲರಿಗೂ ಕ್ರಮಕ್ಕೆ ಆಗ್ರಹಿಸುತ್ತೇವೆ ಎಂದು ಹೇಳಿದ್ದಾರೆ.

ಯತೀಂದ್ರ ಇನ್ನೂ ಬಚ್ಚಾ

ಹಿಂದೂ ಮೂಲಭೂತವಾದಿಗಳು ಉಗ್ರರೆಂದು ಯತೀಂದ್ರ ಹೇಳಿಕೆ ವಿಚಾರವಾಗಿ ಮಾತನಾಡಿದ್ದು, ಸಿದ್ದರಾಮಯ್ಯನವರ ಮಗ ಡಾ. ಯತೀಂದ್ರ ಕರ್ನಾಟಕಕ್ಕೆ ಇನ್ನೂ ಬಚ್ಚಾ. ಹಿಂದೂ, ಹಿಂದೂತ್ವದ ಬಗ್ಗೆ ಏನೂ ಗೊತ್ತಿಲ್ಲದ ಬಚ್ಚಾ. ಈಗ ಹಿಂದೂ ಮೂಲಭೂತವಾದಿಗಳ ಬಗ್ಗೆ ಪದ ಬಳಕೆ ಮಾಡಿದ್ದಾರೆ. ಅದನ್ನು ವಾಪಸ್ ಪಡೆಯಬೇಕು. ಹಿಂದೂ ಎಂದೂ ಉಗ್ರವಾದಿಯಾಗಲು ಸಾಧ್ಯವಿಲ್ಲ, ಎಂದಿಗೂ ಉಗ್ರವಾದಿ ಆಗಿಲ್ಲ. ಮುಂದೆಯೂ ಆಗುವುದಿಲ್ಲ ಎಂದರು.

ಇದನ್ನೂ ಓದಿ: ಆಕ್ರೋಶ ಬೆನ್ನಲ್ಲೇ ವಿವಾದಿತ ಪಠ್ಯ ವಾಪಸ್ ಪಡೆದ ಕರ್ನಾಟಕ ವಿವಿ: ಪರೀಕ್ಷೆ ಮುಂದೂಡಿಕೆ

ಉಗ್ರವಾದಿ ಶಬ್ಧದ ಅರ್ಥ ಗೊತ್ತಿದೆಯಾ? ನಿಮ್ಮ ಅಪ್ಪ ಸಿಎಂ ಅಂತಾ ಏನು ಬೇಕಾದ್ದು ಮಾತನಾಡಬಹುದಾ? ನಾಲಿಗೆ ಬಿಗಿ ಹಿಡಿದು ಮಾತನಾಡಿ. ಈ ರೀತಿ ಮಾತನಾಡುವುದನ್ನು ನಿಲ್ಲಿಸಿ. ಇಲ್ಲವಾದರೆ ಜನ ಚಪ್ಪಲಿಯಿಂದ ಹೊಡೆಯುತ್ತಾರೆ. ನೀವು ಹಿಂದೂವಾಗಿದ್ದಕ್ಕೆ ಬದುಕುಳಿದಿದ್ದೀರಾ. ಹಿಂದೂ ಉಗ್ರವಾದಿ ಆಗಿದ್ದರೆ ನೀವೂ ಬದುಕುತ್ತಿರಲಿಲ್ಲ. ಏನೂ ಬೇಕಾದ್ದು ಮಾತನಾಡುವುದು ಸರಿಯಲ್ಲ. ತಮ್ಮ ಹೇಳಿಕೆ ವಾಪಸ್ ಪಡೆಯಬೇಕು. ಇಲ್ಲಿದೇ ಹೋದಲ್ಲಿ ಯತೀಂದ್ರ ಭೇಟಿ ನೀಡುವ ಕಡೆಯಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ವಾಗ್ದಾಳಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?