AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಉದ್ಯಮಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು; ಅಳಿಯನೇ ಮಾವನ ಕಿಡ್ನ್ಯಾಪ್ ಸೂತ್ರಧಾರ!

ಕಿಡ್ನ್ಯಾಪ್​ ಮಾಡಲು ಪವನ್​ಗೆ ಸಹಕಾರ ನೀಡಿದ್ದ ಆಸೀಫ್, ಸಮೀರ್, ಮಂಜುನಾಥ, ಖಲೀಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾಗಿರಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಧಾರವಾಡ: ಉದ್ಯಮಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು; ಅಳಿಯನೇ ಮಾವನ ಕಿಡ್ನ್ಯಾಪ್ ಸೂತ್ರಧಾರ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 31, 2021 | 6:18 PM

Share

ಧಾರವಾಡ: ನಗರದಲ್ಲಿ ನಡೆದಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಈ ಕಿಡ್ನ್ಯಾಪ್ ಹೊರಗಿನವರು ಯಾರೋ ರೂಪಿಸಿದ್ದಲ್ಲ ಬದಲಾಗಿ ಅಳಿಯನೇ ಪ್ರಕರಣದಲ್ಲಿ ಭಾಗಿಯಾಗಿರುವುದು ತಿಳಿದುಬಂದಿದೆ. ಧಾರವಾಡದಲ್ಲಿ ಅಳಿಯನಿಂದಲೇ ಉದ್ಯಮಿ ಮಾವನ ಕಿಡ್ನ್ಯಾಪ್ ಎಂಬುದು ಬಯಲಾಗಿದೆ. ಹೀಗಾಗಿ, ಪ್ರಕರಣದ​ ಪ್ರಮುಖ ಸೂತ್ರಧಾರ ಅಳಿಯ ಸೇರಿ ಐವರ ಸೆರೆಯಾಗಿದೆ.

ಉದ್ಯಮಿ ಶ್ರೀನಿವಾಸ ನಾಯ್ಡು ಎಂಬವರು ನಿನ್ನೆ ಅಪಹರಣವಾಗಿದ್ದರು. ಅಳಿಯ ಪವನ ವಾಜಪೇಯಿ ಎಂಬಾತ ಉದ್ಯಮಿ ಶ್ರೀನಿವಾಸ ನಾಯ್ಡು ಅವರನ್ನು ಅಪಹರಿಸಿದ್ದಾನೆ. ಪವನ ವಾಜಪೇಯಿ, ನಾಯ್ಡು ಜತೆ ಸೈಟ್ ನೋಡಲು ಹೋಗಿದ್ದ. ಇದೇ ವೇಳೆ ದುಷ್ಕರ್ಮಿಗಳು ದಾಳಿ ಮಾಡಿ ಅಪಹರಣ ಮಾಡಿದ್ದಾರೆ.

ಬಳಿಕ ಪವನ ವಾಜಪೇಯಿ ಮನೆಗೆ ಬಂದು ಕಿಡ್ನ್ಯಾಪ್ ಸ್ಟೋರಿ ಹೇಳಿದ್ದ. ಅಳಿಯನ ಮೇಲೆ ಪೊಲೀಸರಿಗೆ ಸಂಶಯ ಬಂದು ವಿಚಾರಣೆ ನಡೆಸಿದಾಗ ನಿಜ ವಿಚಾರ ಬಯಲಾಗಿದೆ. ಪೊಲೀಸರ ತನಿಖೆ ವೇಳೆ ಅಳಿಯ ಪವನ ಅಪಹರಣದ ಕಹಾನಿ ಬಿಚ್ಚಿಟ್ಟಿದ್ದಾನೆ.

ಕಿಡ್ನ್ಯಾಪ್​ ಮಾಡಲು ಪವನ್​ಗೆ ಸಹಕಾರ ನೀಡಿದ್ದ ಆಸೀಫ್, ಸಮೀರ್, ಮಂಜುನಾಥ, ಖಲೀಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾಗಿರಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ನೆಲಮಂಗಲದಲ್ಲಿ ವಾಮಾಚಾರ: 10 ವರ್ಷದ ಬಾಲಕಿಯ ಅಪಹರಣ, ಬಲಿಗೆ ಯತ್ನ; ಅರ್ಚಕ ಸೇರಿದಂತೆ ಐದು ಮಂದಿ ಅರೆಸ್ಟ್

ಪತ್ನಿ ತಂಗಿ ಮೇಲೆ ಕಣ್ಣು ಹಾಕಿದ ಧಾರವಾಡದ ಸರ್ಕಾರಿ ನೌಕರ; ಅಪಹರಣ ಮಾಡಿಸಲು ಹೋಗಿ ಜೈಲು ಪಾಲು

(Dharwad Kidnap Case got new twist Real Estate Businessman Kidnap)

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ