ಹುಬ್ಬಳ್ಳಿ ಧಾರವಾಡ ಪಾಲಿಕೆಯಿಂದ ಕೇಂದ್ರದ ಮಂತಿವರೆಗೆ ಪ್ರಲ್ಹಾದ್​ ಜೋಶಿ ನಡೆದುಬಂದ ಹಾದಿ

| Updated By: ಗಂಗಾಧರ​ ಬ. ಸಾಬೋಜಿ

Updated on: Jun 09, 2024 | 9:06 PM

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರ ಐದನೇ ಬಾರಿಯೂ ಗೆಲ್ಲುವ ಮೂಲಕ ಪ್ರಲ್ಹಾದ್​ ಜೋಶಿ ಇತಿಹಾಸ ಸೃಷ್ಟಿಸಿದ್ದಾರೆ. ಇಂದು ದೇವರ ಹೆಸರಿನಲ್ಲಿ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಕೂಡ ಮಾಡಿದ್ದಾರೆ. ಕ್ಷೇತ್ರದಲ್ಲಿ ಲಿಂಗಾಯತರ ಮತಗಳೇ ಹೆಚ್ಚಾಗಿದ್ದರೂ ಬ್ರಾಹ್ಮಣ ಸಮಾಜಕ್ಕೆ ಸೇರಿದ ಪ್ರಲ್ಹಾದ್​ ಜೋಶಿ ಸತತ 5ನೇ ಬಾರಿಗೆ ಗೆಲ್ಲುತ್ತಿರುವುದು ಮಾತ್ರ ಇತಿಹಾಸ.

ಹುಬ್ಬಳ್ಳಿ ಧಾರವಾಡ ಪಾಲಿಕೆಯಿಂದ ಕೇಂದ್ರದ ಮಂತಿವರೆಗೆ ಪ್ರಲ್ಹಾದ್​ ಜೋಶಿ ನಡೆದುಬಂದ ಹಾದಿ
ಸಂಸದ ಪ್ರಲ್ಹಾದ್​ ಜೋಶಿ
Follow us on

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರ ಈ ಬಾರಿಯೂ ಬಿಜೆಪಿಯ ತೆಕ್ಕೆಗೆ ಬಿದ್ದಿದೆ. ಐದನೇ ಬಾರಿಯೂ ಗೆಲ್ಲುವ ಮೂಲಕ ಪ್ರಲ್ಹಾದ್​ ಜೋಶಿ (Pralhad Joshi) ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಇಂದು ದೇವರ ಹೆಸರಿನಲ್ಲಿ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಕೂಡ ಮಾಡಿದ್ದಾರೆ. ಆ ಮೂಲಕ ಧಾರವಾಡ ಲೋಕಸಭಾ ಕ್ಷೇತ್ರದ ಇತಿಹಾಸದಲ್ಲಿ ಐದನೇ ಬಾರಿಗೆ ಗೆದ್ದ ಏಕೈಕ ನಾಯಕರಾಗಿ ಹೊರಹೊಮ್ಮಿದ್ದಾರೆ.

ಸಂಸದ ಪ್ರಲ್ಹಾದ್ ಜೋಶಿ ಅವರು ಮೂಲತಃ ಆರ್​ಎಸ್​ಎಸ್​ ಕಾರ್ಯಕರ್ತರು. 1992-94ರ ವರೆಗೆ ನಡೆದ ಈದ್ಗಾ (ಕಿತ್ತೂರು ರಾಣಿ ಚೆನ್ನಮ್ಮ) ಮೈದಾನ ತ್ರಿವರ್ಣ ಧ್ವಜ ಹೋರಾಟ ಸಂಸದ ಪ್ರಲ್ಹಾದ್​ ಜೋಶಿ ಅವರ ರಾಜಕೀಯ ಪ್ರವೇಶಕ್ಕೆ ನಾಂದಿಯಿತು. ಹರ್​ ಘರ್​ ತಿರಂಗಾ ಎಂಬ ಘೋಷವಾಕ್ಯದೊಂದಿಗೆ ಈದ್ಗಾ ಮೈದಾನದಲ್ಲಿ ಧ್ವಜ ಹಾರಿಸಿಯೇ ತೀರುತ್ತೇವೆ ಎಂದು ಆರ್​ಎಸ್​ಎಸ್​ ಮತ್ತು ಬಿಜೆಪಿಯ ಮುಖಂಡರು ಪಣ ತೊಟ್ಟಿದ್ದರು. ಈ ಹೋರಾಟದ ಮುಂದಾಳತ್ವವನ್ನು ಪ್ರಲ್ಹಾದ್​ ಜೋಶಿ, ಬಿಸ್​ ಯಡಿಯೂರಪ್ಪ ವಹಿಸಿಕೊಂಡಿದ್ದರು. ದಿಟ್ಟ ಹೋರಾಟದ ಮೂಲಕ ಈದ್ಗಾ ಮೈದಾನದಲ್ಲಿ ಧ್ವಜ ಹಾರಿಸಿಯೇ ಬಿಟ್ಟರು. ಈ ಹೋರಾಟ ಪ್ರಲ್ಹಾದ್​ ಜೋಶಿ ಅವರಿಗೆ ರಾಜಕೀಯ ದಿಕ್ಕು ತೋರಿಸಿತ್ತು.

ಇದನ್ನೂ ಓದಿ: Pralhad Joshi Oath: ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಪ್ರಲ್ಹಾದ್​ ಜೋಶಿ

ಸಂಸದ ಪ್ರಲ್ಹಾದ್​ ಜೋಶಿ ಅವರು ಧಾರವಾಡ ಲೋಕಸಭಾ ಕ್ಷೇತ್ರದಿಂದ ಪ್ರಥಮ ಬಾರಿಗೆ 2004ರಲ್ಲಿ ಸ್ಪರ್ಧಿಸಿ ಅಭೂತಪೂರ್ವ ಗೆಲುವು ಸಾಧಿಸಿದ್ದರು. ಮತ್ತೆ 2009ರಲ್ಲಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಕಣಕ್ಕೆ ಇಳಿದು ವಿಜಯಪತಾಕೆ ಹಾರಿಸಿದ್ದರು. ಸಂಸದ ಪ್ರಲ್ಹಾದ್​ ಜೋಶಿ ಅವರು 2014 ರಿಂದ 2016 ರವರೆಗೆ ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷರಾಗಿದ್ದರು.

ಇದನ್ನೂ ಓದಿ: Dharwad Constituency Result 2024: ಧಾರವಾಡ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಸಿದ ಪ್ರಲ್ಹಾದ್ ಜೋಶಿ

ನಂತರ ಮೂರನೇ ಬಾರಿಗೆ 2014ರಲ್ಲಿ ಮತ್ತೊಮ್ಮೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದೇ ಕ್ಷೇತ್ರದಿಂದ 2019 ರಲ್ಲಿ ಗೆದ್ದು ನಾಲ್ಕನೇ ಬಾರಿಗೆ ಸಂಸತ್ತು ಪ್ರವೇಶಿಸಿದ ಪ್ರಲ್ಹಾದ್​ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದಾರೆ. ಇದೀಗ 2024ರಲ್ಲೂ ಗೆಲ್ಲುವ ಮೂಲಕ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:02 am, Wed, 5 June 24