AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಎಲ್‌ಪಿಜಿ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆ ಪ್ರಕರಣ; 17 ಗಂಟೆ ಬಳಿಕ ಬೆಂಗಳೂರು-ಪುಣೆ ಮಾರ್ಗದ ರಾಷ್ಟ್ರೀಯ ಹೆದ್ದಾರಿ ಸಂಚಾರ ಆರಂಭ

ನಿನ್ನೆ(ಆ.17) ಧಾರವಾಡ ಬಳಿ ಎಲ್‌ಪಿಜಿ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆಯಾಗಿತ್ತು. ಪರಿಣಾಮವಾಗಿ ಬೆಂಗಳೂರು-ಪುಣೆ ಮಾರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ‌ಗೊಳಿಸಲಾಗಿತ್ತು. ಇದೀಗ ಮತ್ತೆ ಸಂಚಾರವನ್ನು ಆರಂಭಿಸಲಾಗಿದೆ.

ಧಾರವಾಡ: ಎಲ್‌ಪಿಜಿ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆ ಪ್ರಕರಣ; 17 ಗಂಟೆ ಬಳಿಕ ಬೆಂಗಳೂರು-ಪುಣೆ ಮಾರ್ಗದ ರಾಷ್ಟ್ರೀಯ ಹೆದ್ದಾರಿ ಸಂಚಾರ ಆರಂಭ
ಬೆಂಗಳೂರು-ಪುಣೆ ಹೆದ್ದಾರಿ
ಶಿವಕುಮಾರ್ ಪತ್ತಾರ್
| Edited By: |

Updated on: Aug 17, 2023 | 12:57 PM

Share

ಧಾರವಾಡ, ಆ.17: ನಿನ್ನೆ(ಆ.16) ಸಂಜೆ ಬೆಳಗಾವಿ ರಸ್ತೆಯ ಹೈಕೋರ್ಟ್ ಬಳಿ ಅಡುಗೆ ಅನಿಲ ತುಂಬಿದ್ದ ಟ್ಯಾಂಕರ್ ಸೋರಿಕೆಯಾಗಿತ್ತು. ಈ ಹಿನ್ನೆಲೆ ಧಾರವಾಡ(Dharwad) ಜಿಲ್ಲಾಡಳಿತ ಬೆಂಗಳೂರು-ಪುಣೆ(Bengaluru-Pune) ಮಾರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ‌ಗೊಳಿಸಲಾಗಿತ್ತು. ಇದೀಗ 17 ಗಂಟೆ ಬಳಿಕ ರಾಷ್ಟ್ರೀಯ ಹೆದ್ದಾರಿ 4 ಆರಂಭ ಮಾಡಲಾಗಿದೆ. ಹೌದು, ಅನಿಲ ಸೋರಿಕೆ ಹಿನ್ನಲೆ ಮತ್ತೊಂದು ಖಾಲಿ ಗ್ಯಾಸ್ ಟ್ಯಾಂಕರ್​ಗೆ ಅನಿಲ ಸಾಗಾಣಿಕೆ ಮಾಡಿದ್ದು, ಬೆಳಿಗ್ಗೆಯಿಂದ ಡಂಪಿಂಗ್ ಕಾರ್ಯ ಆರಂಭಿಸಲಾಗಿತ್ತು. ಇದೀಗ ಮತ್ತೆ ಸಂಚಾರವನ್ನು ಆರಂಭಿಸಲಾಗಿದೆ.

ನಿನ್ನೆ ಸಂಜೆ ವೇಳೆಗೆ ಸೋರಿಕೆಯಾಗಿದ್ದ ಗ್ಯಾಸ್ ಟ್ಯಾಂಕರ್

ನಿನ್ನೆ(ಆ.17) ಧಾರವಾಡ ಬಳಿ ಎಲ್‌ಪಿಜಿ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆಯಾಗಿತ್ತು. ಪರಿಣಾಮವಾಗಿ ಬೆಂಗಳೂರು-ಪುಣೆ ಮಾರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ‌ಗೊಳಿಸಲಾಗಿತ್ತು. ಬಳಿಕ ಬೆಳಗಾವಿ ಪೊಲೀಸ್​ ವರಿಷ್ಠಾಧಿಕಾರಿ ಡಾ.ಸಂಜೀವ್​​ ಪಾಟೀಲ್ ಒಟ್ಟು 4 ಪರ್ಯಾಯ ಮಾರ್ಗಗಗಳಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಸೂಚಿಸಿದ್ದರು. 1)ಬೆಳಗಾವಿಯಿಂದ ಕಿತ್ತೂರು-ತಡಕೋಡ-ಧಾರವಾಡ-ಹುಬ್ಬಳ್ಳಿಗೆ ಸಂಚಾರ, 2) ಹಿರೇಬಾಗೇವಾಡಿ-ಬೈಲಹೊಂಗಲ ತಡಕೋಡ- ಧಾರವಾಡ ಮೂಲಕ ಸಂಚಾರ, 3) ಸಂಕೇಶ್ವರ-ಹುಕ್ಕೇರಿ ಘಟಪ್ರಭಾ-ಗೋಕಾಕ್-ಧಾರವಾಡ ಮಾರ್ಗದಲ್ಲಿ ಸಂಚಾರ, 4) ನಿಪ್ಪಾಣಿ-ಹುಕ್ಕೇರಿ-ಘಟಪ್ರಭಾ ಗೋಕಾಕ್-ಸವದತ್ತಿ ಮೂಲಕ ಸಂಚಾರ, 5) ಬೆಳಗಾವಿ ಕಡೆಯಿಂದ ಪರ್ಯಾಯ ಮಾರ್ಗ ಬಳಸಿ ಧಾರವಾಡಕ್ಕೆ ಸಂಚರಿಸಬಹುದಾಗಿತ್ತು.

ಇದನ್ನೂ ಓದಿ:ಸೂರತ್​​ನ ರಾಸಾಯನಿಕ ಫ್ಯಾಕ್ಟರಿ ಸಮೀಪ ಟ್ಯಾಂಕರ್​ನಿಂದ ವಿಷಾನಿಲ ಸೋರಿಕೆ; 6 ಮಂದಿ ಸಾವು, 22 ಮಂದಿ ಅಸ್ವಸ್ಥ

ಇನ್ನು ಸ್ಥಳಕ್ಕಾಗಮಿಸಿದ್ದ ಅಗ್ನಿಶಾಮಕ ಸಿಬ್ಬಂದಿಯವರು ಪರಿಶೀಲನೆ ನಡೆಸಿದ್ದರು. ಜೊತೆಗೆ ಗ್ಯಾಸ್ ಸೋರಿಕೆ ತಡೆಯುವುದು ಸುಲಭದ ಮಾತಲ್ಲ ಎಂದು ತಜ್ಞರು ಹೇಳಿದ್ದರು. ಕೂಡಲೇ ಪೊಲೀಸರು ಗ್ಯಾಸ್​ ಟ್ಯಾಂಕರ್​ ಬಳಿ ಯಾರೂ ಹೋಗದಂತೆ ನಿರ್ಬಂಧಿಸಿದ್ದರು. ಟ್ಯಾಂಕರ್​ನಿಂದ ಗ್ಯಾಸ್​ ಸಂಪೂರ್ಣ ಹೊರಹೋಗುವವರೆಗೆ ಕಾಯಲಾಗಿತ್ತು. ಇದರಿಂದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಿಲೋ ಮೀಟರ್​ವರೆಗೆ  ವಾಹನಗಳು ಸಾಲುಗಟ್ಟಿ ನಿಂತಿತ್ತು. ಜೊತೆಗೆ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿತ್ತು. ಇದೀಗ ಅನಿಲವನ್ನು ಡಂಪಿಂಗ್ ಮಾಡಿ, ಭಾರಿ ಅನಾಹುತವನ್ನು ತಡೆಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ