AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಎಲ್‌ಪಿಜಿ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆ ಪ್ರಕರಣ; 17 ಗಂಟೆ ಬಳಿಕ ಬೆಂಗಳೂರು-ಪುಣೆ ಮಾರ್ಗದ ರಾಷ್ಟ್ರೀಯ ಹೆದ್ದಾರಿ ಸಂಚಾರ ಆರಂಭ

ನಿನ್ನೆ(ಆ.17) ಧಾರವಾಡ ಬಳಿ ಎಲ್‌ಪಿಜಿ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆಯಾಗಿತ್ತು. ಪರಿಣಾಮವಾಗಿ ಬೆಂಗಳೂರು-ಪುಣೆ ಮಾರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ‌ಗೊಳಿಸಲಾಗಿತ್ತು. ಇದೀಗ ಮತ್ತೆ ಸಂಚಾರವನ್ನು ಆರಂಭಿಸಲಾಗಿದೆ.

ಧಾರವಾಡ: ಎಲ್‌ಪಿಜಿ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆ ಪ್ರಕರಣ; 17 ಗಂಟೆ ಬಳಿಕ ಬೆಂಗಳೂರು-ಪುಣೆ ಮಾರ್ಗದ ರಾಷ್ಟ್ರೀಯ ಹೆದ್ದಾರಿ ಸಂಚಾರ ಆರಂಭ
ಬೆಂಗಳೂರು-ಪುಣೆ ಹೆದ್ದಾರಿ
ಶಿವಕುಮಾರ್ ಪತ್ತಾರ್
| Updated By: ಕಿರಣ್ ಹನುಮಂತ್​ ಮಾದಾರ್|

Updated on: Aug 17, 2023 | 12:57 PM

Share

ಧಾರವಾಡ, ಆ.17: ನಿನ್ನೆ(ಆ.16) ಸಂಜೆ ಬೆಳಗಾವಿ ರಸ್ತೆಯ ಹೈಕೋರ್ಟ್ ಬಳಿ ಅಡುಗೆ ಅನಿಲ ತುಂಬಿದ್ದ ಟ್ಯಾಂಕರ್ ಸೋರಿಕೆಯಾಗಿತ್ತು. ಈ ಹಿನ್ನೆಲೆ ಧಾರವಾಡ(Dharwad) ಜಿಲ್ಲಾಡಳಿತ ಬೆಂಗಳೂರು-ಪುಣೆ(Bengaluru-Pune) ಮಾರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ‌ಗೊಳಿಸಲಾಗಿತ್ತು. ಇದೀಗ 17 ಗಂಟೆ ಬಳಿಕ ರಾಷ್ಟ್ರೀಯ ಹೆದ್ದಾರಿ 4 ಆರಂಭ ಮಾಡಲಾಗಿದೆ. ಹೌದು, ಅನಿಲ ಸೋರಿಕೆ ಹಿನ್ನಲೆ ಮತ್ತೊಂದು ಖಾಲಿ ಗ್ಯಾಸ್ ಟ್ಯಾಂಕರ್​ಗೆ ಅನಿಲ ಸಾಗಾಣಿಕೆ ಮಾಡಿದ್ದು, ಬೆಳಿಗ್ಗೆಯಿಂದ ಡಂಪಿಂಗ್ ಕಾರ್ಯ ಆರಂಭಿಸಲಾಗಿತ್ತು. ಇದೀಗ ಮತ್ತೆ ಸಂಚಾರವನ್ನು ಆರಂಭಿಸಲಾಗಿದೆ.

ನಿನ್ನೆ ಸಂಜೆ ವೇಳೆಗೆ ಸೋರಿಕೆಯಾಗಿದ್ದ ಗ್ಯಾಸ್ ಟ್ಯಾಂಕರ್

ನಿನ್ನೆ(ಆ.17) ಧಾರವಾಡ ಬಳಿ ಎಲ್‌ಪಿಜಿ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆಯಾಗಿತ್ತು. ಪರಿಣಾಮವಾಗಿ ಬೆಂಗಳೂರು-ಪುಣೆ ಮಾರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ‌ಗೊಳಿಸಲಾಗಿತ್ತು. ಬಳಿಕ ಬೆಳಗಾವಿ ಪೊಲೀಸ್​ ವರಿಷ್ಠಾಧಿಕಾರಿ ಡಾ.ಸಂಜೀವ್​​ ಪಾಟೀಲ್ ಒಟ್ಟು 4 ಪರ್ಯಾಯ ಮಾರ್ಗಗಗಳಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಸೂಚಿಸಿದ್ದರು. 1)ಬೆಳಗಾವಿಯಿಂದ ಕಿತ್ತೂರು-ತಡಕೋಡ-ಧಾರವಾಡ-ಹುಬ್ಬಳ್ಳಿಗೆ ಸಂಚಾರ, 2) ಹಿರೇಬಾಗೇವಾಡಿ-ಬೈಲಹೊಂಗಲ ತಡಕೋಡ- ಧಾರವಾಡ ಮೂಲಕ ಸಂಚಾರ, 3) ಸಂಕೇಶ್ವರ-ಹುಕ್ಕೇರಿ ಘಟಪ್ರಭಾ-ಗೋಕಾಕ್-ಧಾರವಾಡ ಮಾರ್ಗದಲ್ಲಿ ಸಂಚಾರ, 4) ನಿಪ್ಪಾಣಿ-ಹುಕ್ಕೇರಿ-ಘಟಪ್ರಭಾ ಗೋಕಾಕ್-ಸವದತ್ತಿ ಮೂಲಕ ಸಂಚಾರ, 5) ಬೆಳಗಾವಿ ಕಡೆಯಿಂದ ಪರ್ಯಾಯ ಮಾರ್ಗ ಬಳಸಿ ಧಾರವಾಡಕ್ಕೆ ಸಂಚರಿಸಬಹುದಾಗಿತ್ತು.

ಇದನ್ನೂ ಓದಿ:ಸೂರತ್​​ನ ರಾಸಾಯನಿಕ ಫ್ಯಾಕ್ಟರಿ ಸಮೀಪ ಟ್ಯಾಂಕರ್​ನಿಂದ ವಿಷಾನಿಲ ಸೋರಿಕೆ; 6 ಮಂದಿ ಸಾವು, 22 ಮಂದಿ ಅಸ್ವಸ್ಥ

ಇನ್ನು ಸ್ಥಳಕ್ಕಾಗಮಿಸಿದ್ದ ಅಗ್ನಿಶಾಮಕ ಸಿಬ್ಬಂದಿಯವರು ಪರಿಶೀಲನೆ ನಡೆಸಿದ್ದರು. ಜೊತೆಗೆ ಗ್ಯಾಸ್ ಸೋರಿಕೆ ತಡೆಯುವುದು ಸುಲಭದ ಮಾತಲ್ಲ ಎಂದು ತಜ್ಞರು ಹೇಳಿದ್ದರು. ಕೂಡಲೇ ಪೊಲೀಸರು ಗ್ಯಾಸ್​ ಟ್ಯಾಂಕರ್​ ಬಳಿ ಯಾರೂ ಹೋಗದಂತೆ ನಿರ್ಬಂಧಿಸಿದ್ದರು. ಟ್ಯಾಂಕರ್​ನಿಂದ ಗ್ಯಾಸ್​ ಸಂಪೂರ್ಣ ಹೊರಹೋಗುವವರೆಗೆ ಕಾಯಲಾಗಿತ್ತು. ಇದರಿಂದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಿಲೋ ಮೀಟರ್​ವರೆಗೆ  ವಾಹನಗಳು ಸಾಲುಗಟ್ಟಿ ನಿಂತಿತ್ತು. ಜೊತೆಗೆ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿತ್ತು. ಇದೀಗ ಅನಿಲವನ್ನು ಡಂಪಿಂಗ್ ಮಾಡಿ, ಭಾರಿ ಅನಾಹುತವನ್ನು ತಡೆಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!