AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಎಲ್‌ಪಿಜಿ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆ ಪ್ರಕರಣ; 17 ಗಂಟೆ ಬಳಿಕ ಬೆಂಗಳೂರು-ಪುಣೆ ಮಾರ್ಗದ ರಾಷ್ಟ್ರೀಯ ಹೆದ್ದಾರಿ ಸಂಚಾರ ಆರಂಭ

ನಿನ್ನೆ(ಆ.17) ಧಾರವಾಡ ಬಳಿ ಎಲ್‌ಪಿಜಿ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆಯಾಗಿತ್ತು. ಪರಿಣಾಮವಾಗಿ ಬೆಂಗಳೂರು-ಪುಣೆ ಮಾರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ‌ಗೊಳಿಸಲಾಗಿತ್ತು. ಇದೀಗ ಮತ್ತೆ ಸಂಚಾರವನ್ನು ಆರಂಭಿಸಲಾಗಿದೆ.

ಧಾರವಾಡ: ಎಲ್‌ಪಿಜಿ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆ ಪ್ರಕರಣ; 17 ಗಂಟೆ ಬಳಿಕ ಬೆಂಗಳೂರು-ಪುಣೆ ಮಾರ್ಗದ ರಾಷ್ಟ್ರೀಯ ಹೆದ್ದಾರಿ ಸಂಚಾರ ಆರಂಭ
ಬೆಂಗಳೂರು-ಪುಣೆ ಹೆದ್ದಾರಿ
ಶಿವಕುಮಾರ್ ಪತ್ತಾರ್
| Edited By: |

Updated on: Aug 17, 2023 | 12:57 PM

Share

ಧಾರವಾಡ, ಆ.17: ನಿನ್ನೆ(ಆ.16) ಸಂಜೆ ಬೆಳಗಾವಿ ರಸ್ತೆಯ ಹೈಕೋರ್ಟ್ ಬಳಿ ಅಡುಗೆ ಅನಿಲ ತುಂಬಿದ್ದ ಟ್ಯಾಂಕರ್ ಸೋರಿಕೆಯಾಗಿತ್ತು. ಈ ಹಿನ್ನೆಲೆ ಧಾರವಾಡ(Dharwad) ಜಿಲ್ಲಾಡಳಿತ ಬೆಂಗಳೂರು-ಪುಣೆ(Bengaluru-Pune) ಮಾರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ‌ಗೊಳಿಸಲಾಗಿತ್ತು. ಇದೀಗ 17 ಗಂಟೆ ಬಳಿಕ ರಾಷ್ಟ್ರೀಯ ಹೆದ್ದಾರಿ 4 ಆರಂಭ ಮಾಡಲಾಗಿದೆ. ಹೌದು, ಅನಿಲ ಸೋರಿಕೆ ಹಿನ್ನಲೆ ಮತ್ತೊಂದು ಖಾಲಿ ಗ್ಯಾಸ್ ಟ್ಯಾಂಕರ್​ಗೆ ಅನಿಲ ಸಾಗಾಣಿಕೆ ಮಾಡಿದ್ದು, ಬೆಳಿಗ್ಗೆಯಿಂದ ಡಂಪಿಂಗ್ ಕಾರ್ಯ ಆರಂಭಿಸಲಾಗಿತ್ತು. ಇದೀಗ ಮತ್ತೆ ಸಂಚಾರವನ್ನು ಆರಂಭಿಸಲಾಗಿದೆ.

ನಿನ್ನೆ ಸಂಜೆ ವೇಳೆಗೆ ಸೋರಿಕೆಯಾಗಿದ್ದ ಗ್ಯಾಸ್ ಟ್ಯಾಂಕರ್

ನಿನ್ನೆ(ಆ.17) ಧಾರವಾಡ ಬಳಿ ಎಲ್‌ಪಿಜಿ ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆಯಾಗಿತ್ತು. ಪರಿಣಾಮವಾಗಿ ಬೆಂಗಳೂರು-ಪುಣೆ ಮಾರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ‌ಗೊಳಿಸಲಾಗಿತ್ತು. ಬಳಿಕ ಬೆಳಗಾವಿ ಪೊಲೀಸ್​ ವರಿಷ್ಠಾಧಿಕಾರಿ ಡಾ.ಸಂಜೀವ್​​ ಪಾಟೀಲ್ ಒಟ್ಟು 4 ಪರ್ಯಾಯ ಮಾರ್ಗಗಗಳಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಸೂಚಿಸಿದ್ದರು. 1)ಬೆಳಗಾವಿಯಿಂದ ಕಿತ್ತೂರು-ತಡಕೋಡ-ಧಾರವಾಡ-ಹುಬ್ಬಳ್ಳಿಗೆ ಸಂಚಾರ, 2) ಹಿರೇಬಾಗೇವಾಡಿ-ಬೈಲಹೊಂಗಲ ತಡಕೋಡ- ಧಾರವಾಡ ಮೂಲಕ ಸಂಚಾರ, 3) ಸಂಕೇಶ್ವರ-ಹುಕ್ಕೇರಿ ಘಟಪ್ರಭಾ-ಗೋಕಾಕ್-ಧಾರವಾಡ ಮಾರ್ಗದಲ್ಲಿ ಸಂಚಾರ, 4) ನಿಪ್ಪಾಣಿ-ಹುಕ್ಕೇರಿ-ಘಟಪ್ರಭಾ ಗೋಕಾಕ್-ಸವದತ್ತಿ ಮೂಲಕ ಸಂಚಾರ, 5) ಬೆಳಗಾವಿ ಕಡೆಯಿಂದ ಪರ್ಯಾಯ ಮಾರ್ಗ ಬಳಸಿ ಧಾರವಾಡಕ್ಕೆ ಸಂಚರಿಸಬಹುದಾಗಿತ್ತು.

ಇದನ್ನೂ ಓದಿ:ಸೂರತ್​​ನ ರಾಸಾಯನಿಕ ಫ್ಯಾಕ್ಟರಿ ಸಮೀಪ ಟ್ಯಾಂಕರ್​ನಿಂದ ವಿಷಾನಿಲ ಸೋರಿಕೆ; 6 ಮಂದಿ ಸಾವು, 22 ಮಂದಿ ಅಸ್ವಸ್ಥ

ಇನ್ನು ಸ್ಥಳಕ್ಕಾಗಮಿಸಿದ್ದ ಅಗ್ನಿಶಾಮಕ ಸಿಬ್ಬಂದಿಯವರು ಪರಿಶೀಲನೆ ನಡೆಸಿದ್ದರು. ಜೊತೆಗೆ ಗ್ಯಾಸ್ ಸೋರಿಕೆ ತಡೆಯುವುದು ಸುಲಭದ ಮಾತಲ್ಲ ಎಂದು ತಜ್ಞರು ಹೇಳಿದ್ದರು. ಕೂಡಲೇ ಪೊಲೀಸರು ಗ್ಯಾಸ್​ ಟ್ಯಾಂಕರ್​ ಬಳಿ ಯಾರೂ ಹೋಗದಂತೆ ನಿರ್ಬಂಧಿಸಿದ್ದರು. ಟ್ಯಾಂಕರ್​ನಿಂದ ಗ್ಯಾಸ್​ ಸಂಪೂರ್ಣ ಹೊರಹೋಗುವವರೆಗೆ ಕಾಯಲಾಗಿತ್ತು. ಇದರಿಂದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಿಲೋ ಮೀಟರ್​ವರೆಗೆ  ವಾಹನಗಳು ಸಾಲುಗಟ್ಟಿ ನಿಂತಿತ್ತು. ಜೊತೆಗೆ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿತ್ತು. ಇದೀಗ ಅನಿಲವನ್ನು ಡಂಪಿಂಗ್ ಮಾಡಿ, ಭಾರಿ ಅನಾಹುತವನ್ನು ತಡೆಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ