AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದಲ್ಲಿ ಮಾವಿನ ಬೆಳೆಗೆ ಮಂಜಿನ ಕಾಟ; ಉತ್ತಮ ಆದಾಯದ ನಿರೀಕ್ಷೆಯಲ್ಲಿದ್ದ ರೈತರು ಕಂಗಾಲು

ಮಾವಿನ ನಾಡು ಧಾರವಾಡದಲ್ಲಿ ಈ ಬಾರಿಯೂ ರೈತರಿಗೆ ಸಂಕಷ್ಟದ ಸಮಯ ಶುರುವಾಗಿದೆ. ಕಳೆದ ಹಲವಾರು ವರ್ಷಗಳಿಂದ ಒಂದಿಲ್ಲಾ ಒಂದು ಸಮಸ್ಯೆಯಿಂದ ನಷ್ಟ ಅನುಭವಿಸುತ್ತಿರುವ ಮಾವು ಬೆಳೆಗಾರರಿಗೆ ಈ ಬಾರಿ ಒಳ್ಳೆಯ ಬೆಳೆಯ ನಿರೀಕ್ಷೆ ಇತ್ತು. ಆದರೆ, ಇದೀಗ ಎರಡು ದಿನಗಳಿಂದ ಬೀಳುತ್ತಿರುವ ಮಂಜು ಆತಂಕವನ್ನುಂಟು ಮಾಡಿದೆ. ಈ ಮಂಜು ಹೀಗೆಯೇ ಮುಂದುವರೆದಲ್ಲಿ ಈ ಬಾರಿಯೂ ರೈತರು ತೀವ್ರ ನಷ್ಟ ಅನುಭವಿಸೋದು ಸತ್ಯ.

ಧಾರವಾಡದಲ್ಲಿ ಮಾವಿನ ಬೆಳೆಗೆ ಮಂಜಿನ ಕಾಟ; ಉತ್ತಮ ಆದಾಯದ ನಿರೀಕ್ಷೆಯಲ್ಲಿದ್ದ ರೈತರು ಕಂಗಾಲು
ಧಾರವಾಡದಲ್ಲಿ ಮಾವಿನ ಬೆಳೆಗೆ ಮಂಜಿನ ಕಾಟ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Mar 03, 2024 | 7:19 PM

Share

ಧಾರವಾಡ, ಮಾ.03: ಆಕಾಶದೆತ್ತರಕ್ಕೆ ಬೆಳೆದಿರುವ ಮರಗಳ ಮೇಲ್ತುದಿಯಲ್ಲಿ ಇಬ್ಬನಿ ಕಾಣುತ್ತಿದ್ದರೆ ಅದನ್ನು ನೋಡೋದೇ ಒಂದು ಭಾಗ್ಯ. ಆದರೆ, ಈ ಇಬ್ಬನಿ ಬೀಳುವುದಕ್ಕೂ ಒಂದು ಕಾಲವಿದೆ. ಅದಾಗಲೇ ಬೇಸಿಗೆ ಆರಂಭವಾಗಿದ್ದರೂ ಧಾರವಾಡ (Dharwad)ದಲ್ಲಿ ಈ ರೀತಿ ಬೀಳುತ್ತಿರುವ ಇಬ್ಬನಿಯಿಂದಾಗಿ ಮಾವು ಬೆಳೆಗಾರರು(Mango growers) ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೊದಲೇ ಈ ಬಾರಿ ಮಳೆ ಇಲ್ಲದೇ ಅಂತರ್ಜಲ ಕುಸಿದಿದೆ. ಅಂಥಹದರಲ್ಲಿಯೂ ರೈತರು ಹೇಗೋ ನೀರುಣಿಸಿ ಮರಗಳನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ಅದರಲ್ಲೂ ಈ ಬಾರಿ ಅಕಾಲಿಕ ಮಳೆಯಾಗದೇ ಇದ್ದಿದ್ದಕ್ಕೆ ಗಿಡಗಳು ಹೂವಿನಿಂದ ತುಂಬಿಕೊಂಡಿದ್ದವು. ಇದರಿಂದಾಗಿ ರೈತರು ಉತ್ತಮ ಮಾವಿನ ಬೆಳೆಯ ನಿರೀಕ್ಷೆಯಲ್ಲಿದ್ದರು. ಆದರೆ, ಇದೀಗ ಎರಡು ದಿನಗಳಿಂದ ಮಂಜು ಬೀಳುತ್ತಿದ್ದು, ಅದು ಮಾವಿನ ಫಸಲಿನ ಮೇಲೆ ಅಡ್ಡ ಪರಿಣಾಮ ಬಿರುವ ಆತಂಕ ಶುರುವಾಗಿದೆ.

ಸಾಮಾನ್ಯವಾಗಿ ನವೆಂಬರ್, ಡಿಸೆಂಬರ್ ತಿಂಗಳಲ್ಲಿ ಇಬ್ಬನಿ ಬೀಳುತ್ತದೆ. ಆಗಷ್ಟೇ ಗಿಡಗಳಲ್ಲಿ ಹೂವು ಕಟ್ಟಿಕೊಂಡಿರುತ್ತದೆ. ಆದರೆ, ಗಿಡಗಳು ಕಾಯಿ ಕಟ್ಟಿ, ಕಾಯಿಗಳು ದೊಡ್ಡವಾಗುವ ಸಂದರ್ಭದಲ್ಲಿ ಈ ರೀತಿ ಇಬ್ಬನಿ ಬಿದ್ದರೆ ಅನೇಕ ಸಮಸ್ಯೆಗಳು ಉಂಟಾಗುತ್ತವೆ. ಹೀಗೆ ಇಬ್ಬನಿ ಬೀಳೋದ್ರಿಂದ ಜಿಗುಟು, ಬೂದು ರೋಗಗಳು ಗಿಡಗಳಲ್ಲಿ ಕಾಣಿಸಿಕೊಂಡರೆ ಅಲ್ಲಿಗೆ ಮಾವಿನ ಫಸಲಿನ ಆಸೆಯನ್ನು ಕೈ ಬಿಟ್ಟಂತೆಯೇ. ಏಕೆಂದರೆ ಈ ಜಿಗುಟು ರೋಗದಿಂದ ಮಾವಿನ ಕಾಯಿಯ ಮೇಲೆ ಕಪ್ಪು ಬಣ್ಣ ಹತ್ತಿಕೊಳ್ಳುತ್ತದೆ. ಇದರಿಂದ ದರ ಬರುವುದಿಲ್ಲ.

ಇದನ್ನೂ ಓದಿ:ಬರಗಾಲದ ಮಧ್ಯೆ ರೈತರ ಕೈ ಹಿಡಿದ ಮಾವು ಬೆಳೆ; ಮುಂದಿನ ವರ್ಷದ ಮಾರ್ಚ್‌ನಲ್ಲಿಯೇ ಮಾರುಕಟ್ಟೆಗೆ ಮಾವು ಪ್ರವೇಶ

ಈ ಇಬ್ಬನಿಯ ಮತ್ತೊಂದು ಸಮಸ್ಯೆ ಅಂದರೆ, ಈ ರೀತಿ ಇಬ್ಬನಿ ಬಿದ್ದರೆ ಇದೀಗ ಕಟ್ಟಿಕೊಂಡಿರುವ ಕಾಯಿಗಳು ಕೂಡ ಉದುರಿ ಹೋಗುತ್ತವೆ. ಹೀಗಾಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳಿಗ್ಗೆ ಮಂಜು ಬೀಳುತ್ತಿದ್ದರೆ ಮಧ್ಯಾಹ್ನದ ಹೊತ್ತಿಗೆ ಭಾರೀ ಬಿಸಿಲು ಈ ಬೆಳೆಗೆ ಸಮಸ್ಯೆ ಉಂಟು ಮಾಡುತ್ತಿದೆ. ನಾಲ್ಕಾರು ವರ್ಷಗಳಲ್ಲಿ ಈ ಬಾರಿಯೇ ಗಿಡಗಳು ಉತ್ತಮವಾಗಿ ಹೂವುಗಳನ್ನು ಕಟ್ಟಿಕೊಂಡಿವೆ. ಆದರೆ, ಇದೀಗ ಮಂಜು ಹಾಗೂ ಅತಿ ಬಿಸಿಲಿನಿಂದಾಗಿ ಇಳುವರಿಗೆ ತೊಂದರೆಯಾಗಲಿದೆ. ಹೀಗಾದರೆ ಮತ್ತೆ ಈ ಬಾರಿ ಮಾವಿನ ಫಸಲು ಬರೋದು ಅಷ್ಟಕ್ಕಷ್ಟೇ. ಈ ಬಾರಿಯಾದರೂ ಉತ್ತಮ ಇಳುವರಿ ಪಡೆಯಬಹುದು ಅಂದುಕೊಂಡಿದ್ದ ರೈತರಿಗೆ ಮತ್ತೆ ನಿರಾಸೆ ಆಗುತ್ತಿರುವುದು ಮಾತ್ರ ವಿಪರ್ಯಾಸದ ಸಂಗತಿಯೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:17 pm, Sun, 3 March 24

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ