AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಸಿಗರೇಟ್​ಗಾಗಿ ಮೊಬೈಲ್ ಟವರ್ ಏರಿ ಕುಳಿತ ಮಾನಸಿಕ ಅಸ್ವಸ್ಥ

ಮಾನಸಿಕ ಅಸ್ವಸ್ಥನೊಬ್ಬ ಮೊಬೈಲ್ ಟಾವರ್ ಮೇಲೆ ಹತ್ತಿ ಕುಳಿತು ಜನರನ್ನು ಬೆಚ್ಚಿಬೀಳಿಸಿದ ಘಟನೆ ಧಾರವಾಡದ ಆಲೂರು ವೆಂಕಟರಾವ್ ವೃತ್ತದ ಬಳಿ ನಡೆದಿದೆ.

ಧಾರವಾಡ: ಸಿಗರೇಟ್​ಗಾಗಿ ಮೊಬೈಲ್ ಟವರ್ ಏರಿ ಕುಳಿತ ಮಾನಸಿಕ ಅಸ್ವಸ್ಥ
ಮೊಬೈಲ್ ಟವರ್ ಏರಿ ಕುಳಿತ ಮಾನಸಿಕ ಅಸ್ವಸ್ಥ
TV9 Web
| Updated By: Rakesh Nayak Manchi|

Updated on:Jan 17, 2023 | 6:24 PM

Share

ಧಾರವಾಡ: ಸದ್ಯ ಪರಿಸ್ಥಿತಿ ಹೇಗಿದೆ ಎಂದರೆ ಯಾರು ಏನೇ ನೋವು ಮಾಡಿದರು ಅದನ್ನು ಪ್ರತಿಭಟಿಸಲು ಸಿಗುವ ಸ್ಥಳವೆಂದರೆ ಅದು ಮೊಬೈಲ್ ಟವರ್. ಮನೆಯಲ್ಲಿ ಹೆಂಡತಿ ಕಾಟ, ಪ್ರೀತಿ ನಿರಾಕರಿಸಿದರೆ, ಜಮೀನು ವಿವಾದ, ಸರ್ಕಾರದ ಇಲಾಖೆಯಿಂದ ಆಗಬೇಕಾಗಿದ್ದ ಕೆಲಸ ಆಗದಿದ್ದಾಗ ಅಥವಾ ಇನ್ಯಾವುದೇ ಸಂದರ್ಭವನ್ನು ಪ್ರತಿಭಟಿಸಲು ಮೊಬೈಲ್ ಟವರ್ ಏರುತ್ತಾರೆ. ಇದೇ ರೀತಿಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರು ಸಿಗರೇಟ್​ ಮತ್ತು ಸಿಗರ್​ಲೈಟ್​​ಗಾಗಿ ಮೊಬೈಲ್ ಟವರ್ ಏರಿ (Man climbs mobile tower) ಜನರನ್ನು ಬೆಚ್ಚಿಬೀಳಿಸಿದ ಘಟನೆ ಧಾರವಾಡದ (Dharwad) ಆಲೂರು ವೆಂಕಟರಾವ್ ವೃತ್ತದ ಬಳಿ ನಡೆದಿದೆ.

ಮಾನಸಿಕ ಅಸ್ವಸ್ಥನಾಗಿರುವುದರಿಂದ ಆತ ಏನು ಬೇಕಾದರೂ ಮಾಡಬಲ್ಲ. ಹೀಗಾಗಿ ಈತನನ್ನು ಸುರಕ್ಷಿತವಾಗಿ ಕೆಳಗಿಳಿಸುವುದು ಕಷ್ಟದ ಕೆಲಸ. ಇದೇ ಕಾರಣಕ್ಕೆ ಸ್ಥಳದಲ್ಲಿ ಜಮಾಯಿಸಿದ ಜನರು ಜನರು ಹೇಗಪ್ಪಾ ಈತನನ್ನು ಕೆಳಗಿಳಿಸುವುದು ಎಂಬ ಚಿಂತೆಯಲ್ಲಿದ್ದಾಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ವ್ಯಕ್ತಿಯ ಮನವೋಲಿಸುವ ಯತ್ನ ಮಾಡಿದ್ದಾರೆ.

ಇದನ್ನೂ ಓದಿ: ಮೊಬೈಲ್ ಟವರ್​​ಗಳನ್ನೇ ಟಾರ್ಗೇಟ್ ಮಾಡಿ RRU ಕಾರ್ಡ್​​ಗಳ ಕಳವು; ದೂರು ನೀಡಿದ ಇಂಡಸ್ ಟವರ್ ಕಂಪನಿ

ಟಾವರ್ ಏರಿ ಕುಳಿತ ಮಾನಸಿಕ ಅಸ್ವಸ್ಥನನ್ನು ಸುರಕ್ಷಿತವಾಗಿ ಕೆಳಗಿಳಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಓರ್ವ ಅಗ್ನಿಶಾಮಕದಳ ಸಿಬ್ಬಂದಿ ಮತ್ತು ಓರ್ವ ಪೊಲೀಸ್ ಸಿಬ್ಬಂದಿ ಮಾನಸಿಕ ವ್ಯಕ್ತಿಯ ಮನವೋಲಿಸುತ್ತಾ, ಮಾತನಾಡುತ್ತಾ ಟವರ್ ಒಳಗಿಂದ ಮೇಲಕ್ಕೆ ಹತ್ತಿದ್ದಾರೆ. ಈ ವೇಳೆ ಕೈಯಲ್ಲಿ ರಾಡ್ ಹಿಡಿದುಕೊಂಡಿರುವ ಮಾನಸಿಕ ಅಸ್ವಸ್ಥ ವ್ಯಕ್ತಿ ಹಾರುವ ಬೆದರಿಕೆ ಹಾಕಿದ್ದಾನೆ. ಹೀಗಾಗಿ ವ್ಯಕ್ತಿಯ ಅಮೂಲ್ಯ ಜೀವದ ಹಿನ್ನಲೆ ವ್ಯಕ್ತಿಯ ಬಳಿ ಹೋಗಲು ಹಿಂದೇಟು ಹಾಕಿದ್ದಾರೆ.

ವ್ಯಕ್ತಿಯನ್ನು ಮನವೋಲಿಸುವ ನಿಟ್ಟಿನಲ್ಲಿ ಸಿಬ್ಬಂದಿ ಊಟ ನೀಡಿದ್ದಾರೆ. ಆದರೆ ಊಟವನ್ನು ಆತ ಎಸೆದಿದ್ದು, ಸಿಗರೇಟ್ ಮತ್ತು ಸಿಗರ್​ಲೈಟ್ ಬೇಕೆಂದು ಪಟ್ಟುಹಿಡಿದು ಟವರ್ ತುತ್ತ ತುದಿಯಲ್ಲಿ ಕುಳಿತುಕೊಂಡಿದ್ದಾನೆ. ಹೀಗಾಗಿ ಪೊಲೀಸರು ರಕ್ಷಣಾ ಕಾರ್ಯವನ್ನು ಮುಂದುವರಿಸಿದ್ದು, ಸಿಗರೇಟ್ ಮತ್ತು ಸಿಗರ್​ಲೈಟ್ ನೀಡಿ ಟವರ್​ನಿಂದ ಕೆಳಗಿಳಿಸುವ ಪ್ಲಾನ್ ಹಾಕಿಕೊಂಡಿದ್ದಾರೆ.

ಇನ್ನಷ್ಟು ಅಪ್​ಡೇಟ್ಸ್​ಗಾಗಿ ನಿರೀಕ್ಷಿಸಿ…

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:44 pm, Tue, 17 January 23

ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಯಡಿಯೂರಪ್ಪ ವಿರುದ್ಧ ನಾನು ವಾಗ್ದಾಳಿ ನಡೆಸಲೇ ಇಲ್ಲ: ಲಿಂಬಾವಳಿ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಪಕ್ಷದ ಕಾರ್ಯದರ್ಶಿ ಮತ್ತು ಅಧಿಕಾರಿಗಳ ಸಭೆ ರಾಮನಗರದಲ್ಲಿ ನಡೆಯಲಿದೆ: ಶಾಸಕ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ