AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಕಳೆನಾಶಕ ಸಿಂಪಡಿಸಿ ಒಂದೂವರೆ ಎಕರೆಯಲ್ಲಿ ಬೆಳೆದಿದ್ದ ಹತ್ತಿ ನಾಶ ಮಾಡಿದ ದುಷ್ಕರ್ಮಿಗಳು

ಕಿಡಿಗೇಡಿಗಳ ಈ ಕೃತ್ಯದಿಂದ ರೈತ ಗಂಗಪ್ಪ ಆಘಾತಕ್ಕೆ ಒಳಗಾಗಿದ್ದಾರೆ. ರಾತ್ರೋರಾತ್ರಿ ಕಳೆನಾಶಕ ಹೊಡೆದು ಹೋಗಿರುವ ಕಿಡಿಗೇಡಿಗಳು ಹೊಟ್ಟೆ ಕಿಚ್ಚಿನಿಂದ ಹೀಗೆ ಮಾಡಿರಬಹುದು ಅನ್ನೋ ಅನುಮಾನ ಶುರುವಾಗಿದೆ.

ಧಾರವಾಡ: ಕಳೆನಾಶಕ ಸಿಂಪಡಿಸಿ ಒಂದೂವರೆ ಎಕರೆಯಲ್ಲಿ ಬೆಳೆದಿದ್ದ ಹತ್ತಿ ನಾಶ ಮಾಡಿದ ದುಷ್ಕರ್ಮಿಗಳು
ಕಳೆನಾಶಕ ಸಿಂಪಡಿಸಿದ್ದರಿಂದ ಒಣಗುತ್ತಿರುವ ಹತ್ತಿ ಬೆಳೆ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Oct 24, 2023 | 3:28 PM

Share

ಧಾರವಾಡ, ಅಕ್ಟೋಬರ್ 24: ರಾಜ್ಯದಲ್ಲಿ ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟಿದ್ದರಿಂದ ರೈತರು ತೀರಾ ಸಂಕಷ್ಟದಲ್ಲಿದ್ದಾರೆ. ಅಳಿದುಳಿದ ಬೆಳೆ ಕಾಪಾಡಿಕೊಳ್ಳಲು ರೈತರು ಅಕ್ಷರಶಃ ಹರಸಾಹಸ ಪಡುತ್ತಿದ್ದಾರೆ. ಇಂಥ ಪರಿಸ್ಥಿತಿಯಲ್ಲಿಯೇ ಧಾರವಾಡದಲ್ಲಿ (Dharawad) ರೈತನೊಬ್ಬನ ಹತ್ತಿ (Cotton) ಬೆಳೆಗೆ ನೀಚರು ರಾತ್ರೋರಾತ್ರಿ ಕಳೆನಾಶಕ ಸಿಂಪಡಿಸಿ ಹಾನಿ ಮಾಡಿದ್ದಾರೆ. ಇದರಿಂದಾಗಿ ಕೈಗೆ ಬಂದಿದ್ದ ಹತ್ತಿ ಬೆಳೆ ಇದೀಗ ಒಣಗಿ ಹೋಗುತ್ತಿದೆ.

ಸಮೃದ್ಧವಾಗಿ ಬೆಳೆದು ನಿಂತಿರೋ ಹತ್ತಿ ಬೆಳೆ, ಈಗಾಗಲೇ ಕಾಯಿ ಒಡೆದು ಹೊರಬಂದಿರೋ ಬಿಳಿ ಬಂಗಾರ, ಆದರೆ ಹಸಿರು ಬೆಳೆಯ ಮಧ್ಯೆಯೇ ಸಂಪೂರ್ಣ ಒಣಗಿ ಹೋಗುತ್ತಿರೋ ಬೆಳೆ, ಇದಕ್ಕೆಲ್ಲ ಕಾರಣ ಅಮಾಯಕ ರೈತನ ಮೇಲೆ ನೀಚರ ಸೇಡು. ಹೌದು, ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿನ ಗಂಗಪ್ಪ ಬಾರ್ಕಿ ಎಂಬ ರೈತರ ಜಮೀನಿನಲ್ಲಿ ನೀಚರು ಅಟ್ಟಹಾಸ ಪ್ರದರ್ಶಿಸಿದ್ದಾರೆ. ಒಂದೂವರೆ ಎಕರೆ ಪ್ರದೇಶದಲ್ಲಿ ಅವರು ಕಷ್ಟಪಟ್ಟು ಹತ್ತಿ ಬೆಳೆದಿದ್ದಾರೆ. ಇನ್ನೇನು ಹತ್ತಿ ಕಾಯಿಯೆಲ್ಲ ಒಡೆದು, ಇನ್ನೇನು ಹತ್ತಿ ಬಿಡಿಸಬೇಕು ಅನ್ನೋ ಸಿದ್ಧತೆಯಲ್ಲಿರೋವಾಗ ಗಂಗಪ್ಪ ಅವರಿಗೆ ಆಘಾತವೊಂದು ಎದುರಾಗಿದೆ. ಬರಗಾಲ ಇದ್ದರೂ ಗಂಗಪ್ಪ ನೀರು ಹಾಯಿಸಿ ಹತ್ತಿ ಬೆಳೆದಿದ್ದಾರೆ. ಸೊಂಪಾಗಿ ಬೆಳೆದ ಹತ್ತಿಯ ಫಸಲು ಇನ್ನೇನು ಕೈಸೇರಬೇಕು ಎನ್ನುವಷ್ಟರಲ್ಲಿ ಕಿಡಿಗೇಡಿಗಳು ರಾತ್ರೋರಾತ್ರಿ ಹತ್ತಿ ಬೆಳೆಗೆ ಕಳೆನಾಶಕ ಹೊಡೆದು ಪರಾರಿಯಾಗಿದ್ದಾರೆ. ಇದರಿಂದಾಗಿ ಬೆಳೆಯಲ್ಲಾ ಒಣಗುತ್ತಿದೆ.

ಕಿಡಿಗೇಡಿಗಳ ಈ ಕೃತ್ಯದಿಂದ ರೈತ ಗಂಗಪ್ಪ ಆಘಾತಕ್ಕೆ ಒಳಗಾಗಿದ್ದಾರೆ. ರಾತ್ರೋರಾತ್ರಿ ಕಳೆನಾಶಕ ಹೊಡೆದು ಹೋಗಿರುವ ಕಿಡಿಗೇಡಿಗಳು ಹೊಟ್ಟೆ ಕಿಚ್ಚಿನಿಂದ ಹೀಗೆ ಮಾಡಿರಬಹುದು ಅನ್ನೋ ಅನುಮಾನ ಶುರುವಾಗಿದೆ. ಏಕೆಂದರೆ ಗಂಗಪ್ಪ ಈ ಸಲ ಒಂದು ಎಕರೆಯಲ್ಲಿ ಟೊಮ್ಯಾಟೊ ಬೆಳೆದಿದ್ದರು‌. ಅದಕ್ಕೆ ಒಳ್ಳೆ ಬೆಲೆ ಸಿಕ್ಕು ಸಾಕಷ್ಟು ಲಾಭವನ್ನು ಗಳಿಸಿದ್ದರು. ಗಂಗಪ್ಪ ಟೊಮ್ಯಾಟೋ ಬೆಳೆಯಲು ಕೇವಲ 2 ಲಕ್ಷ ರೂಪಾಯಿ ಬಂಡವಾಳ ಹಾಕಿ, ಸುಮಾರು 15 ಲಕ್ಷ ರೂಪಾಯಿ ಆದಾಯ ತೆಗೆದಿದ್ದರಂತೆ. ಇದು ಅನೇಕರಿಗೆ ಹೊಟ್ಟೆ ಉರಿ ತರಿಸಿತ್ತಂತೆ. ಬಹುಶಃ ಇದೇ ಹೊಟ್ಟೆ ಕಿಚ್ಚಿನಿಂದ ಹೀಗೆ ಮಾಡಿರಬಹುದು ಅನ್ನೋದು ಸ್ಥಳೀಯರ ಅನುಮಾನ.

ಇದನ್ನೂ ಓದಿ: ಧಾರವಾಡ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಚೇರಿಯಲ್ಲಿ ಕೋಟಿಗೂ ಅಧಿಕ ಹಣ ಕಳ್ಳತನ

ಈ ಬಾರಿ ಮಳೆಯಾಗದೇ ಎಲ್ಲ ಬೆಳೆಗೂ ಸಂಕಷ್ಟವೊದಗಿದೆ. ಅದರಲ್ಲೂ ಹೆಚ್ಚು ಶ್ರಮ ಹಾಗೂ ಖರ್ಚನ್ನು ಬೇಡೋ ಹತ್ತಿಯಂಥ ವಾಣಿಜ್ಯ ಬೆಳೆಗಳ ಕಥೆಯನ್ನಂತೂ ಹೇಳಲೇಬಾರದು. ಏನೆಲ್ಲ ಕಷ್ಟಪಟ್ಟು ಹೀಗೆ ರೈತರು ಬೆಳೆದರೆ ಯಾರೋ ಬಂದು ಇಂಥ ಕೃತ್ಯವೆಸಗಿ ಹೋಗುತ್ತಿರೋದು ವಿಪರ್ಯಾಸದ ಸಂಗತಿ. ಇದೀಗ ರೈತ ಗಂಗಪ್ಪ ಪೊಲೀಸರ ಮೊರೆ ಹೋಗಲು ನಿರ್ಧರಿಸಿದ್ದು, ಪೊಲೀಸರು ಈ ಕೃತ್ಯವೆಸಗಿದವರನ್ನು ಪತ್ತೆ ಹಚ್ಚಿ, ಸೂಕ್ತ ಕ್ರಮ ತೆಗೆದುಕೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ