AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಕೆಎಸ್​ಆರ್​ಟಿಸಿ ಬಸ್​ ಚಾಲಕನ ಮೇಲೆ ಮೂವರು ಯುವಕರಿಂದ ಹಲ್ಲೆ

ಮೂವರು ಯುವಕರಿಂದ ಕೆಎಸ್​ಆರ್​ಟಿಸಿ ಬಸ್​ ಚಾಲಕನ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಹೊಸ ಬಸ್ ನಿಲ್ದಾಣ ಬಳಿ ನಡೆದಿದೆ. ಟ್ರ್ಯಾಕ್ಟರ್​ ಹಿಂದೆ ತೆಗೆದುಕೊಳ್ಳಲು ಒಪ್ಪದಿದ್ದಾಗ ಇಬ್ಬರು ಚಾಲಕರ ನಡುವೆ ವಾಗ್ವಾದ ಉಂಟಾಗಿದೆ. ಈ ವೇಳೆ ಬಸ್​ ಚಾಲಕನ​ ಮೇಲೆ ಹಲ್ಲೆ ಟ್ರ್ಯಾಕ್ಟರ್ ಚಾಲಕ ಸೇರಿದಂತೆ ಮೂವರಿಂದ ಹಲ್ಲೆ ಮಾಡಲಾಗಿದೆ.

ಧಾರವಾಡ: ಕೆಎಸ್​ಆರ್​ಟಿಸಿ ಬಸ್​ ಚಾಲಕನ ಮೇಲೆ ಮೂವರು ಯುವಕರಿಂದ ಹಲ್ಲೆ
ಟ್ರ್ಯಾಕ್ಟರ್, ಕೆಎಸ್​ಆರ್​ಟಿಸಿ ಬಸ್​ ಚಾಲಕ ಸಂತೋಷ್ ಚುಳಕಿ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Sep 08, 2023 | 4:40 PM

Share

ಧಾರವಾಡ, ಸೆಪ್ಟೆಂಬರ್​ 8: ಮೂವರು ಯುವಕರಿಂದ ಕೆಎಸ್​ಆರ್​ಟಿಸಿ ಬಸ್ (KSRTC bus)​ ಚಾಲಕನ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಹೊಸ ಬಸ್ ನಿಲ್ದಾಣ ಬಳಿ ನಡೆದಿದೆ. ಸಂತೋಷ್ ಚುಳಕಿ ಹಲ್ಲೆಗೊಳಗಾದ ಕೆಎಸ್​ಆರ್​ಟಿಸಿ ಬಸ್​ ಚಾಲಕ. ಇಕ್ಕಟ್ಟಾದ ರಸ್ತೆಯಲ್ಲಿ ಬಸ್​ ತೆರಳುವಾಗ ಎದುರಿಗೆ ಟ್ರ್ಯಾಕ್ಟರ್​​ ಬಂದಿದೆ. ಸ್ವಲ್ಪ ಹಿಂದೆ ತೆಗೆದುಕೊಳ್ಳುವಂತೆ ಸಂತೋಷ್ ಮನವಿ ಮಾಡಿದ್ದು, ಹಿಂದೆ ಸರಿಯಲು ಒಪ್ಪದಿದ್ದಾಗ ಇಬ್ಬರು ಚಾಲಕರ ನಡುವೆ ವಾಗ್ವಾದ ಉಂಟಾಗಿದೆ. ಈ ವೇಳೆ ಬಸ್​ ಚಾಲಕನ​ ಮೇಲೆ ಹಲ್ಲೆ  ಟ್ರ್ಯಾಕ್ಟರ್ ಚಾಲಕ ಸೇರಿದಂತೆ ಮೂವರಿಂದ ಹಲ್ಲೆ ಮಾಡಲಾಗಿದೆ. ಗಾಯಾಳು ಬಸ್ ಚಾಲಕನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹೈಟೆನ್ಷನ್ ಟವರ್​ ಏರಿದ್ದ ವ್ಯಕ್ತಿಗೆ ವಿದ್ಯುತ್ ಸ್ಪರ್ಶವಾಗಿ ಸಾವು

ಬೆಂಗಳೂರು ಗ್ರಾಮಾಂತರ: ಹೈಟೆನ್ಷನ್ ಟವರ್​ ಏರಿದ್ದ ವ್ಯಕ್ತಿಗೆ ವಿದ್ಯುತ್ ಸ್ಪರ್ಶವಾಗಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೋನೆನಹಳ್ಳಿ ಬಳಿ ನಡೆದಿದೆ. ಅಮೃತ್(25) ಮೃತ ವ್ಯಕ್ತಿ. ಘಟನಾ ಸ್ಥಳಕ್ಕೆ ದೊಡ್ಡಬೆಳವಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕಾರು ಮತ್ತು ಬೈಕ್ ನಡುವೆ ಅಪಘಾತ: ಯುವಕ ಸಾವು

ಮೈಸೂರು: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಯುವಕ ಸಾವನ್ನಪ್ಪಿರುವಂತಹ ಘಟನೆ ಹುಣಸೂರು ನಗರದ ಮಾರಿಗುಡಿ ಬೀದಿಯ ಮಂಜುನಾಥ್ (26) ಮೃತ ಯುವಕ. ಮಂಜುನಾಥ್ ಹುಣಸೂರು ಎಚ್​ಡಿಎಫ್​ಸಿ ಬ್ಯಾಂಕ್ ಉದ್ಯೋಗಿ ಆಗಿದ್ದ. ಮಂಜುನಾಥ್ ತನ್ನ ತಂಗಿ ಮಗಳು ಪೂರ್ವಿಕಾಳೊಂದಿಗೆ ಮೈಸೂರು ಕಡೆಯಿಂದ ಮಡಿಕೇರಿ ಕಡೆಗೆ ಬುಲೆಟ್ ಬೈಕಿನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ಇದನ್ನೂ ಓದಿ: ತುಮಕೂರು: ಯಲಗಲವಾಡಿ ಕೆರೆಯಲ್ಲಿ ಮುಳುಗಿ ತಾಯಿ, ಮಗ ಸಾವು

ಅಪಘಾತದಲ್ಲಿ ಗಾಯಗೊಂಡಿದದ್ದ ಮಂಜುನಾಥ್ ಮತ್ತು ಪೂರ್ವಿಕಾ ಇಬ್ಬರನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಜುನಾಥ್ ಮೃತಪಟ್ಟಿದ್ದಾನೆ. ಪೂರ್ವಿಕಾಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆಯುತ್ತಿದೆ. ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆ ಕಳ್ಳತನ ಹಾಗೂ ಬೈಕ್ ಕಳವು ಮಾಡುತ್ತಿದ್ದ ಆರೋಪಿಗಳ ಬಂಧನ

ಬೆಂಗಳೂರು: ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಹಾಗೂ ಬೈಕ್ ಕಳವು ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.  ವಿನೋದ್ ಹಾಗೂ ಪ್ರಶಾಂತ್ ಬಂಧಿತರು. 5.39 ಲಕ್ಷ ನಗದು, ಮೂರು ದ್ವಿಚಕ್ರ ವಾಹನ, 50 ಗ್ರಾಂ ಚಿನ್ನ, 250 ಗ್ರಾಂ ಬೆಳ್ಳಿ ವಶಕ್ಕೆ ಪಡೆಯಲಾಗಿದೆ. ವಿವಿಧ 8 ಪ್ರಕರಣಗಳಲ್ಲಿ ಬಂಧಿತರು ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಮೊದಲ ಪ್ರಿಯಕರನನ್ನು ಬಿಟ್ಟು ಮತ್ತೊಬ್ಬನ ಸಂಗಡ ಮಾಡಿದ್ದಕ್ಕೆ ತಾಯಿ ಮಗುವಿನ ಹತ್ಯೆ

ಮನೆಗಳವು, ದರೋಡೆ, ಡಕಾಯಿತಿ, ಮಾದಕ ವಸ್ತು ಮಾರಾಟ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದ ವಾರೆಂಟ್ ಇದ್ದರೂ ಅಸಾಮಿಗಳು ತಲೆಮರೆಸಿಕೊಂಡಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್