AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharma Dangal: ಮತ್ತೆ ಧರ್ಮ ದಂಗಲ್ ಶುರು? ಮುಸ್ಲಿಂ ವ್ಯಾಪಾರಿಯ ಕಲ್ಲಂಗಡಿ ಒಡೆದ ಪ್ರಕರಣಕ್ಕೆ ಮತ್ತೆ ಜೀವ

Dharwad Nuggikeri Anjaneya Temple: ಕಳೆದ ವರ್ಷ ಏಪ್ರಿಲ್ 9 ರಂದು ಧಾರವಾಡ ತಾಲೂಕಿನ ಪ್ರಸಿದ್ಧ ನುಗ್ಗಿಕೇರಿ ಆಂಜನೇಯ ದೇವಸ್ಥಾನದ ಆವರಣದಲ್ಲಿ ಮುಸ್ಲಿಂ ವ್ಯಾಪಾರಿಯೊಬ್ಬರ ಕಲ್ಲಂಗಡಿ ಹಣ್ಣುಗಳನ್ನು ಒಡೆದು ಶ್ರೀರಾಮ ಸೇನೆ ಕಾರ್ಯಕರ್ತರು ಗಲಾಟೆ ಮಾಡಿದ್ದರು. ಇದೀಗ ಅದೇ ದೇವಸ್ಥಾನದಲ್ಲಿ ಮತ್ತೆ ಬೇರೆ ಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಅಂತಾ ಸಂಘಟನೆ ಕಾರ್ಯಕರ್ತರು ಮತ್ತೊಮ್ಮೆ ಹೋರಾಟ ಆರಂಭಿಸಿದ್ದಾರೆ.

Dharma Dangal: ಮತ್ತೆ ಧರ್ಮ ದಂಗಲ್ ಶುರು? ಮುಸ್ಲಿಂ ವ್ಯಾಪಾರಿಯ ಕಲ್ಲಂಗಡಿ ಒಡೆದ ಪ್ರಕರಣಕ್ಕೆ ಮತ್ತೆ ಜೀವ
ಧಾರವಾಡ ತಾಲೂಕಿನ ನುಗ್ಗಿಕೇರಿ ಆಂಜನೇಯ ದೇವಸ್ಥಾನದ ಆವರಣದಲ್ಲಿ ಮತ್ತೆ ಧರ್ಮ ದಂಗಲ್
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Dec 11, 2023 | 12:42 PM

Share

ರಾಜ್ಯದಲ್ಲಿ ಹೊಸ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಧರ್ಮ ದಂಗಲ್ ವಿಚಾರ ಹಿಂದೆ ಸರಿದಿತ್ತು. ಆದರೆ ಇದೀಗ ಕಳೆದ ವರ್ಷ ಧಾರವಾಡದ ನುಗ್ಗಿಕೇರಿ ಆಂಜನೇಯ ದೇವಸ್ಥಾನದ ಆವರಣದಲ್ಲಿ ನಡೆದಿದ್ದ ಮುಸ್ಲಿಂ ವ್ಯಾಪಾರಿಯ ಕಲ್ಲಂಗಡಿ ಒಡೆದ ಪ್ರಕರಣಕ್ಕೆ (Dharwad Nuggikeri Anjaneya Temple Dharma Dangal) ಮತ್ತೆ ಜೀವ ಬಂದಿದೆ. ಇದಕ್ಕೆ ಕಾರಣ ಹಿಂದೂ ದೇವಸ್ಥಾನಗಳಲ್ಲಿ ಬೇರೆ ಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಅನ್ನೋ ಹಿಂದೂಪರ ಸಂಘಟನೆಗಳ ಆಗ್ರಹ. ಆ ಆಗ್ರಹ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಅದರಲ್ಲೂ ಮುಸ್ಲಿಂ ವ್ಯಾಪಾರಿಯ (Muslim Trader) ಕಲ್ಲಂಗಡಿ ಹಣ್ಣು ಒಡೆದಿದ್ದ ಪ್ರಕರಣ ರಾಷ್ಟ್ರಾದ್ಯಂತ ಸದ್ದು ಮಾಡಿತ್ತು. ಇದೀಗ ಅದೇ ದೇವಸ್ಥಾನದಲ್ಲಿ ಮತ್ತೆ ಬೇರೆ ಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಅಂತಾ ಸಂಘಟನೆ ಕಾರ್ಯಕರ್ತರು ಆಗ್ರಹಿಸಿ, ಮತ್ತೊಮ್ಮೆ ಹೋರಾಟ ಆರಂಭಿಸಿದ್ದಾರೆ.

ಕಳೆದ ವರ್ಷ ಏಪ್ರಿಲ್ 9 ರಂದು ಧಾರವಾಡ ತಾಲೂಕಿನ ಪ್ರಸಿದ್ಧ ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ಘಟನೆಯೊಂದು ಜರುಗಿತ್ತು. ಶ್ರೀರಾಮ ಸೇನೆ ಕಾರ್ಯಕರ್ತರು ಈ ದೇವಸ್ಥಾನದ ಆವರಣದಲ್ಲಿ ಮುಸ್ಲಿಂ ವ್ಯಾಪಾರಿಯೊಬ್ಬರ ಕಲ್ಲಂಗಡಿ ಹಣ್ಣುಗಳನ್ನು ಒಡೆದು ಗಲಾಟೆ ಮಾಡಿದ್ದರು. ಯಾವುದೇ ಕಾರಣಕ್ಕೂ ಹಿಂದೂ ದೇವಸ್ಥಾನಗಳ ಬಳಿಕ ಬೇರೆ ಧರ್ಮದವರಿಗೆ ವ್ಯಾಪಾರ ಮಾಡಲು ಅವಕಾಶ ಕೊಡಬಾರದು ಅನ್ನೋದಕ್ಕೆ ಈ ಗಲಾಟೆ ಮಾಡಲಾಗಿತ್ತು.

ಇದು ರಾಷ್ಟ್ರಾದ್ಯಂತ ಸಾಕಷ್ಟು ಸುದ್ದಿ ಮಾಡಿತ್ತು. ಅದಾದ ಬಳಿಕ ಶ್ರೀರಾಮ ಸೇನೆ ಕಾರ್ಯಕರ್ತರ ಬಂಧನವೂ ಆಗಿತ್ತು, ಬಳಿಕ ಜಾಮೀನಿನ ಮೇಲೆ ಅವರು ಬಿಡುಗಡೆ ಕೂಡ ಆಗಿದ್ದರು. ಇದಾದ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ನೇತ್ರತ್ವದ ಸರಕಾರ ಅಸ್ತಿತ್ವಕ್ಕೆ ಬಂತು. ಯಾವಾಗ ಹೊಸ ಸರಕಾರ ಅಸ್ತಿತ್ವಕ್ಕೆ ಬಂತೋ ಆಗ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕೊಂಚ ಸೈಲೆಂಟ್ ಆಗಿದ್ದರು. ಆದರೆ ಇದೀಗ ಮತ್ತೆ ಬಜರಂಗದಳ ಕಾರ್ಯಕರ್ತರು ಹೋರಾಟವನ್ನು ಶುರು ಮಾಡಿದ್ದಾರೆ.

ದೇವಾಲಯಗಳ ಬಳಿ ಹಿಂದೂಗಳನ್ನು ಹೊರತುಪಡಿಸಿ ಬೇರೆಯವರಿಗೆ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಅನ್ನೋ ಹೋರಾಟವನ್ನು ಮತ್ತೆ ಶುರು ಮಾಡಿದ್ದಾರೆ. ರಾಷ್ಟ್ರಾದ್ಯಂತ ಸುದ್ದಿಗೆ ಕಾರಣವಾಗಿದ್ದ ನುಗ್ಗಿಕೇರಿ ಆಂಜನೇಯ ದೇವಸ್ಥಾನದಿಂದಲೇ ಇದೀಗ ಹೋರಾಟ ಆರಂಭಿಸಿದ್ದು, ಯಾವುದೇ ಕಾರಣಕ್ಕೂ ಹಿಂದೂಯೇತರರಿಗೆ ಅವಕಾಶ ನೀಡಬಾರದು ಅಂತಾ ಶಿವಾನಂದ ಸತ್ತಿಗೇರಿ, ಬಜರಂಗದಳ ವಿಭಾಗೀಯ ಸಂಚಾಲಕ ಆಗ್ರಹಿಸಿದ್ದಾರೆ.

ಈ ದೇವಸ್ಥಾನದಲ್ಲಿ ಅನೇಕರಿಗೆ ಅಂಗಡಿ ಇಟ್ಟುಕೊಳ್ಳಲು ಅವಕಾಶ ನೀಡಲಾಗಿತ್ತು. ಈ ವೇಳೆ ಅವರಲ್ಲಿ ಮುಸ್ಲಿಂ ವ್ಯಾಪಾರಿಗಳು ಕೂಡ ಇದ್ದರು. ಇದರಲ್ಲಿ ಒಬ್ಬ ವ್ಯಾಪಾರಿ ಕಲ್ಲಂಗಡಿ ವ್ಯಾಪಾರಿಯಾಗಿದ್ದ. ಆ ವ್ಯಾಪಾರಿಯನ್ನು ಗುರಿಯಾಗಿಟ್ಟುಕೊಂಡು ದಾಳಿ ಮಾಡಿದ್ದ ಶ್ರೀರಾಮ ಸೇನೆ ಕಾರ್ಯಕರ್ತರು, ಆತ ಮಾರಾಟ ಮಾಡುತ್ತಿದ್ದ ಕಲ್ಲಂಗಡಿ ಹಣ್ಣುಗಳನ್ನು ಒಡೆದು ಹಾಕಿದ್ದರು. ಇದು ವ್ಯಾಪಕ ಟೀಕೆಗೆ ಗುರಿಯಾಗಿತ್ತು.

Also Read: ನುಗ್ಗಿಕೇರಿಯಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ದೌರ್ಜನ್ಯ ಪ್ರಕರಣ; ಓರ್ವ ಶ್ರೀರಾಮ ಸೇನೆ ಕಾರ್ಯಕರ್ತನನ್ನು ಬಂಧಿಸಿದ ಧಾರವಾಡ ಪೊಲೀಸ್

ಅದಾದ ಬಳಿಕ ಎಲ್ಲ ಅಂಗಡಿಗಳನ್ನು ದೇವಸ್ಥಾನದವರು ತೆರವುಗೊಳಿಸಿದ್ದರು. ಇದೀಗ ಮತ್ತೆ ಅನೇಕ ವ್ಯಾಪಾರಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಇದೀಗ ಮತ್ತೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಹೋರಾಟವನ್ನು ಆರಂಭಿಸಿರೋದು ಸಜಹವಾಗಿ ದೇವಸ್ಥಾನ ಆಡಳಿತ ಮಂಡಳಿಗೆ ಆತಂಕವುಂಟಾಗಿದೆ. ಇದರಿಂದಾಗಿ ಅವರು ಕೂಡ ಬಜರಂಗದಳದವರ ಮನವಿಯನ್ನು ಪರಿಗಣಿಸೋದಾಗಿ ಹೇಳಿದ್ದಾರೆ.

ಇದೇ ವೇಳೆ ಆಡಳಿತ ಮಂಡಳಿಯವರು ರಿಸ್ಕ್ ತೆಗೆದುಕೊಳ್ಳಲು ಕೂಡ ತಯಾರಿಲ್ಲ. ಕಳೆದ ವರ್ಷ ಕಲ್ಲಂಗಡಿ ಒಡೆದ ಪ್ರಕರಣ ನಡೆದ ಬಳಿಕ ಎಲ್ಲ ಅಂಗಡಿ ತೆರವುಗೊಳಿಸಿ, ಮತ್ಯಾರಿಗೂ ಅವಕಾಶವನ್ನೇ ಕಲ್ಪಿಸಿರಲಿಲ್ಲ. ಇದೀಗ ಅದೇ ನೀತಿಯನ್ನು ಮುಂದುವರೆಸಲು ಪ್ಲ್ಯಾನ್ ಮಾಡಲಾಗಿದೆಯಂತೆ. ಒಟ್ಟಿನಲ್ಲಿ ಹಲವಾರು ತಿಂಗಳುಗಳ ಬಳಿಕ ಮತ್ತೆ ಧರ್ಮ ದಂಗಲ್ ಶುರುವಾಗಿದೆ. ಈ ಬಾರಿ ಇದು ಎಲ್ಲಿಗೆ ಹೋಗಿ ಮುಟ್ಟುತ್ತೆ ಅನ್ನೋದನ್ನು ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ