AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮೀಣ SSLC ವಿದ್ಯಾರ್ಥಿಗಳಿಗೆ ಪಿ.ಜಿ. ಮಾಲೀಕನ ನೆರವಿನ ಹಸ್ತ

ಧಾರವಾಡ: ಕೊರೊನಾ ಮಹಾಮಾರಿಯ ಸಂಕಷ್ಟದ ನಡುವೆ ಶಿಕ್ಷಣ ಇಲಾಖೆಯು SSLC ಪರೀಕ್ಷೆಯನ್ನ ನಡೆಸುವ ನಿರ್ಧಾರವನ್ನು ಕೈಗೊಂಡಿದೆ. ಪೋಷಕರಲ್ಲಿ ಇದರ ಬಗ್ಗೆ ಕೊಂಚ ಆತಂಕವಿದ್ದರೂ ಮಕ್ಕಳ ಭವಿಷ್ಯದ ವಿಷಯವಾದ್ದರಿಂದ ಧೈರ್ಯ ಮಾಡಿ ತಮ್ಮ ಮಕ್ಕಳಿಗೆ ಪರೀಕ್ಷೆಗೆ ಸಜ್ಜಾಗಲು ಹೇಳಿದ್ದಾರೆ. ಆದರೆ ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದ ಹಲವಾರು ವಿದ್ಯಾರ್ಥಿಗಳಿಗೆ ಸರ್ಕಾರದ ಈ ನಿರ್ಧಾರದಿಂದ ಮತ್ತೊಂದು ಸಮಸ್ಯೆ ಎದುರಾಗಿದೆ. ಅದುವೇ ವಸತಿಯ ಸಮಸ್ಯೆ. ಧಾರವಾಡದ ಹಾಸ್ಟೆಲ್​ಗಳಾಗಿವೆ ಕ್ವಾರಂಟೈನ್​ ಕೇಂದ್ರ ಹೌದು, ಜಿಲ್ಲೆಯ ಹಲವಾರು ಗ್ರಾಮೀಣ SSLC ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳು […]

ಗ್ರಾಮೀಣ SSLC ವಿದ್ಯಾರ್ಥಿಗಳಿಗೆ ಪಿ.ಜಿ. ಮಾಲೀಕನ ನೆರವಿನ ಹಸ್ತ
ಆಯೇಷಾ ಬಾನು
|

Updated on:Jun 11, 2020 | 4:15 PM

Share

ಧಾರವಾಡ: ಕೊರೊನಾ ಮಹಾಮಾರಿಯ ಸಂಕಷ್ಟದ ನಡುವೆ ಶಿಕ್ಷಣ ಇಲಾಖೆಯು SSLC ಪರೀಕ್ಷೆಯನ್ನ ನಡೆಸುವ ನಿರ್ಧಾರವನ್ನು ಕೈಗೊಂಡಿದೆ. ಪೋಷಕರಲ್ಲಿ ಇದರ ಬಗ್ಗೆ ಕೊಂಚ ಆತಂಕವಿದ್ದರೂ ಮಕ್ಕಳ ಭವಿಷ್ಯದ ವಿಷಯವಾದ್ದರಿಂದ ಧೈರ್ಯ ಮಾಡಿ ತಮ್ಮ ಮಕ್ಕಳಿಗೆ ಪರೀಕ್ಷೆಗೆ ಸಜ್ಜಾಗಲು ಹೇಳಿದ್ದಾರೆ. ಆದರೆ ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದ ಹಲವಾರು ವಿದ್ಯಾರ್ಥಿಗಳಿಗೆ ಸರ್ಕಾರದ ಈ ನಿರ್ಧಾರದಿಂದ ಮತ್ತೊಂದು ಸಮಸ್ಯೆ ಎದುರಾಗಿದೆ. ಅದುವೇ ವಸತಿಯ ಸಮಸ್ಯೆ.

ಧಾರವಾಡದ ಹಾಸ್ಟೆಲ್​ಗಳಾಗಿವೆ ಕ್ವಾರಂಟೈನ್​ ಕೇಂದ್ರ ಹೌದು, ಜಿಲ್ಲೆಯ ಹಲವಾರು ಗ್ರಾಮೀಣ SSLC ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳು ಸಾಮಾನ್ಯವಾಗಿ ನಗರದ ಶಾಲೆಗಳಲ್ಲಿ ನಿಗದಿಯಾಗುತ್ತದೆ. ಹಾಗಾಗಿ ತಮ್ಮ ಗ್ರಾಮಗಳಿಂದ ಬರುತ್ತಿದ್ದವರು ನಗರದ ಸರ್ಕಾರಿ ಹಾಸ್ಟೆಲ್​ಗಳಲ್ಲಿ​ ಅಥವಾ ವಸತಿ ಶಾಲೆಗಳಲ್ಲಿ ವಾಸ್ತವ ಹೂಡುತ್ತಿದ್ದರು.

ಆದ್ರೆ ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ನಗರದ ಅನೇಕ ಹಾಸ್ಟೆಲ್​ಗಳಲ್ಲಿ ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಮತ್ತೊಂದು ಕಡೆ ಹಾಸ್ಟೆಲ್​ಗಳ ವ್ಯವಸ್ಥೆ ಇದ್ದರೂ ಈ ಸಂದರ್ಭದಲ್ಲಿ ಪೋಷಕರು ತಮ್ಮ ಮಕ್ಕಳನ್ನು ಹಾಸ್ಟೆಲ್​ನಲ್ಲಿ ಇರಿಸಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳಿಗೆ ಏನು ಮಾಡಬೇಕು ಅನ್ನೋದೇ ದೊಡ್ಡ ಸಮಸ್ಯೆಯಾಗಿದೆ.

ಅಭ್ಯರ್ಥಿಗಳಿಗೆ ಪಿ.ಜಿ ಮಾಲೀಕನ ನೆರವಿನ ಹಸ್ತ ಆದರೆ ಇಂಥ ವಿದ್ಯಾರ್ಥಿಗಳ ಸಮಸ್ಯೆಗೆ ಧಾರವಾಡದ ಪೇಯಿಂಗ್ ಗೆಸ್ಟ್ ಮಾಲೀಕರೊಬ್ಬರು ಸ್ಪಂದಿಸಿದ್ದಾರೆ. ತಾವೇ ಮುಂದೆ ಬಂದು ತಮ್ಮ ಪಿ.ಜಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ವಸತಿ ವ್ಯವಸ್ಥೆ ಮಾಡೋದಾಗಿ ಹೇಳಿದ್ದಾರೆ. ಸದ್ಯಕ್ಕೆ ಮಹಾಮಾರಿಯಿಂದಾಗಿ ತಮ್ಮ ಪೇಯಿಂಗ್ ಗೆಸ್ಟ್​ ಬಂದ್ ಆಗಿದೆ.

ಹೀಗಾಗಿ ಅದನ್ನು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನೀಡಲು ಧಾರವಾಡ ನಗರದ ಸಂಗಮ್ ವೃತ್ತದ ಬಳಿಯ ಅಶ್ವಿನಿ ಪೇಯಿಂಗ್ ಗೆಸ್ಟ್​ನ ಮಾಲೀಕ ಮಹಾಂತೇಶ ನಾಡಗೌಡ ನಿರ್ಧರಿಸಿದ್ದಾರೆ. ಇದಕ್ಕೆ ಸಂಬಂಧಿಸಿ ನಾಡಗೌಡರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪತ್ರ ಕೂಡ ಬರೆದಿದ್ದಾರೆ. ಧಾರವಾಡದ ಡಿಡಿಪಿಐ ಎಂ.ಎಲ್. ಹಂಚಾಟೆ ಅವರಿಗೆ ಪತ್ರ ಬರೆದಿರುವ ಮಹಾಂತೇಶ ಅವರು, ಪರೀಕ್ಷೆ ಮುಗಿಯುವವರೆಗೂ ತಾವೇ ಉಚಿತವಾಗಿ ಊಟದ ವ್ಯವಸ್ಥೆಯನ್ನೂ ಸಹ ಮಾಡೋದಾಗಿ ಹೇಳಿದ್ದಾರೆ.

ಮಹಾಂತೇಶರು ಈ ಹಿಂದೆಯೂ ಸಾಕಷ್ಟು ಬಾರಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅವರಿಗೆ ನೆರವಾಗಿದ್ದಾರೆ. ಈ ಹಿಂದೆ ಧಾರವಾಡದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇಳೆಯಲ್ಲಿ ಸಾಹಿತ್ಯಾಸಕ್ತರಿಗೆ ತಮ್ಮದೇ ಪಿ.ಜಿಯಲ್ಲಿ ಉಚಿತ ಊಟ ಹಾಗೂ ವಸತಿಯ ವ್ಯವಸ್ಥೆ ಮಾಡಿದ್ದರು. ಇನ್ನು ಜಿಲ್ಲೆಯಲ್ಲಿ ಪ್ರವಾಹ ಬಂದಾಗ ತಮ್ಮ ಪಿ.ಜಿಯನ್ನು ಬಳಸಿಕೊಳ್ಳಲು ಜಿಲ್ಲಾಡಳಿತಕ್ಕೆ ಆಹ್ವಾನ ಸಹ ನೀಡಿದ್ದರು.

ಜಿಲ್ಲೆಯಲ್ಲಿ ಯಾವುದೇ ಸಮಸ್ಯೆಯಾದಾಗ ಜಿಲ್ಲಾಡಳಿತದ ಸಹಾಯಕ್ಕೆ ಮುಂದೆ ಬರುವ ನಾಡಗೌಡರು ಇತ್ತೀಚಿಗೆ ಲಾಕ್​ಡೌನ್ ಸಂದರ್ಭದಲ್ಲಿ ನಿತ್ಯವೂ ಕರ್ತವ್ಯನಿರತ ಪೊಲೀಸರಿಗೆ ಉಪಾಹಾರ ಹಾಗೂ ಚಹಾದ ವ್ಯವಸ್ಥೆ ಮಾಡಿದ್ದರು. ಇದೀಗ ವಿದ್ಯಾರ್ಥಿಗಳ ನೆರವಿಗೆ ಮುಂದೆ ಬಂದು ಮಹಾಂತೇಶ ನಾಡಗೌಡರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Published On - 2:06 pm, Thu, 11 June 20

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ