AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂಜು ಅಡ್ಡ ಮೇಲೆ ದಾಳಿ ವೇಳೆ ಪೊಲೀಸರ ಮೇಲೆಯೇ ಹಲ್ಲೆ, ಬಿಜೆಪಿ ಮುಖಂಡ ಸೇರಿ 8 ಜನರ ಬಂಧನ

ಧಾರವಾಡದ ನರೇಂದ್ರ ಶಾಲೆಯ ಬಳಿ ಜೂಜಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಜೂಜುಕೋರರು ಪೊಲೀಸರ ಮೇಲೆ ದಾಳಿ ನಡೆಸಿದ್ದು ಇಬ್ಬರಿಗೆ ಗಾಯಗಳಾಗಿವೆ. ಜೂಜಾಡುವ ಸಂಬಂಧ ಇದುವರೆಗೆ ಎಂಟು ಜನರನ್ನು ಬಂಧಿಸಲಾಗಿದೆ ಮತ್ತು ಪೊಲೀಸರ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿರುವ ಇತರ 10 ಜನರನ್ನು ಹುಡುಕಲಾಗುತ್ತಿದೆ.

ಜೂಜು ಅಡ್ಡ ಮೇಲೆ ದಾಳಿ ವೇಳೆ ಪೊಲೀಸರ ಮೇಲೆಯೇ ಹಲ್ಲೆ, ಬಿಜೆಪಿ ಮುಖಂಡ ಸೇರಿ 8 ಜನರ ಬಂಧನ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on: Nov 15, 2023 | 7:51 AM

Share

ಧಾರವಾಡ, ನ.15: ಧಾರವಾಡ ಜಿಲ್ಲೆಯ ನರೇಂದ್ರ ಗ್ರಾಮದ ಜೂಜು ಅಡ್ಡೆ (Gambling) ಮೇಲೆ ನವೆಂಬರ್ 13 ರಂದು ಮಧ್ಯರಾತ್ರಿ ದಾಳಿ ನಡೆಸಿದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಸೇರಿದಂತೆ ಎಂಟು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಧಾರವಾಡದ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಬ್ಯಾಕೋಡ್ ಅವರ ಪ್ರಕಾರ, ನರೇಂದ್ರ ಶಾಲೆಯ ಬಳಿ ಜೂಜಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಜೂಜುಕೋರರು ಪೊಲೀಸರ ಮೇಲೆ ದಾಳಿ ನಡೆಸಿದ್ದು ಇಬ್ಬರಿಗೆ ಗಾಯಗಳಾಗಿವೆ. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಬಸನಗೌಡ ಅವರಿಗೆ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದ್ದರೆ, ಕಾನ್‌ಸ್ಟೆಬಲ್ ನಾಗರಾಜ್ ಅವರ ತಲೆಗೆ ಗಾಯವಾಗಿದೆ. ಇಬ್ಬರನ್ನೂ ಧಾರವಾಡದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದುವರೆಗೆ ಎಂಟು ಜನರನ್ನು ಬಂಧಿಸಲಾಗಿದೆ ಮತ್ತು ಪೊಲೀಸರ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿರುವ ಇತರ 10 ಜನರನ್ನು ಹುಡುಕುತ್ತಿದ್ದೇವೆ ಎಂದು ಬೈಕೋಡ್ ತಿಳಿಸಿದ್ದಾರೆ.

ಇದನ್ನೂ ಓದಿ: ಮಹಾ ಅಕ್ರಮ; ಭೋವಿ ನಿಗಮದ ಮಾಜಿ ಎಂಡಿ, ಸಿಬ್ಬಂದಿ ಸೇರಿಕೊಂಡು 97 ಕೋಟಿ ರೂಪಾಯಿ ದುರ್ಬಳಕೆ

ಕಳೆದ ಮೂರು ದಿನಗಳಲ್ಲಿ ಜೂಜಾಟದ 27 ಪ್ರಕರಣಗಳು ದಾಖಲಾಗಿದ್ದು, 236 ಮಂದಿಯನ್ನು ಬಂಧಿಸಿ ₹3.38 ಲಕ್ಷ ವಶಪಡಿಸಿಕೊಳ್ಳಲಾಗಿದೆ. ಬಂಧಿತರಲ್ಲಿ ಬಿಜೆಪಿ ಮುಖಂಡ ಚನ್ನವೀರಗೌಡ ಪಾಟೀಲ್, ನಾಗಪ್ಪ ಸೋಗಿ, ವಿನಾಯಕ ಪಾಟೀಲ್, ಗಣೇಶ್ ಶೆಲವಾಡೆ, ಮಲ್ಲಪ್ಪ ಖಾನನ್ನವರ್, ಮಡಿವಾಳಪ್ಪ, ಐಗಾರ, ಚೆನ್ನಪ್ಪಗೌಡ ಪಾಟೀಲ್ ಮತ್ತು ಶ್ರೀಶೈಲ್ ಪಾಟೀಲ್ ಎಂಬುವವರು ಸೇರಿದ್ದಾರೆ. ಇನ್ನು ಜೂಜು ಕೃತ್ಯದಲ್ಲಿ ಬಿಜೆಪಿ ಮುಖಂಡ ಭಾಗಿಯಾಗಿರುವುದರ ಬಗ್ಗೆ ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ, ಪೊಲೀಸರ ವಿರುದ್ಧ ಯಾರನ್ನಾದರೂ ಪ್ರಚೋದಿಸುವ ಅಥವಾ ಅಂತಹ ಕೃತ್ಯಗಳನ್ನು ಬೆಂಬಲಿಸುವ ಪ್ರಶ್ನೆಯೇ ಇಲ್ಲ ಎಂದರು. ಯಾವುದೇ ಅಪರಾಧ ಕೃತ್ಯ ಎಸಗುವುದನ್ನು ಪಕ್ಷ ವಿರೋಧಿಸುತ್ತದೆ ಮತ್ತು ಆರೋಪಿಗಳ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಒತ್ತಾಯಿಸುವುದಾಗಿ ಹೇಳಿದರು.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು