ಧಾರವಾಡ: ಜೂನ್ 22 ರಂದು ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ ವಿದ್ಯುತ್ ಕಡಿತವಾಗಲಿದೆ ಗೊತ್ತಾ?

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ 1 ನೇ ತ್ರೈಮಾಸಿಕ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಕಲಘಟಗಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ಜೂನ್ 22 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಧಾರವಾಡ: ಜೂನ್ 22 ರಂದು ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ ವಿದ್ಯುತ್ ಕಡಿತವಾಗಲಿದೆ ಗೊತ್ತಾ?
ಪವರ್ ಕಟ್ (ಸಾಂದರ್ಭಿಕ ಚಿತ್ರ)
Edited By: Rakesh Nayak Manchi

Updated on: Jun 20, 2023 | 7:40 PM

ಧಾರವಾಡ: ಜಿಲ್ಲೆಯ 110 ಕೆ.ವಿ. ದಾಸ್ತಿಕೊಪ್ಪ ಕಲಘಟಗಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ (Kalghatgi Power Distribution Station) ಜೂನ್ 22 (ಗುರುವಾರ) ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ 1 ನೇ ತ್ರೈಮಾಸಿಕ ಕಾಮಗಾರಿಯನ್ನು ಕೈಗೊಳ್ಳಲಿದೆ. ಪರಿಣಾಮ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ಜೂನ್ 22 (ಗುರುವಾರ) ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ (Power Cut) ಉಂಟಾಗಲಿದೆ.

ದಾಸ್ತಿಕೊಪ್ಪ, ಕಲಘಟಗಿ, ಹಿರೇಹೊನ್ನಳ್ಳಿ, ಧೂಳಿಕೊಪ್ಪ, ಬೇಗೂರ್, ಹುಲ್ಲಂಬಿ , ಬಿಸರಳ್ಳಿ, ಗಳಗಿನಗಟ್ಟಿ, ಕಾಮಧೇನು, ರಾಮನಾಳ, ಹರೋಗೇರಿ, ಮಡಕಿಹೊನ್ನಳ್ಳಿ, ಸಂಗಿದೇವರಕೊಪ್ಪ, ಬಗಡಗೇರಿ, ಹಿಂಡಸಗೇರಿ, ಮಲಕನಕೊಪ್ಪ, ಜಿನ್ನೂರ್, ದ್ಯಾವನಕೊಂಡ, ಹುಣಸಿಕಟ್ಟಿ, ಬಿದರಗಡ್ಡಿ, ಬೆಲವಂತರ, ಶಿವನಾಪುರ, ಹನುಮಾಪುರ, ಸೋಮನಕೊಪ್ಪ, ಮುಕ್ಕಲ, ಬಮ್ಮಿಗಟ್ಟಿ, ಆಲದಕಟ್ಟಿ, ತಾವರಗೇರಿ, ಅರಳಿಹೊಂಡ, ನೆಲ್ಲಿಹರವಿ, ಎಲುಬನಾಳ, ಗರಡಹೊನ್ನಳ್ಳಿ, ತಬಕದಹೊನ್ನಳ್ಳಿ, ಬಿರವಳ್ಳಿ, ಬೆಂಡಲಗಟ್ಟಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸುತ್ತುಮುತ್ತಲಿನ ಗ್ರಾಮಗಳ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
Follow Us