AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದಲ್ಲಿ ಸರಣಿ ಅಪಘಾತ; ಅದೃಷ್ಟವಶಾತ್ ಸ್ಥಳದಲ್ಲಿದ್ದ ಎಲ್ಲರೂ ಬಚಾವ್

ಶನಿವಾರ ರಾಜ್ಯದಲ್ಲಿ ನಡೆದ ಕೆಲವು ಅಪಘಾತ ಮತ್ತು ಅಪರಾಧಗಳ ಸುದ್ದಿ ಇಲ್ಲಿವೆ.

ಧಾರವಾಡದಲ್ಲಿ ಸರಣಿ ಅಪಘಾತ; ಅದೃಷ್ಟವಶಾತ್ ಸ್ಥಳದಲ್ಲಿದ್ದ ಎಲ್ಲರೂ ಬಚಾವ್
ಅಪಘಾತದ ದೃಶ್ಯ
TV9 Web
| Updated By: guruganesh bhat|

Updated on:Oct 09, 2021 | 11:02 PM

Share

ಧಾರವಾಡ: ಲಾರಿ ಚಕ್ರ ಬೇರ್ಪಟ್ಟು ಸರಣಿ ಅಪಘಾತ ಸಂಭವಿಸಿದ ಘಟನೆ ಧಾರವಾಡ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಸಿಲಿಂಡರ್ ತುಂಬಿದ್ದ ಲಾರಿಯೊಂದು ಕಾರು ಮತ್ತು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ಪಾದಚಾರಿ ಮಾರ್ಗಕ್ಕೆ ನುಗ್ಗಿದೆ. ಅದೃಷ್ಟವಶಾತ್‌ ಸರಣಿ ಅಪಘಾತ ಸ್ಥಳದಲ್ಲಿದ್ದ ಎಲ್ಲರೂ ಬಚಾವ್ ಆಗಿದ್ದು ಯಾರಿಗೂ ಹಾನಿ ಉಂಟಾಗಿಲ್ಲ. ಧಾರವಾಡ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಘಟನೆ ನಡೆದಿದೆ.

ಕಾರಿನ ಇಂಜಿನ್​ನಲ್ಲಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು ಕಲಬುರಗಿ: ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಕಾರೊಂದು ಹೊತ್ತಿ ಉರಿದ ಘಟನೆ ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಯ ಮುಂದೆ ನಡೆದಿದೆ. ಪ್ರಯಾಣಿಕರು ತಕ್ಷಣವೇ ಕಾರಿನಿಂದ ಇಳಿದು ಜೀವ ಉಳಿಸಿಕೊಂಡಿದ್ದಾರೆ. ಬ್ರಹ್ಮಪುರ ಪೊಲೀಸ್ ಠಾಣಾ‌ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಖಾಲಿ ಜಾಗದಲ್ಲಿ ಮದ್ಯ ಸೇವಿಸಿ ಜೂಜಾಡುತ್ತಿದ್ದವರು ವಶಕ್ಕೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಖಾಲಿ ಜಾಗದಲ್ಲಿ ಮದ್ಯ ಸೇವಿಸಿ ಜೂಜಾಡುತ್ತಿದ್ದವರನ್ನು ವಶಕ್ಕೆ ಪಡೆದಿದ್ದಾರೆ. ಈ ಮುನ್ನ ಸ್ಥಳಿಯರು ಪೋಲಿ ಪುಂಡರ ಹಾವಳಿ ಬಗ್ಗೆ ಐಜಿಪಿಗೆ ದೂರು ನೀಡಿದ್ದರು. ಹೀಗಾಗಿ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್​ ಸೂಚನೆ ಮೇರೆಗೆ ದಾಳಿ ನಡೆಸಿ ಅಕ್ರಮ ಚಟುವಟಿಕೆ ನಡೆಸುತ್ತಿದ್ದವರನ್ನು ವಶಪಡಿಸಿಕೊಳ್ಳಲಾಗಿದೆ.

ವೃದ್ಧೆಯ ಸರ ಕಳವು ಕೋಲಾರ: ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದೇವಗಾನಹಳ್ಳಿಯಲ್ಲಿ ಕಳ್ಳನೋರ್ವ ವೃದ್ಧೆಯ ಚಿನ್ನದ ಸರ ಕಸಿದು ಪರಾರಿಯಾದ ಘಟನೆ ನಡೆದಿದೆ. ವೆಂಕಟಲಕ್ಷ್ಮಮ್ಮ ಎಂಬುವವರ 40 ಗ್ರಾಂ ಚಿನ್ನದ ಸರ ಕಳವಾಗಿದೆ. ಮಂಕಿ ಕ್ಯಾಪ್ ಧರಿಸಿ ಬಂದಿದ್ದ ಸರಗಳ್ಳ ಕೃತ್ಯವೆಸಗಿದ್ದು ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 

ಬೆಂಗಳೂರಲ್ಲಿ ಲೈಸನ್ಸ್ ಇಲ್ಲದೇ ಮನೆಯಲ್ಲಿ ನಾಯಿಗಳನ್ನೂ ಸಾಕುವ ಹಕ್ಕಿಲ್ಲ! ಸಾಕು ನಾಯಿ ಪರವಾನಗಿ ಉಪವಿಧಿ ಶೀಘ್ರದಲ್ಲೇ ಜಾರಿ

Indian Space Association: ಭಾರತೀಯ ಬಾಹ್ಯಾಕಾಶ ಒಕ್ಕೂಟಕ್ಕೆ ಅ. 11ಕ್ಕೆ ಪ್ರಧಾನಿ ನರೇಂದ್ರ ಮೋದಿಯಿಂದ ಚಾಲನೆ

Published On - 10:33 pm, Sat, 9 October 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ