AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಗೆ ಸಿಕ್ಕಾಪಟ್ಟೆ ಖುಷಿಕೊಟ್ಟ ಕೃಷಿ ವಿವಿ Agri War Room ಪ್ರಯೋಗ!

ಧಾರವಾಡ: ರಾಜ್ಯದಲ್ಲಿ ಕೆಲ ಕೃಷಿ ವಿಶ್ವವಿದ್ಯಾಲಯಗಳು ಕೇವಲ ಸಂಶೋಧನೆ ಮತ್ತು ಪಾಠ ಪ್ರವಚನಕ್ಕೆ ಮಾತ್ರ ಸಿಮೀತವಾಗಿವೆ. ಆದ್ರೆ ಬಿಸಿಲನಾಡು ರಾಯಚೂರು ಕೃಷಿ ವಿಶ್ವವಿದ್ಯಾಲಯ ಮಾತ್ರ ವಿಭಿನ್ನ ರೀತಿಯಲ್ಲಿ ರೈತರಿಗೆ ಆಸರೆ ಆಗುವ ಮೂಲಕ ಅನ್ನದಾತರ ಮೆಚ್ಚುಗೆಗೆ ಪಾತ್ರವಾಗಿದೆ. ದೇಶಾದ್ಯಂತ ಕಠಿಣ ಲಾಕ್​ಡೌನ್ ಜಾರಿಯಲ್ಲಿದ್ದ ಸಂದರ್ಭದಲ್ಲಿ ರೈತರು ಕಷ್ಟಪಟ್ಟು ಬೆಳೆದಿದ್ದ ಅಪಾರ ಪ್ರಮಾಣದ ಕೃಷಿ ಉತ್ಪನ್ನಗಳು ಮಾರಾಟವಾಗದೇ ಹಾಳಾಗಿದ್ದ ಅನೇಕ ಉದಾಹರಣೆಗಳಿವೆ. ಅದರಲ್ಲೂ ವಿಶೇಷವಾಗಿ ಈರುಳ್ಳಿ ಬೆಳೆ ಮಾರಾಟವಾಗದೇ ಸಾಕಷ್ಟು ಪ್ರಮಾಣದಲ್ಲಿ ಬೆಳೆ ರೈತರ ಜಮೀನಿನಲ್ಲೇ ಹಾಳಾಗಿತ್ತು. ರೈತರಿಗಾಗಿ […]

ರೈತರಿಗೆ ಸಿಕ್ಕಾಪಟ್ಟೆ ಖುಷಿಕೊಟ್ಟ ಕೃಷಿ ವಿವಿ Agri War Room ಪ್ರಯೋಗ!
Follow us
ಆಯೇಷಾ ಬಾನು
|

Updated on:Jun 04, 2020 | 3:43 PM

ಧಾರವಾಡ: ರಾಜ್ಯದಲ್ಲಿ ಕೆಲ ಕೃಷಿ ವಿಶ್ವವಿದ್ಯಾಲಯಗಳು ಕೇವಲ ಸಂಶೋಧನೆ ಮತ್ತು ಪಾಠ ಪ್ರವಚನಕ್ಕೆ ಮಾತ್ರ ಸಿಮೀತವಾಗಿವೆ. ಆದ್ರೆ ಬಿಸಿಲನಾಡು ರಾಯಚೂರು ಕೃಷಿ ವಿಶ್ವವಿದ್ಯಾಲಯ ಮಾತ್ರ ವಿಭಿನ್ನ ರೀತಿಯಲ್ಲಿ ರೈತರಿಗೆ ಆಸರೆ ಆಗುವ ಮೂಲಕ ಅನ್ನದಾತರ ಮೆಚ್ಚುಗೆಗೆ ಪಾತ್ರವಾಗಿದೆ. ದೇಶಾದ್ಯಂತ ಕಠಿಣ ಲಾಕ್​ಡೌನ್ ಜಾರಿಯಲ್ಲಿದ್ದ ಸಂದರ್ಭದಲ್ಲಿ ರೈತರು ಕಷ್ಟಪಟ್ಟು ಬೆಳೆದಿದ್ದ ಅಪಾರ ಪ್ರಮಾಣದ ಕೃಷಿ ಉತ್ಪನ್ನಗಳು ಮಾರಾಟವಾಗದೇ ಹಾಳಾಗಿದ್ದ ಅನೇಕ ಉದಾಹರಣೆಗಳಿವೆ. ಅದರಲ್ಲೂ ವಿಶೇಷವಾಗಿ ಈರುಳ್ಳಿ ಬೆಳೆ ಮಾರಾಟವಾಗದೇ ಸಾಕಷ್ಟು ಪ್ರಮಾಣದಲ್ಲಿ ಬೆಳೆ ರೈತರ ಜಮೀನಿನಲ್ಲೇ ಹಾಳಾಗಿತ್ತು.

ರೈತರಿಗಾಗಿ ತೆರೆದ ಅಗ್ರಿ ವಾರ್ ರೂಮ್: ಇದೆಲ್ಲದರ ಮಧ್ಯೆ ರಾಯಚೂರು ಕೃಷಿ ವಿಶ್ವವಿದ್ಯಾಲಯ ಅಗ್ರಿ ವಾರ್ ರೂಮ್ ಓಪನ್ ಮಾಡುವ ಮೂಲಕ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಿದೆ. ರಾಯಚೂರು ಜಿಲ್ಲೆಯಾದ್ಯಂತ ರೈತರು ಬೆಳೆದಿದ್ದ 400 ಟನ್ ಈರುಳ್ಳಿಯನ್ನ ಮಾರಾಟ ಮಾಡಿಸುವಲ್ಲಿ ಮಹತ್ವದ ಪಾತ್ರವಹಿಸಿದೆ. ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಮೂಲದ ವ್ಯಾಪಾರಿಗಳಿಗೆ ಸಂಪರ್ಕಿಸಿ ಜಿಲ್ಲೆಯಲ್ಲಿ ರೈತರು ಬೆಳೆದಿದ್ದ ಈರುಳ್ಳಿಯನ್ನ ಅಗ್ರಿ ವಾರ್ ರೂಮ್ ಸಿಬ್ಬಂದಿ ಯಶಸ್ವಿಯಾಗಿ ಮಾರಾಟ ಮಾಡಿಸಿದ್ದಾರೆ.

ಇದೊಂದೆ ಅಲ್ಲದೇ ರೈತರು ಬೆಳೆದಿದ್ದ ಮೂಸಂಬಿ, ದಾಳಿಂಬೆ, ಪಪ್ಪಾಯಿ ಹಣ್ಣುಗಳನ್ನ ಹೈದ್ರಾಬಾದಿನ ವ್ಯಾಪಾರಿಗಳಿಗೆ ಸಂಪರ್ಕಿಸಿ ರೈತರು ಬೆಳೆದೆ ಹಣ್ಣುಗಳನ್ನು ಖರೀದಿಸುವ ಮೂಲಕ ಕೃಷಿ ಅಗ್ರಿ ವಾರ್ ರೂಮ್ ಸಿಬ್ಬಂದಿ ರೈತರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇನ್ನು ಜಿಲ್ಲೆಯಾದ್ಯಂತ ಬೆಳೆಯಲಾಗಿದ್ದ ಲಕ್ಷಾಂತರ ಟನ್ ಮೆಣಸಿನಕಾಯಿ ಬೆಳೆ ಸಹ ಮಾರಾಟವಾಗದೇ ರೈತರು ಕಂಗಾಲಾಗಿದ್ದರು. ಸಾವಿರಾರು ಮೂಟೆಗಳು ಜಿಲ್ಲೆಯ ವಿವಿಧೆಡೆ ಕೋಲ್ಡ್ ಸ್ಟೋರೇಜ್​ನಲ್ಲಿ ಬಂಧಿಯಾಗಿದ್ದವು.

ಅನ್ನದಾತರ ಮೆಚ್ಚುಗೆ ಪಾತ್ರವಾದ ರಾಯಚೂರು ಕೃಷಿ ವಿಶ್ವವಿದ್ಯಾಲಯ: ಈ ಬಗ್ಗೆಯೂ ಮೆಣಸಿನಕಾಯಿ ಖರೀದಿಸಿ ಪೌಡರ್ ಮಾಡಿ ಮಾರಾಟ ಮಾಡುವ ಬೆಳಗಾವಿ ಮೂಲದ ಕಂಪನಿಯೊಂದಕ್ಕೆ ಸಂಪರ್ಕಿಸಿದ ಅಗ್ರಿ ವಾರ್ ರೂಮ್ ಸಿಬ್ಬಂದಿ ಜಿಲ್ಲೆಯ ಅನೇಕ ರೈತರ ಮೆಣಸಿನಕಾಯಿ ಮಾರಾಟ ಮಾಡಿಸುವ ಮೂಲಕ ಸಂಕಷ್ಟದಲ್ಲಿರದ್ದ ಮೆಣಸಿನಕಾಯಿ ಬೆಳೆಗಾರರ ನೋವಿಗೆ ಅಗ್ರಿ ವಾರ್ ರೂಮ್ ಸ್ಪಂದಿಸಿದೆ. ಒಟ್ಟಾರೆಯಾಗಿ ಲಾಕ್​ಡೌನ್ ಅವಧಿಯಲ್ಲಿ ಮಾರಾಟವಾಗದೇ ವಿವಿಧೆಡೆ ಸ್ಟೋರ್ ಮಾಡಲಾಗಿದ್ದ ಬೆಳೆಗಳನ್ನ ಕೃಷಿ ವಿಶ್ವವಿದ್ಯಾಲಯದ ಅಗ್ರಿ ವಾರ್ ರೂಮ್ ಸಿಬ್ಬಂದಿ ಯಶಸ್ವಿಯಾಗಿ ಮಾರಾಟ ಮಾಡಿಸುವ ಮೂಲಕ ಅನ್ನದಾತರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Published On - 2:07 pm, Thu, 4 June 20

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ