AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ ಜಿಲ್ಲೆಯಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ‌: ಹೋಟೆಲ್, ಕಟಿಂಗ್ ಶಾಪ್​ಗೆ ದಲಿತರಿಗಿಲ್ಲ ಪ್ರವೇಶ!

ವಿದ್ಯಾಕಾಶಿ ಧಾರವಾಡ ಜಿಲ್ಲೆಯ ರೊಟ್ಟಿಗವಾಡ ಗ್ರಾಮವೊಂದರಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ಗ್ರಾಮದ ದಲಿತರಿಗೆ ಅಘೋಷಿತ‌ ಬಹಿಷ್ಕಾರ ಹಾಕಲಾಗಿದೆ. ಜೊತೆಗೆ ಹೋಟೆಲ್, ಕಟಿಂಗ್, ದೇವಸ್ಥಾನಕ್ಕೆ ದಲಿತರಿಗೆ ಪ್ರವೇಶವಿಲ್ಲ. ಅನಿಷ್ಟ ಪದ್ದತಿಯ ವಿರುದ್ದ ಹಲವಾರು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವದೂ ಪ್ರಯೋಜನವಾಗಿಲ್ಲವಂತೆ. ಇದು ಆ ಗ್ರಾಮದ ಯುವಕರನ್ನ ಕೆರಳಿಸಿದ್ದು, ನಮಗೂ ಸಮಾನತೆ ಬೇಕು ಎನ್ನುತ್ತಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ‌: ಹೋಟೆಲ್, ಕಟಿಂಗ್ ಶಾಪ್​ಗೆ ದಲಿತರಿಗಿಲ್ಲ ಪ್ರವೇಶ!
ಅಸ್ಪೃಶ್ಯತೆ ಇನ್ನೂ ಜೀವಂತ‌
ಶಿವಕುಮಾರ್ ಪತ್ತಾರ್
| Edited By: |

Updated on: Dec 14, 2023 | 3:49 PM

Share

ಧಾರವಾಡ, ಡಿಸೆಂಬರ್​​ 14: ದೇಶದ ಬಹುತೇಕ ಕಡೆ ಅಸ್ಪೃಶ್ಯತೆ (Untouchability) ಇನ್ನೂ ಜೀವಂತವಾಗಿದೆ. ಕೆಳಜಾತಿ ಮೇಲ್ಜಾತಿ ಎನ್ನುವ ಪೆಂಡಭೂತ ನಮ್ಮ ಸಮಾಜದಲ್ಲಿದೆ. ಸದ್ಯ ಇದಕ್ಕೆ ತಾಜಾ ಉದಾಹರಣೆ ಎನ್ನುವಂತಹ ಘಟನೆಯೊಂದು ನಡೆದಿದೆ. ವಿದ್ಯಾಕಾಶಿ ಧಾರವಾಡ ಜಿಲ್ಲೆಯ ರೊಟ್ಟಿಗವಾಡ ಗ್ರಾಮವೊಂದರಲ್ಲಿ ದಲಿತರಿಗೆ ಅಘೋಷಿತ‌ ಬಹಿಷ್ಕಾರ ಹಾಕಲಾಗಿದೆ. ಗ್ರಾಮದ ಹೋಟೆಲ್, ಕಟಿಂಗ್, ದೇವಸ್ಥಾನಕ್ಕೆ ದಲಿತರಿಗೆ ಪ್ರವೇಶ ಇಲ್ಲ. ಇದು ಆ ಗ್ರಾಮದ ಯುವಕರನ್ನ ಕೆರಳಿಸಿದ್ದು, ನಮಗೂ ಸಮಾನತೆ ಬೇಕು ಎನ್ನುತ್ತಿದ್ದಾರೆ.

ಕಟಿಂಗ್ ಶಾಪ್​ಗೆ ನೋ ಎಂಟ್ರಿ

ರೊಟ್ಟಿಗವಾಡ ಗ್ರಾಮದ ಹೋಟೆಲ್, ದೇವಸ್ಥಾನ, ಕಟಿಂಗ್ ಶಾಪ್​ಗಳಿಗೆ ಪ್ರವೇಶ ಇಲ್ಲ. ಅದರಲ್ಲೂ ಹೋಟೆಲ್ ನಲ್ಲಿ ದಲಿತರಿಗೆ ಪ್ಲಾಸ್ಟಿಕ್ ಪ್ಲೇಟ್​ನಲ್ಲಿ ಉಪಹಾರ ಕೊಡಲಾಗುತ್ತಿದೆ. ನೀರು ಎತ್ತಿ ಹಾಕುವ ಪದ್ದತಿ ಇನ್ನು ಇದೆ ಅಂತೆ. ಕಟಿಂಗ್ ಶಾಪ್​ಗಳಿಗೆ ಹೋದರೆ ಕಟಿಂಗ್ ಮಾಡುವುದಿಲ್ಲ. ಪಂಚಾಯತ್​ಗೆ ಹೋಗಿ ಕೇಳಕೊಂಡ ಬನ್ನಿ ಅನ್ನೋದ ಮಾಲೀಕರ ಉತ್ತರವಾಗಿದೆ.

ಇದನ್ನೂ ಓದಿ: ಕನಕದಾಸರ ತವರೂರಲ್ಲೇ ಅಸ್ಪೃಶ್ಯತೆ ಜೀವಂತ; ದೇವಸ್ಥಾನ ಪ್ರವೇಶಿಸಿದ ತಾಯಿ, ಮಗನ ಮೇಲೆ ಸವರ್ಣೀಯರಿಂದ ಹಲ್ಲೆ!

ದಲಿತ ಸಮುದಾಯದ ಜನರಿಗೆ ಗ್ರಾಮದ ಯಾವುದೇ ಕಟಿಂಗ್ ಶಾಪ್​ನಲ್ಲಿ ಕಟಿಂಗ್​ ಮಾಡುವುದಿಲ್ಲವಂತೆ. ಒಂದು ವೇಳೆ ಕಟಿಂಗ್ ಮಾಡಿದ್ದೆ ಆದರೆ 500 ಸಾವಿರ ರೂಪಾಯಿವರೆಗೂ ಹಣ ಕೇಳುತ್ತಾರೆ. ಹೀಗಾಗಿ ಇಲ್ಲಿನ ದಲಿತ ಸಮುದಾಯದ ಜನ‌ ಮತ್ತೊಂದು ಹಳ್ಳಿಗೆ ಹೋಗಿ ಕಟಿಂಗ್ ಮಾಡಿಸಿಕೊಂಡು‌ ಬರುತ್ತಾರೆ. ದಲಿತ ಸಮುದಾಯ ಜನರನ್ನು ಇನ್ನು ಕೆಳಗಿನವರಾಗಿ ಕಾಣ್ಣುವ ಪದ್ದತಿ ರೊಟ್ಟಿಗವಾಡ ಗ್ರಾಮದಲ್ಲಿ ಇನ್ನು ಜೀವಂತ ಇದೆ ಅನ್ನೋದು ಗ್ರಾಮದ ದಲಿತ ಯುವಕರ ಮಾತು.

ಅನಾದಿಕಾಲದಿಂದಲೂ ಇದೇ ಪದ್ದತಿ ಜಾರಿ

ರೊಟ್ಟಿಗವಾಡ ಗ್ರಾಮದಲ್ಲಿ ಇದು ಇಂದಿನ ಪದ್ದತಿ ಅಲ್ಲ. ಅನಾದಿಕಾಲದಿಂದಲೂ ಇದೇ ಪದ್ದತಿ ಜಾರಿಯಲ್ಲಿದೆ ಅಂತೆ‌. ಅಕಸ್ಮಾತ್ ದಲಿತರು ದೇವಸ್ಥಾನಕ್ಕೆ ಹೋದರೆ ಏನಾದರೂ ಅವಘಡ ಸಂಭವಿಸಿದರೆ ದಲಿತರೇ ಕಾರಣ ಎಂದು ಗ್ರಾಮದ ಸವರ್ಣೀಯರು ಹಿಯಾಳಿಸುತ್ತಾರಂತೆ. ರೊಟ್ಟಿಗವಾಡ ಗ್ರಾಮದಲ್ಲಿ ದಲಿತರು ಒಂದು ಕಡೆ, ಉಳಿದ ಎಲ್ಲ ಸುವರ್ಣೀಯರು ಒಂದು ಕಡೆ. ಒಂದು ರೀತಿ ದಲಿತ ಸಮುದಾಯದ ಜನರಿಗೆ ಅಲ್ಲಿ ಅಘೋಷಿತ ಬಹಿಷ್ಕಾರ ಹಾಕಲಾಗಿದೆ.

ಇದನ್ನೂ ಓದಿ: ಧಾರವಾಡದಲ್ಲಿ ಮತ್ತೆ ಮುನ್ನೆಲೆಗೆ ಬಂದ ಧರ್ಮ ದಂಗಲ್; ದೇವಸ್ಥಾನಗಳಲ್ಲಿ ಅನ್ಯ ಧರ್ಮದವರ ವ್ಯಾಪಾರ ನಿಷೇಧಕ್ಕೆ ಆಗ್ರಹ

ಗ್ರಾಮದಲ್ಲಿ ಸುಮಾರು 40 ದಲಿತ ಕುಟುಂಬಗಳಿದ್ದು ಯಾರೂ ಕೂಡ ಸಾರ್ವಜನಿಕ ಪ್ರದೇಶದಲ್ಲಿ ಬರುವ ಹಾಗಿಲ್ಲ ಅನ್ನೋ ಅಲಿಖಿತ ನಿಯಮ ಜಾರಿ ಮಾಡಲಾಗಿದೆ. ಏನೇ ಕೆಲಸ ಇದ್ದರೆ, ಎಲ್ಲದರಲ್ಲೂ ಪ್ರತ್ಯೇಕವಾಗಿ‌ ದಲಿತರನ್ನು ಕಾಣಲಾಗ್ತಿದೆಯಂತೆ. ಗ್ರಾಮದಲ್ಲಿ ಸುವರ್ಣೀಯರು, ದಲಿತರ ನಡುವೆ ದೊಡ್ಡ ಕಂದಕವಿದ್ದು, ಮೂಲಭೂತ ಸೌಲಭ್ಯವು ದಲಿತರಿಗೆ ಸಿಗುತ್ತಿಲ್ಲ.

ದಲಿತರಿಗೆ ಸಿಗಬೇಕಾಗಿರುವ ಅಂಗನವಾಡಿಯೂ ಸಿಕ್ಕಿಲ್ಲ ಎಂದು ಆರೋಪಿಸಲಾಗಿದೆ. ಅಕಸ್ಮಾತ್ ಗ್ರಾಮದಲ್ಲಿ ದಲಿತ ಸಮದಾಯದ ಜನ ತೀರಿ ಹೋದರೆ ಗ್ರಾಮದ ಬಹುತೇಕ ಅಂಗಡಿಗಳು ಅವತ್ತು ಬಂದ್ ಆಗತ್ತೆ. ಇಂತಹ ಅಲಿಖಿತ ನಿಯಮವನ್ನು ಗ್ರಾಮಸ್ಥರು ಜಾರಿ ಮಾಡಿದ್ದಾರೆ. ಕೇವಲ ಹೋಟೆಲ್, ದೇವಸ್ಥಾನ, ಕಟಿಂಗ್ ಶಾಪ್ ಅಲ್ಲ ಸಾರ್ವಜನಿಕ ಪ್ರದೇಶದಲ್ಲೂ ದಲಿತರು ಬರುವ ಹಾಗಿಲ್ಲವಂತೆ. ಅಂಬೇಡ್ಕರ್ ಹೇಳಿದಂತೆ ನಮಗೆ ಸಮಾನತೆ ಬೇಕು. ಸ್ವಾತಂತ್ರ್ಯ ಸಿಕ್ಕು 75 ವರ್ಷ ಆದರೂ ನಮಗೆ ಸ್ವಾತಂತ್ರ್ಯ ಸಿಕ್ಕಿಲ್ಲ ಎನ್ನುವುದು ದಲಿತ ಮುಖಂಡರ ಮಾತಾಗಿದೆ.

ರೊಟ್ಟಿಗವಾಡದ ಅನಿಷ್ಟ ಪದ್ದತಿಯ ವಿರುದ್ದ ಹಲವಾರು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವದೂ ಪ್ರಯೋಜನವಾಗಿಲ್ಲವಂತೆ. ಸರ್ಕಾರ ಇನ್ನಾದರೂ ಎಚ್ಚೆತ್ತು ಅಘೋಷಿತ ಬಹಿಷ್ಕಾರಕ್ಕೆ ಒಳಗಾದ ದಲಿತ ಸಮುದಾಯಕ್ಕೆ ಸಮಾನತೆ ಸಿಗುವ ಹಾಗೆ ಮಾಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?