Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharwad News: ಯುಗಾದಿ ಹಬ್ಬದ ಸಂದರ್ಭದಲ್ಲೇ ಧಾರವಾಡ ಜನತೆಗೆ ಶಾಕ್; ಎರಡು ದಿನ ನೀರು ಪೂರೈಕೆ ಬಂದ್

ಯುಗಾದಿ ಹಬ್ಬದ ಸಂದರ್ಭದಲ್ಲೇ ಧಾರವಾಡ ಜನತೆಗೆ ನೀರಿನ ಅಭಾವ ಸಮಸ್ಯೆ ಎದುರಾಗಿದೆ. ಧಾರವಾಡದ ಮುರುಘಾಮಠದ ಸವದತ್ತಿ ರಸ್ತೆ ಬಳಿ ನೀರಿನ ಪೈಪ್ ಒಡೆದ ಕಾರಣ ನಗರಕ್ಕೆ ಎರಡು ದಿನಗಳ ಕಾಲ ನೀರು ಪೂರೈಕೆ ಬಂದ್ ಮಾಡಲಾಗಿದೆ.

Dharwad News: ಯುಗಾದಿ ಹಬ್ಬದ ಸಂದರ್ಭದಲ್ಲೇ ಧಾರವಾಡ ಜನತೆಗೆ ಶಾಕ್; ಎರಡು ದಿನ ನೀರು ಪೂರೈಕೆ ಬಂದ್
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Mar 21, 2023 | 10:55 PM

ಹುಬ್ಬಳ್ಳಿ: ಯುಗಾದಿ ಹಬ್ಬದ ಸಂದರ್ಭದಲ್ಲೇ ಧಾರವಾಡ (Dharawad) ಜನತೆಗೆ ನೀರಿನ ಅಭಾವ ಸಮಸ್ಯೆ ಎದುರಾಗಿದೆ. ಧಾರವಾಡದ ಮುರುಘಾಮಠದ ಸವದತ್ತಿ ರಸ್ತೆ ಬಳಿ ನೀರಿನ ಪೈಪ್ ಒಡೆದ ಕಾರಣ ನಗರಕ್ಕೆ ಎರಡು ದಿನಗಳ ಕಾಲ ನೀರು ಪೂರೈಕೆ ಬಂದ್ (Water Supply) ಮಾಡಲಾಗಿದೆ. ನಗರಕ್ಕೆ ಪೂರೈಕೆಯಾಗುವ ಮುಖ್ಯ ಪೈಪ್​ಲೈನ್​​ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಪೈಪ್​​​​​ಲೈನ್​​​​ ಮೇಲಿರುವ ಹೋಟೆಲ್ ತೆರವಿಗೆ ನಿರ್ಧಾರ ಕೈಗೊಳ್ಳಲಾಗಿದೆ. ಆದಾಗ್ಯೂ, 2 ದಿನಗಳ ಮಟ್ಟಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಮುಖ ಪೈಪ್‌ಲೈನ್‌ಗೆ ಧಕ್ಕೆಯಾಗಿರುವುದರಿಂದ ಅಪಾರ ಪ್ರಮಾಣದ ನೀರು ಪೋಲಾಗಿದೆ.

ಸೋಮವಾರ ತಡರಾತ್ರಿಯಿಂದ ಪೈಪ್‌ ಒಡೆದು ಸುಮಾರು ನೀರು ಹರಿದುಹೋಗಿತ್ತು. ಪೈಪ್‌ಲೈನ್ ಮೇಲೆಯೇ ಅಕ್ರಮವಾಗಿ ಹೋಟೆಲ್ ನಿರ್ಮಾಣ ಮಾಡಲಾಗಿತ್ತು. ಇದರಿಂದಾಗಿ ಪೈಪ್‌ಲೈನ್‌ಗೆ ಹಾನಿಯಾಗಿತ್ತು ಎಂದು ಮೂಲಗಳು ತಿಳಿಸಿವೆ.

ಹಲವು ಅಗಡಿಗಳಿಗೆ ನುಗ್ಗಿದ್ದ ನೀರು

ಪೈಪ್‌ಲೈನ್ ಒಡೆದ ಕಾರಣ ಅಪಾರ ಪ್ರಮಾಣದಲ್ಲಿ ನೀರು ಪೋಲಾಗಿತ್ತು. ಸುತ್ತಮುತ್ತಲಿನ ಅನೇಕ ಅಂಗಡಿಗಳಿಗೆ‌ ನೀಡು ನುಗ್ಗಿತ್ತು. ತಕ್ಷಣವೇ ಎಚ್ಚೆತ್ತ ಅಧಿಕಾರಿಗಳು ನೀರು ಪೂರೈಕೆ ಬಂದ್ ಮಾಡಿದ್ದಾರೆ. ಪೈಪ್​​ಲೈನ್ ಮೇಲಿದ್ದ ಹೋಟೆಲ್ ತೆರವಿಗೆ ಕ್ರಮ ಕೈಗೊಳ್ಳಲಾಗಿದೆ. ನೀರು ಪೂರೈಕೆ ಮರುಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:54 pm, Tue, 21 March 23

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​