Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಬೇಡಿಕೆ‌ ಈಡೇರಿಕೆಗೆ ಆಗ್ರಹಿಸಿ ಮೊಬೈಲ್ ಟವರ್ ಏರಿದ ನೌಕರ; ಮುಂದೇನಾಯ್ತು ನೋಡಿ

ಧಾರವಾಡದಲ್ಲಿ ನಡೆಯುತ್ತಿರುವ ನೀರು ಸರಬರಾಜು ನೌಕರರ ಮುಷ್ಕರ 13ನೇ ದಿನಕ್ಕೆ ಕಾಲಿಟ್ಟಿದೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಈ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರನೊಬ್ಬ ಭಿತ್ತಿ ಪತ್ರದೊಂದಿಗೆ ಟವರ್ ಏರಿ ಹೈಡ್ರಾಮ ನಡೆಸಿದ್ದಾನೆ.

ಧಾರವಾಡ: ಬೇಡಿಕೆ‌ ಈಡೇರಿಕೆಗೆ ಆಗ್ರಹಿಸಿ ಮೊಬೈಲ್ ಟವರ್ ಏರಿದ ನೌಕರ; ಮುಂದೇನಾಯ್ತು ನೋಡಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on: Feb 10, 2023 | 3:56 PM

ಧಾರವಾಡ: ನೀರು ಸರಬರಾಜು ನೌಕರರ ಮುಷ್ಕರ (Water supply workers strike) 13ನೇ ದಿನಕ್ಕೆ ಕಾಲಿಟ್ಟಿದೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪಾಲಿಕೆ ಕಚೇರಿ ಮುಂದೆ ನಡೆಸುತ್ತಿರುವ ಈ ಮುಷ್ಕರದಲ್ಲಿ ಭಾಗಿಯಾಗಿದ್ದ ನೌಕರನೊಬ್ಬ ಭಿತ್ತಿ ಪತ್ರದೊಂದಿಗೆ ಟವರ್ ಏರಿ (Man climbs mobile tower) ಹೈಡ್ರಾಮ ನಡೆಸಿದ್ದಾನೆ. ನಗರದ ಆಲೂರು ವೆಂಕಟರಾವ್ ವೃತ್ತದ ಬಳಿ ನೌಕರರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ನೌಕರನಾಗಿರುವ ಮಲ್ಲಿಕಾರ್ಜುನ ಗುಮ್ಮಗೋಳ ಎಂಬಾತ ಟವರ್ ಏರಿ ಕುಳಿತಿದ್ದಾನೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿತು. ಕೈಯಲ್ಲಿ ಬೇಡಿಕೆ ಫಲಕ ಸಹಿತ ಟವರ್ ಏರಿದ ಮಲ್ಲಿಕಾರ್ಜುನ ಗುಮ್ಮಗೋಳ, ತುತ್ತ ತುದಿಯಲ್ಲಿ ಕುಳಿತು ಪ್ರದರ್ಶನ ಮಾಡಿದ್ದಾನೆ. ಅಲ್ಲದೆ, ಕಳೆದ ಏಳು ತಿಂಗಳಿನಿಂದ ನಮಗೆ ವೇತನ ನೀಡದೆ ಬಾಕಿ ಉಳಿಸಿದ್ದಾರೆ. ಕೂಡಲೇ ಬಾಕಿ ವೇತನ ನೀಡುವಂತೆ ಆಗ್ರಹಿಸಿದ್ದಾನೆ.

ಇತ್ತೀಚೆಗೆ ಇದೇ ಟವರ್ ಏರಿದ್ದ ಕಳ್ಳ

ಮಲ್ಲಿಕಾರ್ಜುನ ಏರಿದ್ದ ಟವರ್​ಗೆ ಇತ್ತೀಚೆಗೆ ಇತ್ತೀಚೆಗೆ ಕಳ್ಳನೊಬ್ಬ ಏರಿ ಕುಳಿತಿದ್ದನು. ಕಳ್ಳತನ ಪ್ರಕರಣ ಸಂಬಂಧ ಜನವರಿ 17ರಂದು ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು. ಆದರೆ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಬೇರೆ ದಾರಿ ಇಲ್ಲದೆ ದಿಕ್ಕುತೋಚದಂತಾದಾಗ ಕಳ್ಳ ಜಾವೀದ್​ ಕಣ್ಣಿಗೆ ಬಿದ್ದಿದ್ದು ಟವರ್. ಕೂಡಲೇ ಕಳ್ಳ ಟವರ್ ಏರಿದ್ದನು. ಸುಮಾರು ಎರಡು ಗಂಟೆಗಳ ಕಾಲ ಟಾವರ್ ಏರಿ ಕುಳಿತ ಜಾಮೀದ್ ಹೈಡ್ರಾಮ ನಡೆಸಿದ್ದನು. ಇದರಿಂದ ಪೊಲೀಸರು ಹಾಗೂ ಸ್ಥಳೀಯರು ಬೆಚ್ಚುಬಿದ್ದಿದ್ದರು. ಈತನನ್ನು ಕೆಳಗಿಳಿಸಲು ಸಿಬ್ಬಂದಿ ಹರಸಾಹಸಪಡಬೇಕಾಗಿತ್ತು. ಇದೀಗ ಬೇಡಿಕೆ ಈಡೇರಿಸುವಂತೆ ಆಗ್ರಹಿ ಕಳ್ಳ ಏರಿದ್ದ ಟವರ್​ಗೆ ಮಲ್ಲಿಕಾರ್ಜುನ ಏರಿ ಕುಳಿತಿದ್ದಾನೆ.

ಇದನ್ನೂ ಓದಿ: ಧಾರವಾಡ: ಸಿಗರೇಟ್​ಗಾಗಿ ಮೊಬೈಲ್ ಟವರ್ ಏರಿ ಕುಳಿತ ಮಾನಸಿಕ ಅಸ್ವಸ್ಥ

man climbs mobile tower (1)

ಟವರ್ ಏರಿದ ನೀರು ಸರಬರಾಜು ನೌಕರ

ಧಾರವಾಡ-ಹುಬ್ಬಳ್ಳಿ ಅವಳಿ ನಗರಕ್ಕೆ ನೀರು ಸರಬರಾಜು ಮಾಡುವ ಸವದತ್ತಿಯ ಮಲಪ್ರಭಾ ಜಲಾಶಯದಲ್ಲಿರುವ ಮುಖ್ಯ ಘಟಕದಲ್ಲಿ ವಾಲ್ ಮ್ಯಾನ್ ಆಗಿರುವ ಮಲ್ಲಿಕಾರ್ಜು‌ನ, ಟವರ್ ಏರಿದ್ದರಿಂದ ಕೆಲ ಕಾಲ ಗೊಂದಲ ನಿರ್ಮಾಣವಾಗಿತ್ತು. ಸದ್ಯ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಆತನ ಮನವೋಲಿಸುವಲ್ಲಿ ಯಶಸ್ವಿಯಾಗಿದ್ದು, ಟವರ್​ನಿಂದ ಕೆಳಗಿಳಿಯಲು ಮಲ್ಲಿಕಾರ್ಜುನ ಒಪ್ಪಿದ್ದಾನೆ. ಅದರಂತೆ ಸುರಕ್ಷಿತವಾಗಿ ಆತನನ್ನು ಕೆಳಗಿಳಿಸುವ ಕಾರ್ಯ ನಡೆಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ