AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗೀತ ಕ್ಷೇತ್ರಕ್ಕೆ ಧಾರವಾಡದ ಕೊಡುಗೆ ಅಪಾರ: ಜಂಟಿ ನಿರ್ದೇಶಕ ಬಸವರಾಜ ಹೂಗಾರ

ಸಂಗೀತ ಕ್ಷೇತ್ರದಲ್ಲಿ ಗುರು ಶಿಷ್ಯರ ಪರಂಪರೆಗೆ ಬುನಾದಿ ಹಾಕಿದವರು ಸ್ವರಸಾಮ್ರಾಟ ಪದ್ಮಭೂಷಣ ಪಂ. ಬಸವರಾಜ ರಾಜಗುರು. ಸಂಗೀತ ಕ್ಷೇತ್ರಕ್ಕೆ ಧಾರವಾಡದ ಕೊಡುಗೆ ಅಪಾರವಿದೆ ಎಂದು ಬೆಳಗಾವಿಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ ಹೇಳಿದ್ದಾರೆ.

ಸಂಗೀತ ಕ್ಷೇತ್ರಕ್ಕೆ ಧಾರವಾಡದ ಕೊಡುಗೆ ಅಪಾರ: ಜಂಟಿ ನಿರ್ದೇಶಕ ಬಸವರಾಜ ಹೂಗಾರ
ಪದ್ಮಭೂಷಣ ಪಂ. ಬಸವರಾಜ ರಾಜಗುರು ಅವರ 103 ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಗಣ್ಯರು
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Aug 24, 2023 | 10:07 PM

Share

ಧಾರವಾಡ, ಆಗಸ್ಟ್ 24: ಸಂಗೀತ ಕ್ಷೇತ್ರದಲ್ಲಿ ಗುರು ಶಿಷ್ಯರ ಪರಂಪರೆಗೆ ಬುನಾದಿ ಹಾಕಿದವರು ಸ್ವರಸಾಮ್ರಾಟ ಪದ್ಮಭೂಷಣ ಪಂ. ಬಸವರಾಜ ರಾಜಗುರು. ಸಂಗೀತ ಕ್ಷೇತ್ರದ ಮಹನೀಯರನ್ನು ನೆನೆಯಬೇಕು. ಸಂಗೀತ ಕ್ಷೇತ್ರಕ್ಕೆ ಧಾರವಾಡದ ಕೊಡುಗೆ ಅಪಾರವಿದೆ ಎಂದು ಬೆಳಗಾವಿಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಸವರಾಜ ಹೂಗಾರ (Basavaraja Hoogara) ಅವರು ಹೇಳಿದರು. ನಗರದ ಆಲೂರು ವೆಂಕಟರಾವ್ ಸಂಸ್ಕೃತಿ ಭವನದಲ್ಲಿ ಸ್ವರಸಾಮ್ರಾಟ ಪಂ. ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಆಶ್ರಯದಲ್ಲಿ ಸ್ವರ ಸಾಮ್ರಾಟ ಪದ್ಮಭೂಷಣ ಪಂ. ಬಸವರಾಜ ರಾಜಗುರು ಅವರ 103 ನೇ ಜನ್ಮದಿನಾಚರಣೆ ಹಾಗೂ ಪಂ. ಬಸವರಾಜ ರಾಜಗುರು ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಮತ್ತು ಸಂಗೀತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸ್ವರಸಾಮ್ರಾಟ ಪಂ.ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ (ರಿ) ಟ್ರಸ್ಟ್ ನ ಅಧ್ಯಕ್ಷರಾದ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಭಾರತಿದೇವಿ ರಾಜಗುರು, ನಿಜಗುಣ ರಾಜಗುರು, ಡಾ. ಮುದ್ದುಮೋಹನ್, ಡಾ.ಉದಯಕುಮಾರ ದೇಸಾಯಿ, ಸಂಗೀತಾ ಕಟ್ಟಿ ಅವರು ಉಪಸ್ಥಿತರಿದ್ದರು.

ಇದನ್ನೂ ಓದಿ: ರೈತರ ಪಾಲಿಗೆ ಲಕ್ಷ್ಮಿಯಾದ ಹೂವು! ಕೆಜಿ ಕನಕಾಂಬರಕ್ಕೆ 2 ಸಾವಿರ; ಚೆಂಡು, ಸೇವಂತಿಗೆ ಎಷ್ಟು ಗೊತ್ತಾ?

ಮುಂಬಯಿಯ ವಿದುಷಿ ಅಶ್ವಿನಿ ಭಿಡೆ ದೇಶಪಾಂಡೆ ಅವರಿಗೆ ಸ್ವರಸಾಮ್ರಾಟ ಪಂ.ಬಸವರಾಜ ರಾಜಗುರು ರಾಷ್ಟ್ರೀಯ ಪ್ರಶಸ್ತಿ ನೀಡಲಾಯಿತು ಮತ್ತು ಧಾರವಾಡದ ಡಾ.ಉದಯ ಕುಲಕರ್ಣಿ ಹಾಗೂ ಬೆಂಗಳೂರಿನ ಇಮಾನ್ ದಾಸ್ ಅವರಿಗೆ ರಾಷ್ಟ್ರೀಯ ಯುವ ಪ್ರಶಸ್ತಿ ನೀಡಿ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

1 ಲಕ್ಷ ನಗದು, ಪ್ರಶಸ್ತಿ ಫಲಕ ಒಳಗೊಂಡ 2023-24 ನೇ ಸಾಲಿನ ಪಂ.ಬಸವರಾಜ ರಾಜಗುರು ರಾಷ್ತ್ರೀಯ ಪ್ರಶಸ್ತಿಯನ್ನು ಮುಂಬೈನ ಸಂಗೀತ ಕಲಾವಿದೆ ವಿದುಷಿ ಅಶ್ವಿನಿ ಭಿಡೆ ದೇಶಪಾಂಡೆ ಅವರಿಗೆ ಪ್ರದಾನ ಮಾಡಲಾಯಿತು. ಇನ್ನು ರಾಷ್ಟ್ರೀಯ ಯುವ ಪ್ರಶಸ್ತಿಯನ್ನು ಧಾರವಾಡದ ತಬಲಾ ವಾದಕ ಉದಯ ಕುಲಕರ್ಣಿ ಹಾಗೂ ಬೆಂಗಳೂರಿನ ಗಾಯಕ ಇಮಾನ ದಾಸ್ ಅವರಿಗೆ ನೀಡಲಾಯಿತು. ಈ ರಾಷ್ಟ್ರೀಯ ಯುವ ಪ್ರಶಸ್ತಿಗೆ ಆಯ್ಕೆಯಾದ ಕಲಾವಿದರಿಗೆ ತಲಾ 25,000 ರೂ. ಮೊತ್ತದ ಬಹುಮಾನ ಹಾಗೂ ಪ್ರಶಸ್ತಿ ಫಲಕವನ್ನು ವಿತರಿಸಲಾಯಿತು.

ಆಕಾಶವಾಣಿ ಹಿರಿಯ ಉದ್ಘೋಷಕಿ ಮಾಯಾ ರಾಮನ್ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 10:05 pm, Thu, 24 August 23

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ