AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ರಂ ಲ್ಯಾಂಡರ್ ಚಂದ್ರನಲ್ಲಿಳಿಯುವ ಹೊತ್ತಲ್ಲೇ ಹುಬ್ಬಳ್ಳಿ-ಧಾರವಾಡ ಪೋಲಿಸರು ಲ್ಯಾಂಡ್​ ಮಾಡಿಸಿದ್ದೇನು? ಇಲ್ಲಿದೆ ನೋಡಿ

ಇಸ್ರೋ ವಿಜ್ಞಾನಿಗಳು ವಿಕ್ರಮ್​ ಲ್ಯಾಡರ್​ನ್ನು ಚಂದ್ರನ ಮೇಲೆ ಲ್ಯಾಂಡ್​ ಮಾಡಿಸಿದರೇ, ಇತ್ತ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು ಬೈಕ್​ನ ಚಕ್ರವನ್ನು ಮೇಲೆತ್ತಿ ವೀಲಿಂಗ್​ ಮಾಡುತ್ತಿದ್ದವನನ್ನು ಹಿಡಿದು ನೆಲಕ್ಕೆ ಲ್ಯಾಂಡ್​ ಮಾಡಿಸಿದ ಘಟನೆಯನ್ನು ತಮ್ಮ ಟ್ವೀಟರ್​ ಖಾತೆಯಲ್ಲಿ ವಿಭಿನ್ನವಾಗಿ ಹಂಚಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.

ವಿಕ್ರಂ ಲ್ಯಾಂಡರ್ ಚಂದ್ರನಲ್ಲಿಳಿಯುವ ಹೊತ್ತಲ್ಲೇ ಹುಬ್ಬಳ್ಳಿ-ಧಾರವಾಡ ಪೋಲಿಸರು ಲ್ಯಾಂಡ್​ ಮಾಡಿಸಿದ್ದೇನು? ಇಲ್ಲಿದೆ ನೋಡಿ
ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್​
ಕಿರಣ್ ಹನುಮಂತ್​ ಮಾದಾರ್
|

Updated on:Aug 23, 2023 | 8:23 PM

Share

ಹುಬ್ಬಳ್ಳಿ, ಆ.23: ಇಂದು ಇಡೀ ದೇಶವೇ ಕಾತುರದಿಂದ ಕಾಯುತ್ತಿದ್ದ ಚಂದ್ರಯಾನ-3 (Chandrayaan-3) ಯಶಸ್ವಿಯಾಗಿ ಚಂದ್ರನ ಮೇಲೆ ಲ್ಯಾಂಡ್​ ಆಗಿದೆ. ಈ ಮೂಲಕ ಭಾರತ ಮತ್ತೊಂದು ಮೈಲುಗಲ್ಲು ತಲುಪಿದೆ. ಅದರಂತೆ ಇದೇ ವೇಳೆ ಹುಬ್ಬಳ್ಳಿ-ಧಾರವಾಡ ಪೊಲೀಸರು ಕೂಡ ವಾಹನ ಸವಾರರಿಗೆ ಕಿರಿಕಿರಿ ಕೊಡುತ್ತ ಬೈಕ್ ವೀಲಿಂಗ್​ ಮಾಡುತ್ತಿದ್ದ​ ಪುಂಡನೊಬ್ಬನನ್ನು ಹಿಡಿದು ನೆಲಕ್ಕೆ ಲ್ಯಾಂಡ್​ ಮಾಡಿದ್ದಾರೆ. ಹೌದು, ಇಸ್ರೋ ವಿಜ್ಞಾನಿಗಳು ವಿಕ್ರಮ್​ ಲ್ಯಾಡರ್​ನ್ನು ಚಂದ್ರನ ಮೇಲೆ ಲ್ಯಾಂಡ್​ ಮಾಡಿಸಿದರೇ, ಇತ್ತ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರು (Hubli-Dharwad City Police) ಬೈಕ್​ನ ಚಕ್ರವನ್ನು ಮೇಲೆತ್ತಿ ವೀಲಿಂಗ್​ ಮಾಡುತ್ತಿದ್ದವನನ್ನು ಹಿಡಿದು ನೆಲಕ್ಕೆ ಲ್ಯಾಂಡ್​ ಮಾಡಿಸಿದ ಘಟನೆಯನ್ನು ತಮ್ಮ ಟ್ವೀಟರ್​ ಖಾತೆಯಲ್ಲಿ ವಿಭಿನ್ನವಾಗಿ ಹಂಚಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.

ಹೌದು, ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್​ ಟ್ವೀಟರ್​ ಖಾತೆಯಲ್ಲಿ​‘ ಆವತ್ತು ಎರಡು ಘಟನೆಗಳು ನಡೆದವು. ಒಂದು ‘ನಮ್ಮ ಹೆಮ್ಮೆಯ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ನೆಲದ ಮೇಲೆ ಲ್ಯಾಂಡ್ ಆಯ್ತು’ ಇನ್ನೊಂದು ಬೈಕ್​ನ ಚಕ್ರವನ್ನು ಮೇಲೆತ್ತಿ ವೀಲಿಂಗ್​ ಮಾಡುತ್ತಿದ್ದವನನ್ನು ಹಿಡಿದು ಆತನನ್ನು ನೆಲಕ್ಕೆ ಲ್ಯಾಂಡ್ ಮಾಡಿಸಲಾಯ್ತು. ಎಂದು ಹಾಸ್ಯಾಸ್ಪದವಾಗಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:ಚಂದ್ರಯಾನ-3 ವಿಕ್ರಮ ಲ್ಯಾಂಡರ್ ಯಶಸ್ವೀ ಲ್ಯಾಂಡಿಂಗ್, ಬೆಂಗಳೂರಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಇದೀಗ ಪೊಲೀಸರು ಹಂಚಿಕೊಂಡ ವಿಡಿಯೋ ವೈರಲ್​ ಆಗುತ್ತಿದ್ದು, ನೆಟ್ಟಿಗರು ಕೂಡ ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ. ಓರ್ವರು ‘ಈಗ ಹುಬ್ಬಳ್ಳಿ-ಧಾರವಾಡ ಪೊಲೀಸರು ಗಿಚ್ಚಿ ಡೈಲಾಗ್​ ಬರಿಯುತ್ತಿದ್ದಾರೆಂದರೆ, ಮತ್ತೊರ್ವರು ಒಂದು ಕಡೆ ನಮ್ಮ ವಿಜ್ಞಾನಿಗಳು ವಿಕ್ರಂ ಲ್ಯಾಂಡರ್​ನ್ನು ಚಂದ್ರನ ಮೇಲೆ ಇಳಿಸುವುದರಲ್ಲಿ ನಿರತರಾಗಿದ್ದಾರೆ. ಇನ್ನೊಂದು ಕಡೆ ನಮ್ಮ ಪೊಲೀಸರು ವಾಹನಗಳನ್ನು ಮನಸೋ ಇಚ್ಛೆ ಉಪಟಳ ಮಾಡುವವರಿಗೆ ಸರಿಯಾಗಿ ಕೆಳಗೆ ಇರಿಸುತ್ತಿದ್ದಾರೆ ಎಂದು ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:21 pm, Wed, 23 August 23

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ