AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಹಾ, ಅಂಜಲಿ ಕೊಲೆ ಆರೋಪಿಗಳನ್ನ ಎನ್ ಕೌಂಟರ್‌ ಮಾಡ್ಬೇಕು- ದಿಂಗಾಲೇಶ್ವರ ಸ್ವಾಮೀಜಿ

ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಮಾಸುವ ಮುನ್ನವೇ ಮತ್ತೊಂದು ಯುವತಿ ಅಂಜಲಿ ಎಂಬುವವರ ಭೀಕರ ಕೊಲೆಯಾಗಿದೆ. ಈ ಹಿನ್ನಲೆ ಹತ್ಯೆ ಖಂಡಿಸಿ‌ ನಾಳೆ(ಮೇ.17) ಪ್ರತಿಭಟನೆ ಮಾಡುತ್ತೇವೆ ಎಂದು ಶಿರಹಟ್ಟಿ ಫಕ್ಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಅವರು ಹೇಳಿದ್ದಾರೆ. ಜೊತೆಗೆ ಯುವತಿ ಹಂತಕರನ್ನ ಎನ್ ಕೌಂಟರ್‌ ಮಾಡಬೇಕು ಎಂದು ಕಿಡಿಕಾರಿದ್ದಾರೆ.

ನೇಹಾ, ಅಂಜಲಿ ಕೊಲೆ ಆರೋಪಿಗಳನ್ನ ಎನ್ ಕೌಂಟರ್‌ ಮಾಡ್ಬೇಕು- ದಿಂಗಾಲೇಶ್ವರ ಸ್ವಾಮೀಜಿ
ಅಂಜಲಿ ಹತ್ಯೆ ಖಂಡಿಸಿ ದಿಂಗಾಲೇಶ್ವರ ಸ್ವಾಮೀಜಿ ಕಿಡಿ
ಶಿವಕುಮಾರ್ ಪತ್ತಾರ್
| Edited By: |

Updated on:May 16, 2024 | 2:48 PM

Share

ಹುಬ್ಬಳ್ಳಿ, ಮೇ.16: ಹುಬ್ಬಳ್ಳಿಯ ನೇಹಾ ಹಾಗೂ ಅಂಜಲಿ ಕೊಲೆ ಆರೋಪಿಗಳನ್ನು ಎನ್ ಕೌಂಟರ್‌ ಮಾಡಬೇಕು ಎಂದು ದಿಂಗಾಲೇಶ್ವರ ಸ್ವಾಮೀಜಿ(Dingaleshwar swamiji) ಕಿಡಿಕಾರಿದ್ದಾರೆ. ಇಂದು(ಮೇ.16) ಹುಬ್ಬಳ್ಳಿ(Hubballi)ಯ ಮೃತ ಅಂಜಲಿ ಅಂಬಿಗೇರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಬಳಿಕ ಮಾತನಾಡಿದ ಅವರು, ‘ ಅಂಜಲಿ ಅಜ್ಜಿ ಅವರು ಹತ್ಯೆಗೂ ಮುಂಚೆಯೇ ಪೊಲೀಸರ ಗಮನಕ್ಕೆ ತಂದಿದ್ದರು. ಆದರೆ, ಪೊಲೀಸರು ನಿರ್ಲಕ್ಷ್ಯ ಮಾಡಿದ್ದಾರೆ. ಹೀಗಾಗಿ ಅಂಜಲಿ‌ ಕೊಲೆಗೆ ಪೊಲೀಸರೇ ಹೊಣೆ ಎಂದು ಶ್ರೀಗಳು ಗಂಭೀರ ಆರೋಪ ಮಾಡಿದ್ದಾರೆ.

ಅಂಜಲಿ ಹತ್ಯೆ ಖಂಡಿಸಿ‌ ಪ್ರತಿಭಟನೆ

ಇದೇ ವೇಳೆ ‘ನಾವು ನಾಳೆ(ಮೇ.17) ಅಂಜಲಿ ಹತ್ಯೆ ಖಂಡಿಸಿ‌ ಪ್ರತಿಭಟನೆ ಮಾಡುತ್ತೇವೆ. ಈ ಪ್ರಕರಣದಲ್ಲಿ ತಪ್ಪು ಮಾಡಿದ ಪೊಲೀಸರನ್ನು ಕೆಲಸದಿಂದ ತಗೀಬೇಕು. ಪೊಲೀಸ್ ಠಾಣೆಗೆ ಹೋದಾಗ ಮೂಢನಂಬಿಕೆ ಎಂದಿದ್ದಾರೆ. ಇವತ್ತು ‌ಕೊಲೆಯಾಗಿದೆ, ಕೊಲೆಗೆ ಪೊಲೀಸರೇ ನೇರಾನೇರ ಹೊಣೆಯಾಗಿದ್ದಾರೆ. ನಾವು ನಾಳೆ ಪ್ರತಿಭಟನೆ ಮಾಡಿ, ಅವಶ್ಯ ಬಿದ್ರೆ ಮುಖ್ಯಮಂತ್ರಿಗಳನ್ನ ಭೇಟಿ ಮಾಡುತ್ತೇನೆ. ಈ ವಿಷಯವನ್ನ ಸಿಎಂ ಸಿದ್ದರಾಮಯ್ಯ  ಅವರ ಗಮನಕ್ಕೆ ತರ್ತೀವಿ. ಅಂಜಲಿ ಮನೆಯಲ್ಲಿ ಓದುತ್ತಿರುವ ಸಹೋದರಿಯರು ಇದ್ದಾರೆ. ನಾವು ಅವರನ್ನು ದತ್ತು ತಗೆದುಕೊಂಡು ವಿದ್ಯಾಭ್ಯಾಸ ಕೊಡಿಸುತ್ತೇವೆ ಎಂದರು.

ಇದನ್ನೂ ಓದಿ:ಹುಬ್ಬಳ್ಳಿ ಅಂಜಲಿ ಹಂತಕನ ಪತ್ತೆಗೆ ಎರಡು ವಿಶೇಷ ತಂಡ ರಚನೆ, ಪೊಲೀಸ್ ಆಯುಕ್ತೆ ಹೇಳಿದ್ದೇನು?

ಘಟನೆ ವಿವರ

ಬುಧವಾರ (ಮೇ.15) ಬೆಳಿಗ್ಗೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್​ ಠಾಣೆ ವ್ಯಾಪ್ತಿಯ ವೀರಾಪುರ ಓಣಿಯಲ್ಲಿ ಯುವತಿಯನ್ನು ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿತ್ತು. ಅಂಜಲಿ ಅಂಬಿಗೇರ (20) ಮೃತ ಯುವತಿ. ಆಕೆಯ ಮನೆಗೆ ನುಗ್ಗಿದ ಆರೋಪಿ ವಿಶ್ವ ಎಂಬಾತ ಆಕೆಯ ಅಜ್ಜಿ ಮತ್ತು ಸಹೋದರಿಯ ಎದುರೇ ಆಕೆಗೆ ಚಾಕುವಿನಿಂದ ಹೊಟ್ಟೆಗೆ ಚುಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ. ಇದೀಗ ಈ ಘಟನೆಗೆ ಸಂಬಂಧಪಟ್ಟಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್​ ಆಯುಕ್ತೆ ರೇಣುಕಾ ಸುಕುಮಾರ ಅವರು ಹಂತಕನ ಪತ್ತೆಗೆ ಎರಡು ವಿಶೇಷ ತಂಡವನ್ನು ರಚನೆ ಮಾಡಿದ್ದಾಗಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:41 pm, Thu, 16 May 24

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​