AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಫೋಟೋ ಕೊಡದ ಫೋಟೊಗ್ರಾಫರ್​ಗೆ​ ಜಿಲ್ಲಾ ಗ್ರಾಹಕರ ನ್ಯಾಯಾಲಯದಿಂದ ದಂಡ

ಫೋಟೊಗ್ರಾಫರ್‌ ಮದುವೆಯ ಫೋಟೋಗಳನ್ನೇ ನೀಡದೇ ಇದ್ದಿದ್ದಕ್ಕೆ ಮದುವೆ ಮನೆ ಕಡೆಯವರು ಗ್ರಾಹಕರ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಫೋಟೋಗ್ರಾಫರ್ಗೆ ಬರೋಬ್ಬರಿ ಬಿಸಿ ಮುಟ್ಟಿಸಿದೆ.

ಮದುವೆ ಫೋಟೋ ಕೊಡದ ಫೋಟೊಗ್ರಾಫರ್​ಗೆ​ ಜಿಲ್ಲಾ ಗ್ರಾಹಕರ ನ್ಯಾಯಾಲಯದಿಂದ ದಂಡ
ಪ್ರಾತಿನಿಧಿಕ ಚಿತ್ರ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Jul 19, 2023 | 7:47 PM

Share

ಧಾರವಾಡ, ಜುಲೈ 19: ಕಳೆದು ಹೋದ ಕ್ಷಣಗಳು ಮತ್ತೆ ಬಾರವು ಎನ್ನುವ ಮಾತೊಂದಿದೆ. ಮದುವೆಯಂಥ ಕಾರ್ಯಕ್ರಮಗಳು ಜೀವನದಲ್ಲಿ ಒಂದೇ ಬಾರಿ ನಡೆಯುತ್ತವೆ. ಈ ಸಂದರ್ಭದಲ್ಲಿನ ಮಧುರ ಕ್ಷಣಗಳನ್ನು ಮೆಲುಕು ಹಾಕಲು ಫೋಟೋ, ವೀಡಿಯೋಗಳೊಂದೇ ಸಾಧನ. ಹೀಗಾಗಿ ಇಂಥ ಕಾರ್ಯಕ್ರಮಗಳಲ್ಲಿ ಫೋಟೊಗ್ರಾಫರ್‌ (photographer) ಮತ್ತು ವೀಡಿಯೋಗ್ರಾಫರ್ಗೆ ವಿಶೇಷ ಆದರವಿರುತ್ತೆ. ಆದರೆ ಧಾರವಾಡದ ಓರ್ವ ಫೋಟೊಗ್ರಾಫರ್‌ ಮದುವೆಯ ಫೋಟೋಗಳನ್ನೇ ನೀಡದೇ ಇದ್ದಿದ್ದಕ್ಕೆ ಮದುವೆ ಮನೆ ಕಡೆಯವರು ಗ್ರಾಹಕರ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಫೋಟೋಗ್ರಾಫರ್ಗೆ ಬರೋಬ್ಬರಿ ಬಿಸಿ ಮುಟ್ಟಿಸಿದೆ.

ಧಾರವಾಡ ನಗರದ ಆಕಾಶವಾಣಿ ಹತ್ತಿರದ ಶೇಕ್ ಕಂಪೌಂಡ್ ನಿವಾಸಿ ಶಹಬಾಜ ಹೆಬಸೂರ ಎಂಬುವವರು ತನ್ನ ಮದುವೆಗೆ ಫೋಟೋ ತೆಗೆಯಲು ಸತ್ತೂರು ಬಡಾವಣೆಯ ಕೆ.ಎಚ್.ಬಿ. ಲೇಔಟ್‌ನಲ್ಲಿರುವ ರವಿ ದೊಡ್ಡಮನಿ ಎಬುವರಿಗೆ ರೂ. 25 ಸಾವಿರಕ್ಕೆ ಗುತ್ತಿಗೆ ಕೊಟ್ಟಿದ್ದರು. ಆ ಪೈಕಿ ಶಹಬಾಜ ಅವರು ರೂ. 15 ಸಾವಿರ ಮುಂಗಡ ಹಣ ಸಹ ಕೊಟ್ಟಿದ್ದರು.

ಇದನ್ನೂ ಓದಿ: ಸಂವಿಧಾನದ 371 ಜೆ ವಿಧಿಯಡಿ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ

2022 ರ ಡಿಸೆಂಬರ್ ನಲ್ಲಿ ಶಹಬಾಜ್ ಅವರ ಮದುವೆಯಾಗಿತ್ತು. ಮದುವೆಯಾಗಿ ಬಹಳ ದಿನಗಳಾದರೂ ರವಿ ದೊಡ್ಡಮನಿ ಫೋಟೋಗಳನ್ನು ನೀಡಿರಲಿಲ್ಲ. ಇದರಿಂದ ಬೇಸತ್ತ ಶಹಬಾಜ್ ಹೆಬಸೂರು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಹಾಗೂ ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು ಹಿರೇಮಠ, ಮದುವೆಯ ಸವಿನೆನಪಿಗಾಗಿ ಮದುವೆ ಸಮಾರಂಭದಲ್ಲಿ ತೆಗೆದ ಫೋಟೋಗಳನ್ನು ನೀಡದೆ ಇರುವುದು ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ.

ಇದನ್ನೂ ಓದಿ: Yatnal rushed to hospital: ವಿಧಾನ ಸಭೆಯಲ್ಲಿ ಕುಸಿದು ಬಿದ್ದ ಶಾಸಕ ಬಸನಗೌಡ ಯತ್ನಾಳ್, ಬಿಪಿ ಹೊರತು ಯಾವುದೇ ಸಮಸ್ಯೆಯಿಲ್ಲ ಎಂದ ವೈದ್ಯರು

ಸಂದಾಯ ಮಾಡಿದ ಮುಂಗಡ ಹಣ ರೂ. 15 ಸಾವಿರ ಜೊತೆಗೆ ದೂರುದಾರ ಅನುಭವಿಸಿದ ಅನಾನುಕೂಲತೆ ಮತ್ತು ಮಾನಸಿಕ ಹಿಂಸೆಗಾಗಿ ರೂ. 10 ಸಾವಿರ ಪರಿಹಾರ ಹಾಗೂ ಈ ಪ್ರಕರಣದ ಖರ್ಚು ವೆಚ್ಚವೆಂದು ರೂ. 5 ಸಾವಿರ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಕೊಡುವಂತೆ ಫೋಟೊಗ್ರಾಫರ್‌ ರವಿ ದೊಡ್ಡಮನಿಗೆ ಆದೇಶಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ