AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೋಷಪೂರಿತ ಟ್ಯಾಬ್ ಪೆನ್ ಸರಬರಾಜು ಮಾಡಿ ಸೇವಾ ನ್ಯೂನ್ಯತೆ: 61,999 ರೂ ದಂಡ ಕೊಡಲು ಅಮೆಜಾನ್ ಕಂಪನಿಗೆ ಆದೇಶ!

ಈ ದೂರು ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ, ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಹಾಗೂ ಪ್ರಭು ಹಿರೇಮಠ, ಹಣ ಕೊಟ್ಟು ಹೊಸ ಸರಕನ್ನು ಖರೀದಿಸುವಾಗ ಮಾರುವವರು, ಗ್ರಾಹಕರು ಕೇಳುವ ಒಳ್ಳೆ ಗುಣಮಟ್ಟದ ಹೊಸ ಸರಕನ್ನು ಕೊಡುವುದು ಮಾರಾಟಗಾರರ ಕರ್ತವ್ಯ ಎಂದರು.

ದೋಷಪೂರಿತ ಟ್ಯಾಬ್ ಪೆನ್ ಸರಬರಾಜು ಮಾಡಿ ಸೇವಾ ನ್ಯೂನ್ಯತೆ: 61,999 ರೂ ದಂಡ ಕೊಡಲು ಅಮೆಜಾನ್ ಕಂಪನಿಗೆ ಆದೇಶ!
ದೋಷಪೂರಿತ ಟ್ಯಾಬ್ ಪೆನ್ ಸರಬರಾಜು ಸೇವಾ ನ್ಯೂನ್ಯತೆ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Jun 10, 2023 | 2:30 PM

Share

ದೋಷಪೂರಿತ ಟ್ಯಾಬ್ ಪೆನ್ ಸರಬರಾಜು ಮಾಡಿದ ಅಮೆಜಾನ್ ಕಂಪನಿಗೆ ಭಾರೀ ದಂಡದೊಂದಿಗೆ ಪರಿಹಾರ ನೀಡಲು ಜಿಲ್ಲಾ ಗ್ರಾಹಕರ ಆಯೋಗ (District Consumer court) ಆದೇಶಿಸಿದೆ. ಧಾರವಾಡ ನಗರದ (Dharwad) ಯಾಲಕ್ಕಿ ಶೆಟ್ಟರ ಕಾಲೋನಿಯ ತೇಜಸ್ವಿನಿ ಹುದ್ದಾರ ಎಂಬ ವಿದ್ಯಾರ್ಥಿನಿ (student) ತನ್ನ ವ್ಯಾಸಂಗಕ್ಕಾಗಿ ಅಮೆಜಾನ್ ಕಂಪನಿ (Amazon) ಮೂಲಕ ಪೇ ಲೇಟರ್ ವ್ಯವಸ್ಥೆ ಅಡಿ ರೂ. 1,199 ಕಿಮ್ಮತ್ತಿನ ಟ್ಯಾಬ್ ಪೆನ್ (tab pen) ಖರೀದಿಸಿದ್ದರು. ಪಾರ್ಸಲ್ ಬಂದ ಬಳಿಕ ಅದನ್ನು ತೆರೆದು ನೋಡಿದಾಗ ಅದರೊಳಗೆ ಉಪಯೋಗಿಸಿದ ಹಳೆಯ ಟ್ಯಾಬ್ ಪೆನ್ ಇತ್ತು.

ತಕ್ಷಣ ಆ ಸಂಗತಿಯನ್ನು ಅಮೆಜಾನ್ ಕಸ್ಟಮರ್ ಕೇರ್‌ಗೆ ತಿಳಿಸಿದರು. ಅವರು ಯಾವುದೇ ಕ್ರಮ ಕೈಗೊಳ್ಳದಿದ್ದಾಗ ದೂರುದಾರರು ಬೇರೊಂದು ಟ್ಯಾಬ್ ಪೆನ್ ಖರೀದಿಸಿ ತಮ್ಮ ವ್ಯಾಸಂಗ ಮುಂದುವರಿಸಿದರು. ದೋಷಪೂರಿತ ಟ್ಯಾಬ್ ಪೆನ್ ಸರಬರಾಜು ಮಾಡಿರುವುದು ಸೇವಾ ನ್ಯೂನ್ಯತೆ ಎಂದು ಬೆಂಗಳೂರಿನ ಅಮೆಜಾನ್ ಹಾಗೂ ಅಪಾರಿಯೋರಿಟೇಲ್ ಕಂಪನಿ ಮೇಲೆ ಕ್ರಮಕ್ಕಾಗಿ ತೇಜಸ್ವಿನಿ ಜಿಲ್ಲಾ ಗ್ರಾಹಕರ ಆಯೋಗದ ಮುಂದೆ ದೂರು ಸಲ್ಲಿಸಿದ್ದರು.

Also Read: Snakelets – ನೆಲದಲ್ಲಿ ಅವಿತಿದ್ದವು ರಾಶಿ ರಾಶಿ ನಾಗರಹಾವುಗಳು, ಹೆಡೆ ಎತ್ತಿ ಹೊರ ಬಂದ ತಾಯಿ

ಈ ದೂರು ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ, ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಹಾಗೂ ಪ್ರಭು ಹಿರೇಮಠ, ಹಣ ಕೊಟ್ಟು ಹೊಸ ಸರಕನ್ನು ಖರೀದಿಸುವಾಗ ಮಾರುವವರು, ಗ್ರಾಹಕರು ಕೇಳುವ ಒಳ್ಳೆ ಗುಣಮಟ್ಟದ ಹೊಸ ಸರಕನ್ನು ಕೊಡುವುದು ಮಾರಾಟಗಾರರ ಕರ್ತವ್ಯ ಎಂದರು.

ಆದರೆ ಈ ಪ್ರಕರಣದಲ್ಲಿ ಹೊಸ ಸರಕನ್ನು ಸರಬರಾಜು ಮಾಡುವ ಬದಲು ಉಪಯೋಗಿಸಿದ ಮತ್ತು ಹಳೆಯದಾದ ದೋಷಯುಕ್ತ ಸರಕನ್ನು ದೂರುದಾರಳಾದ ವಿದ್ಯಾರ್ಥಿನಿಗೆ ಸರಬರಾಜು ಮಾಡಿದ್ದು ತಪ್ಪು ಎಂದು ಆಯೋಗ ತೀರ್ಪು ನೀಡಿದೆ. ತೀರ್ಪು ನೀಡಿದ ಒಂದು ತಿಂಗಳೊಳಗಾಗಿ ದೂರುದಾರಳಿಗೆ ಟ್ಯಾಬ್ ಪೆನ್ನಿನ ಹಣ ರೂ. 1,999 ಕೊಡಬೇಕು ಮತ್ತು ಅನಾನುಕೂಲ ಹಾಗೂ ಮಾನಸಿಕ ತೊಂದರೆಗಾಗಿ ರು. 50 ಸಾವಿರ ರೂಪಾಯಿ ಪರಿಹಾರ ಮತ್ತು 10 ಸಾವಿರ ರೂಪಾಯಿ ಪ್ರಕರಣದ ಖರ್ಚು ವೆಚ್ಚ ಕೊಡುವಂತೆ ಎರಡು  ಕಂಪನಿಗಳಿಗೆ ಆಯೋಗ ಆದೇಶ ನೀಡಿದೆ.

ಧಾರವಾಡ ಕುರಿತಾದ ಸುದ್ದಿಗಳಿಗಾಗಿ ಇಲ್ಲಿನ ಕ್ಲಿಕ್ ಮಾಡಿ

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ