ದೋಷಪೂರಿತ ಟ್ಯಾಬ್ ಪೆನ್ ಸರಬರಾಜು ಮಾಡಿ ಸೇವಾ ನ್ಯೂನ್ಯತೆ: 61,999 ರೂ ದಂಡ ಕೊಡಲು ಅಮೆಜಾನ್ ಕಂಪನಿಗೆ ಆದೇಶ!

ಈ ದೂರು ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ, ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಹಾಗೂ ಪ್ರಭು ಹಿರೇಮಠ, ಹಣ ಕೊಟ್ಟು ಹೊಸ ಸರಕನ್ನು ಖರೀದಿಸುವಾಗ ಮಾರುವವರು, ಗ್ರಾಹಕರು ಕೇಳುವ ಒಳ್ಳೆ ಗುಣಮಟ್ಟದ ಹೊಸ ಸರಕನ್ನು ಕೊಡುವುದು ಮಾರಾಟಗಾರರ ಕರ್ತವ್ಯ ಎಂದರು.

ದೋಷಪೂರಿತ ಟ್ಯಾಬ್ ಪೆನ್ ಸರಬರಾಜು ಮಾಡಿ ಸೇವಾ ನ್ಯೂನ್ಯತೆ: 61,999 ರೂ ದಂಡ ಕೊಡಲು ಅಮೆಜಾನ್ ಕಂಪನಿಗೆ ಆದೇಶ!
ದೋಷಪೂರಿತ ಟ್ಯಾಬ್ ಪೆನ್ ಸರಬರಾಜು ಸೇವಾ ನ್ಯೂನ್ಯತೆ
Edited By: ಸಾಧು ಶ್ರೀನಾಥ್​

Updated on: Jun 10, 2023 | 2:30 PM

ದೋಷಪೂರಿತ ಟ್ಯಾಬ್ ಪೆನ್ ಸರಬರಾಜು ಮಾಡಿದ ಅಮೆಜಾನ್ ಕಂಪನಿಗೆ ಭಾರೀ ದಂಡದೊಂದಿಗೆ ಪರಿಹಾರ ನೀಡಲು ಜಿಲ್ಲಾ ಗ್ರಾಹಕರ ಆಯೋಗ (District Consumer court) ಆದೇಶಿಸಿದೆ. ಧಾರವಾಡ ನಗರದ (Dharwad) ಯಾಲಕ್ಕಿ ಶೆಟ್ಟರ ಕಾಲೋನಿಯ ತೇಜಸ್ವಿನಿ ಹುದ್ದಾರ ಎಂಬ ವಿದ್ಯಾರ್ಥಿನಿ (student) ತನ್ನ ವ್ಯಾಸಂಗಕ್ಕಾಗಿ ಅಮೆಜಾನ್ ಕಂಪನಿ (Amazon) ಮೂಲಕ ಪೇ ಲೇಟರ್ ವ್ಯವಸ್ಥೆ ಅಡಿ ರೂ. 1,199 ಕಿಮ್ಮತ್ತಿನ ಟ್ಯಾಬ್ ಪೆನ್ (tab pen) ಖರೀದಿಸಿದ್ದರು. ಪಾರ್ಸಲ್ ಬಂದ ಬಳಿಕ ಅದನ್ನು ತೆರೆದು ನೋಡಿದಾಗ ಅದರೊಳಗೆ ಉಪಯೋಗಿಸಿದ ಹಳೆಯ ಟ್ಯಾಬ್ ಪೆನ್ ಇತ್ತು.

ತಕ್ಷಣ ಆ ಸಂಗತಿಯನ್ನು ಅಮೆಜಾನ್ ಕಸ್ಟಮರ್ ಕೇರ್‌ಗೆ ತಿಳಿಸಿದರು. ಅವರು ಯಾವುದೇ ಕ್ರಮ ಕೈಗೊಳ್ಳದಿದ್ದಾಗ ದೂರುದಾರರು ಬೇರೊಂದು ಟ್ಯಾಬ್ ಪೆನ್ ಖರೀದಿಸಿ ತಮ್ಮ ವ್ಯಾಸಂಗ ಮುಂದುವರಿಸಿದರು. ದೋಷಪೂರಿತ ಟ್ಯಾಬ್ ಪೆನ್ ಸರಬರಾಜು ಮಾಡಿರುವುದು ಸೇವಾ ನ್ಯೂನ್ಯತೆ ಎಂದು ಬೆಂಗಳೂರಿನ ಅಮೆಜಾನ್ ಹಾಗೂ ಅಪಾರಿಯೋರಿಟೇಲ್ ಕಂಪನಿ ಮೇಲೆ ಕ್ರಮಕ್ಕಾಗಿ ತೇಜಸ್ವಿನಿ ಜಿಲ್ಲಾ ಗ್ರಾಹಕರ ಆಯೋಗದ ಮುಂದೆ ದೂರು ಸಲ್ಲಿಸಿದ್ದರು.

Also Read: Snakelets – ನೆಲದಲ್ಲಿ ಅವಿತಿದ್ದವು ರಾಶಿ ರಾಶಿ ನಾಗರಹಾವುಗಳು, ಹೆಡೆ ಎತ್ತಿ ಹೊರ ಬಂದ ತಾಯಿ

ಈ ದೂರು ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ, ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಹಾಗೂ ಪ್ರಭು ಹಿರೇಮಠ, ಹಣ ಕೊಟ್ಟು ಹೊಸ ಸರಕನ್ನು ಖರೀದಿಸುವಾಗ ಮಾರುವವರು, ಗ್ರಾಹಕರು ಕೇಳುವ ಒಳ್ಳೆ ಗುಣಮಟ್ಟದ ಹೊಸ ಸರಕನ್ನು ಕೊಡುವುದು ಮಾರಾಟಗಾರರ ಕರ್ತವ್ಯ ಎಂದರು.

ಆದರೆ ಈ ಪ್ರಕರಣದಲ್ಲಿ ಹೊಸ ಸರಕನ್ನು ಸರಬರಾಜು ಮಾಡುವ ಬದಲು ಉಪಯೋಗಿಸಿದ ಮತ್ತು ಹಳೆಯದಾದ ದೋಷಯುಕ್ತ ಸರಕನ್ನು ದೂರುದಾರಳಾದ ವಿದ್ಯಾರ್ಥಿನಿಗೆ ಸರಬರಾಜು ಮಾಡಿದ್ದು ತಪ್ಪು ಎಂದು ಆಯೋಗ ತೀರ್ಪು ನೀಡಿದೆ. ತೀರ್ಪು ನೀಡಿದ ಒಂದು ತಿಂಗಳೊಳಗಾಗಿ ದೂರುದಾರಳಿಗೆ ಟ್ಯಾಬ್ ಪೆನ್ನಿನ ಹಣ ರೂ. 1,999 ಕೊಡಬೇಕು ಮತ್ತು ಅನಾನುಕೂಲ ಹಾಗೂ ಮಾನಸಿಕ ತೊಂದರೆಗಾಗಿ ರು. 50 ಸಾವಿರ ರೂಪಾಯಿ ಪರಿಹಾರ ಮತ್ತು 10 ಸಾವಿರ ರೂಪಾಯಿ ಪ್ರಕರಣದ ಖರ್ಚು ವೆಚ್ಚ ಕೊಡುವಂತೆ ಎರಡು  ಕಂಪನಿಗಳಿಗೆ ಆಯೋಗ ಆದೇಶ ನೀಡಿದೆ.

ಧಾರವಾಡ ಕುರಿತಾದ ಸುದ್ದಿಗಳಿಗಾಗಿ ಇಲ್ಲಿನ ಕ್ಲಿಕ್ ಮಾಡಿ

Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
Follow Us