AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಡೆಪಾಸಿಟ್​ ಹಿಂದಿರುಗಿಸದ ಸರಸ್ವತಿ ಕೋ ಆಪ್​​ ಸೊಸೈಟಿಗೆ 11 ಲಕ್ಷ ರೂ ದಂಡ ವಿಧಿಸಿದ ಕೋರ್ಟ್​​

ದೂರಿನ ಬಗ್ಗೆ ಕೂಲಂಕಷವಾಗಿ ವಿಚಾರಣೆ ನಡೆಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗವು ಠೇವಣಿ ಅವಧಿ ಮುಗಿದರೂ ದೂರುದಾರರ ಹಣ ಹಿಂದಿರುಗಿಸದೇ ಇರುವುದು ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಅಭಿಪ್ರಾಯಪಟ್ಟು ದೂರುದಾರರಿಗೆ ಅವರ ಠೇವಣಿ ಹಣ ರೂ. 10,50,756 ಮತ್ತು ಉಳಿತಾಯ ಖಾತೆಯಲ್ಲಿರುವ ರೂ.1,35,320 ಹಣವನ್ನು ನೀಡುವಂತೆ ಹುಬ್ಬಳ್ಳಿಯ ಸರಸ್ವತಿ ಕೋ ಆಪ್​​ ಸೊಸೈಟಿಗೆ ಆದೇಶ ನೀಡಿದೆ.

ಹುಬ್ಬಳ್ಳಿ: ಡೆಪಾಸಿಟ್​ ಹಿಂದಿರುಗಿಸದ ಸರಸ್ವತಿ ಕೋ ಆಪ್​​ ಸೊಸೈಟಿಗೆ 11 ಲಕ್ಷ ರೂ ದಂಡ ವಿಧಿಸಿದ ಕೋರ್ಟ್​​
ವಿಮೆ ತಿರಸ್ಕರಿಸಿದ ಅಂಚೆ ಇಲಾಖೆಗೆ 3.03 ಲಕ್ಷ ದಂಡ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Sep 02, 2023 | 7:36 PM

Share

ಹುಬ್ಬಳ್ಳಿಯ ವಿಕಾಸ ನಗರದ ನಿವಾಸಿಗಳಾದ ಸುಲೋಚನಾ ಪೈ ಮತ್ತು ಶಾರದಾ ಪೈ ಅನ್ನುವವರು ಹುಬ್ಬಳ್ಳಿಯ ಕ್ವಾಯಿನ್ ರಸ್ತೆಯಲ್ಲಿರುವ ಸರಸ್ವತಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಸದಸ್ಯರಾಗಿ ಖಾಯಂ ಠೇವಣಿ (Deposit) ಇಟ್ಟು ಉಳಿತಾಯ ಖಾತೆ ಹೊಂದಿದ್ದರು. ಅವರಿಬ್ಬರೂ ಈ ಸೊಸೈಟಿಯಲ್ಲಿ ಒಟ್ಟು ರೂ.10,50,756 ಮೊತ್ತದ ವಿವಿಧ ಠೇವಣಿಯನ್ನು ಒಂದು ವರ್ಷದ ಅವಧಿಗೆ ಇಟ್ಟಿದ್ದರು. ಜೊತೆಗೆ ಅವರ ಉಳಿತಾಯ ಖಾತೆಯಲ್ಲಿ ರೂ. 1,35,320/- ಹಣ ಇತ್ತು.

ಅವಧಿ ಮುಗಿದಿದ್ದರಿಂದ ಠೇವಣಿ ಹಣ ಮತ್ತು ತಮ್ಮ ಉಳಿತಾಯ ಖಾತೆಯಲ್ಲಿರುವ ಹಣ ಕೊಡುವಂತೆ ದೂರುದಾರರು ಹಲವು ಬಾರಿ ವಿನಂತಿಸಿದರೂ ಸೊಸೈಟಿಯವರು ಅವರ ಡೆಪಾಸಿಟ್​ ಹಣ ಮತ್ತು ಬಡ್ಡಿಯನ್ನು ಕೊಟ್ಟಿರಲಿಲ್ಲ. ಇದರಿಂದಾಗಿ ತಮಗೆ ಮೋಸವಾಗಿದೆ ಮತ್ತು ಸೊಸೈಟಿಯವರು ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ಹೇಳಿ, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ (District Consumer Disputes Redressal Commission -DCDRC) ದೂರು ಸಲ್ಲಿಸಿದ್ದರು.

ದೂರಿನ ಬಗ್ಗೆ ಕೂಲಂಕಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಹಾಗೂ ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು ಹಿರೇಮಠ, ಠೇವಣಿ ಅವಧಿ ಮುಗಿದರೂ ದೂರುದಾರರ ಹಣ ಹಿಂದಿರುಗಿಸದೇ ಇರುವುದು ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಅಭಿಪ್ರಾಯಪಟ್ಟು ತೀರ್ಪು ನೀಡಿದ್ದಾರೆ.

ದೂರುದಾರರಿಗೆ ಅವರ ಠೇವಣಿ ಹಣ ರೂ. 10,50,756 ಮತ್ತು ಉಳಿತಾಯ ಖಾತೆಯಲ್ಲಿರುವ ರೂ.1,35,320 ಹಣವನ್ನು ಅದರ ಮೇಲೆ ಶೇ. 9 ರಂತೆ ಠೇವಣಿ ಇಟ್ಟ ದಿನಾಂಕದಿಂದ ಲೆಕ್ಕ ಹಾಕಿ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಹಿಂದಿರುಗಿಸುವಂತೆ ಆಯೋಗ ನಿರ್ದೇಶನ ನೀಡಿದೆ. ಜೊತೆಗೆ ದೂರುದಾರರು ಅನುಭವಿಸಿದ ಮಾನಸಿಕ ಹಿಂಸೆಗೆ 50 ಸಾವಿರ ರೂ ಪರಿಹಾರ ಮತ್ತು ಪ್ರಕರಣದ ಖರ್ಚುವೆಚ್ಚ ಅಂತಾ 10 ಸಾವಿರ ರೂ. ಈ ತೀರ್ಪು ನೀಡಿದ ಒಂದು ತಿಂಗಳೊಳಗಾಗಿ ನೀಡುವಂತೆ ಆಯೋಗ ಆದೇಶಿಸಿದೆ.

ಮತ್ತಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:34 pm, Sat, 2 September 23

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​