AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಡೆಪಾಸಿಟ್​ ಹಿಂದಿರುಗಿಸದ ಸರಸ್ವತಿ ಕೋ ಆಪ್​​ ಸೊಸೈಟಿಗೆ 11 ಲಕ್ಷ ರೂ ದಂಡ ವಿಧಿಸಿದ ಕೋರ್ಟ್​​

ದೂರಿನ ಬಗ್ಗೆ ಕೂಲಂಕಷವಾಗಿ ವಿಚಾರಣೆ ನಡೆಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗವು ಠೇವಣಿ ಅವಧಿ ಮುಗಿದರೂ ದೂರುದಾರರ ಹಣ ಹಿಂದಿರುಗಿಸದೇ ಇರುವುದು ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಅಭಿಪ್ರಾಯಪಟ್ಟು ದೂರುದಾರರಿಗೆ ಅವರ ಠೇವಣಿ ಹಣ ರೂ. 10,50,756 ಮತ್ತು ಉಳಿತಾಯ ಖಾತೆಯಲ್ಲಿರುವ ರೂ.1,35,320 ಹಣವನ್ನು ನೀಡುವಂತೆ ಹುಬ್ಬಳ್ಳಿಯ ಸರಸ್ವತಿ ಕೋ ಆಪ್​​ ಸೊಸೈಟಿಗೆ ಆದೇಶ ನೀಡಿದೆ.

ಹುಬ್ಬಳ್ಳಿ: ಡೆಪಾಸಿಟ್​ ಹಿಂದಿರುಗಿಸದ ಸರಸ್ವತಿ ಕೋ ಆಪ್​​ ಸೊಸೈಟಿಗೆ 11 ಲಕ್ಷ ರೂ ದಂಡ ವಿಧಿಸಿದ ಕೋರ್ಟ್​​
ವಿಮೆ ತಿರಸ್ಕರಿಸಿದ ಅಂಚೆ ಇಲಾಖೆಗೆ 3.03 ಲಕ್ಷ ದಂಡ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: ಸಾಧು ಶ್ರೀನಾಥ್​|

Updated on:Sep 02, 2023 | 7:36 PM

Share

ಹುಬ್ಬಳ್ಳಿಯ ವಿಕಾಸ ನಗರದ ನಿವಾಸಿಗಳಾದ ಸುಲೋಚನಾ ಪೈ ಮತ್ತು ಶಾರದಾ ಪೈ ಅನ್ನುವವರು ಹುಬ್ಬಳ್ಳಿಯ ಕ್ವಾಯಿನ್ ರಸ್ತೆಯಲ್ಲಿರುವ ಸರಸ್ವತಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಸದಸ್ಯರಾಗಿ ಖಾಯಂ ಠೇವಣಿ (Deposit) ಇಟ್ಟು ಉಳಿತಾಯ ಖಾತೆ ಹೊಂದಿದ್ದರು. ಅವರಿಬ್ಬರೂ ಈ ಸೊಸೈಟಿಯಲ್ಲಿ ಒಟ್ಟು ರೂ.10,50,756 ಮೊತ್ತದ ವಿವಿಧ ಠೇವಣಿಯನ್ನು ಒಂದು ವರ್ಷದ ಅವಧಿಗೆ ಇಟ್ಟಿದ್ದರು. ಜೊತೆಗೆ ಅವರ ಉಳಿತಾಯ ಖಾತೆಯಲ್ಲಿ ರೂ. 1,35,320/- ಹಣ ಇತ್ತು.

ಅವಧಿ ಮುಗಿದಿದ್ದರಿಂದ ಠೇವಣಿ ಹಣ ಮತ್ತು ತಮ್ಮ ಉಳಿತಾಯ ಖಾತೆಯಲ್ಲಿರುವ ಹಣ ಕೊಡುವಂತೆ ದೂರುದಾರರು ಹಲವು ಬಾರಿ ವಿನಂತಿಸಿದರೂ ಸೊಸೈಟಿಯವರು ಅವರ ಡೆಪಾಸಿಟ್​ ಹಣ ಮತ್ತು ಬಡ್ಡಿಯನ್ನು ಕೊಟ್ಟಿರಲಿಲ್ಲ. ಇದರಿಂದಾಗಿ ತಮಗೆ ಮೋಸವಾಗಿದೆ ಮತ್ತು ಸೊಸೈಟಿಯವರು ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ಹೇಳಿ, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ (District Consumer Disputes Redressal Commission -DCDRC) ದೂರು ಸಲ್ಲಿಸಿದ್ದರು.

ದೂರಿನ ಬಗ್ಗೆ ಕೂಲಂಕಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಹಾಗೂ ಸದಸ್ಯರಾದ ವಿಶಾಲಾಕ್ಷಿ ಬೋಳಶೆಟ್ಟಿ ಮತ್ತು ಪ್ರಭು ಹಿರೇಮಠ, ಠೇವಣಿ ಅವಧಿ ಮುಗಿದರೂ ದೂರುದಾರರ ಹಣ ಹಿಂದಿರುಗಿಸದೇ ಇರುವುದು ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಅಭಿಪ್ರಾಯಪಟ್ಟು ತೀರ್ಪು ನೀಡಿದ್ದಾರೆ.

ದೂರುದಾರರಿಗೆ ಅವರ ಠೇವಣಿ ಹಣ ರೂ. 10,50,756 ಮತ್ತು ಉಳಿತಾಯ ಖಾತೆಯಲ್ಲಿರುವ ರೂ.1,35,320 ಹಣವನ್ನು ಅದರ ಮೇಲೆ ಶೇ. 9 ರಂತೆ ಠೇವಣಿ ಇಟ್ಟ ದಿನಾಂಕದಿಂದ ಲೆಕ್ಕ ಹಾಕಿ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಹಿಂದಿರುಗಿಸುವಂತೆ ಆಯೋಗ ನಿರ್ದೇಶನ ನೀಡಿದೆ. ಜೊತೆಗೆ ದೂರುದಾರರು ಅನುಭವಿಸಿದ ಮಾನಸಿಕ ಹಿಂಸೆಗೆ 50 ಸಾವಿರ ರೂ ಪರಿಹಾರ ಮತ್ತು ಪ್ರಕರಣದ ಖರ್ಚುವೆಚ್ಚ ಅಂತಾ 10 ಸಾವಿರ ರೂ. ಈ ತೀರ್ಪು ನೀಡಿದ ಒಂದು ತಿಂಗಳೊಳಗಾಗಿ ನೀಡುವಂತೆ ಆಯೋಗ ಆದೇಶಿಸಿದೆ.

ಮತ್ತಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:34 pm, Sat, 2 September 23

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!