AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರದಿಂದ ಸಾಗಿದೆ ರೈಲ್ವೆ ಡಬ್ಲಿಂಗ್ ಕಾಮಗಾರಿ: ಈ ರೈಲುಗಳ ಮಾರ್ಗ ಬದಲಾವಣೆಯಾಗಿದೆ, ಗಮನಿಸಿ

ಹುಬ್ಬಳ್ಳಿ: ಸೊಲ್ಲಾಪುರ ವಿಭಾಗದ ದೌಂಡ್-ಮನ್ಮಾಡ್ ವಿಭಾಗದ ವಿಸಾಪುರ-ಬೆಳವಂಡಿ ನಿಲ್ದಾಣಗಳ ಡಬ್ಲಿಂಗ್‌ಗೆ ಸಂಬಂಧಿಸಿದಂತೆ ಇಂಟರ್‌ಲಾಕ್ ಮಾಡದ ಕಾರಣ (non-interlocking working) ರೈಲುಗಳ ಮಾರ್ಗವನ್ನು ಬದಲಾಯಿಸಲಾಗಿದೆ ಎಂದು ಮಧ್ಯ ರೈಲ್ವೆ ಸೂಚನೆ ನೀಡಿದೆ.

ಭರದಿಂದ ಸಾಗಿದೆ ರೈಲ್ವೆ ಡಬ್ಲಿಂಗ್ ಕಾಮಗಾರಿ: ಈ ರೈಲುಗಳ ಮಾರ್ಗ ಬದಲಾವಣೆಯಾಗಿದೆ, ಗಮನಿಸಿ
ರೈಲ್ವೆ ಡಬ್ಲಿಂಗ್ ಕಾಮಗಾರಿ: ಈ ರೈಲುಗಳ ಮಾರ್ಗ ಬದಲಾವಣೆಯಾಗಿದೆ
TV9 Web
| Edited By: |

Updated on: Nov 09, 2023 | 12:10 PM

Share

ಹುಬ್ಬಳ್ಳಿ: ಸೊಲ್ಲಾಪುರ ವಿಭಾಗದ ದೌಂಡ್-ಮನ್ಮಾಡ್ ವಿಭಾಗದ ವಿಸಾಪುರ-ಬೆಳವಂಡಿ ನಿಲ್ದಾಣಗಳ ಡಬ್ಲಿಂಗ್‌ಗೆ ಸಂಬಂಧಿಸಿದಂತೆ ಇಂಟರ್‌ಲಾಕ್ ಮಾಡದ ಕಾರಣ (non-interlocking working) ರೈಲುಗಳ ಮಾರ್ಗವನ್ನು ಬದಲಾಯಿಸಲಾಗಿದೆ ಎಂದು ಮಧ್ಯ ರೈಲ್ವೆ ಸೂಚನೆ ನೀಡಿದೆ. ರೈಲು ಸಂಖ್ಯೆ 12780 – ಹಜರತ್ ನಿಜಾಮುದ್ದೀನ್-ವಾಸ್ಕೋ ಡ ಗಾಮಾ ಗೋವಾ ಡೈಲಿ ಎಕ್ಸ್‌ಪ್ರೆಸ್ ಹಜರತ್ ನಿಜಾಮುದ್ದೀನ್‌ನಿಂದ ಹೊರಡುವುದನ್ನು ಮನ್ಮಾಡ್, ಇಗತ್‌ಪುರಿ, ಕಲ್ಯಾಣ್, ಪನ್ವೇಲ್, ಕರ್ಜತ್ ಮತ್ತು ಲೋನಾವಾಲಾ ನಿಲ್ದಾಣಗಳ ಮೂಲಕ ಓಡಿಸಲು ಡೈವರ್ಟ್​​​ ಮಾಡಲಾಗುತ್ತಿದೆ.

ಯಶವಂತಪುರದಿಂದ ಹೊರಡುವ ಯಶವಂತಪುರ-ಚಂಡೀಗಢ ಬೈ-ವೀಕ್ಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಅನ್ನು ಪುಣೆ, ಲೋನಾವಾಲಾ, ಪನ್ವೇಲ್, ಕಲ್ಯಾಣ್, ಇಗತ್‌ಪುರಿ ಮತ್ತು ಮನ್ಮಾಡ್ ನಿಲ್ದಾಣಗಳ ಮೂಲಕ ಡೈವರ್ಟ್​​​ ಮಾಡಲಾಗುತ್ತದೆ. ದಕ್ಷಿಣ ಮಧ್ಯ ರೈಲ್ವೆಯು ವಿಜಯವಾಡ ಮತ್ತು ಗುಂಟೂರು ವಿಭಾಗಗಳಲ್ಲಿ ಸುರಕ್ಷತೆಗೆ ಸಂಬಂಧಿಸಿದ ನಿರ್ವಹಣಾ ಕಾರ್ಯಗಳ ಕಾರಣದಿಂದ ಈ ಕೆಳಗಿನ ರೈಲು ಸೇವೆಗಳ ರದ್ದತಿ ಮತ್ತು ತಿರುವುಗಳಿಗೆ ಸೂಚನೆ ನೀಡಿದೆ.

ರೈಲು ನಂ. 17329 ಎಸ್‌ಎಸ್‌ಎಸ್ ಹುಬ್ಬಳ್ಳಿ-ವಿಜಯವಾಡ ಡೈಲಿ ಎಕ್ಸ್‌ಪ್ರೆಸ್ ಪ್ರಯಾಣವನ್ನು ನವೆಂಬರ್ 13 ರಿಂದ 19 ರವರೆಗೆ ರದ್ದುಗೊಳಿಸಲಾಗುತ್ತದೆ. ರೈಲು ನಂ. 17330 ಎಸ್‌ಎಸ್‌ಎಸ್ ಹುಬ್ಬಳ್ಳಿ ಡೈಲಿ ಎಕ್ಸ್‌ಪ್ರೆಸ್ ವಿಜಯವಾಡ- ಪ್ರಯಾಣವನ್ನು ನವೆಂಬರ್ 14 ರಿಂದ 20 ರವರೆಗೆ ರದ್ದುಗೊಳಿಸಲಾಗುತ್ತದೆ.

ರೈಲು ನಂ. 12509 SMVT ಬೆಂಗಳೂರಿನಿಂದ ಹೊರಡುವ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ (Sir M Visvesvaraya Terminal Bengaluru-Guwahati ) ಬೆಂಗಳೂರು-ಗುವಾಹಟಿ ಟ್ರೈ-ವೀಕ್ಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಅನ್ನು ವಿಜಯವಾಡ, ಗುಡಿವಾಡ, ಭೀಮಾವರಂ ಟೌನ್ ಮತ್ತು ನಿಡದವೋಲು ನಿಲ್ದಾಣಗಳ ಮೂಲಕ ನವೆಂಬರ್ 15 ಮತ್ತು 17 ರಂದು ಡೈವರ್ಟ್​​ ಮಾಡಲಾಗುತ್ತದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ