AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನೇ ಅಡ್ಡಿ ಬಂದರೂ ಡಿಕೆ ಶಿವಕುಮಾರ್ ಸಿಎಂ ಆಗುವುದು ಖಚಿತ; ಭವಿಷ್ಯ ನುಡಿದ ವರೂರಿನ ಜೈನ ಮುನಿ

ಮಹಾಮಸ್ತಕಾಭಿಷೇಕ ಕಾರ್ಯಕ್ರಮದ ವೇದಿಕೆಯ ಮೇಲೆ ಮುಖ್ಯಮಂತ್ರಿ ಬದಲಾವಣೆ ಮಾತು ಕೇಳಿಬಂದಿದೆ. ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಬೇಕೆಂದು ಗುಣಧರನಂದಿ ಸ್ವಾಮೀಜಿ ಹೇಳಿದ್ದಾರೆ. ಜೈನರಿಗೆ ನಿಗಮ ಮಂಡಳಿ ಆಗಬೇಕು, ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕು. ಇದೇ ನನ್ನ ಕನಸು ಎಂದು ಜೈನ ಮುನಿ ಹೇಳಿದ್ದಾರೆ.

ಏನೇ ಅಡ್ಡಿ ಬಂದರೂ ಡಿಕೆ ಶಿವಕುಮಾರ್ ಸಿಎಂ ಆಗುವುದು ಖಚಿತ; ಭವಿಷ್ಯ ನುಡಿದ ವರೂರಿನ ಜೈನ ಮುನಿ
Dk Shivakumar
ಶಿವಕುಮಾರ್ ಪತ್ತಾರ್
| Updated By: ಸುಷ್ಮಾ ಚಕ್ರೆ|

Updated on:Jan 21, 2025 | 10:12 PM

Share

ಹುಬ್ಬಳ್ಳಿ: ಕರ್ನಾಟಕದ ಉಪಮುಖ್ಯಮಂತ್ರಿಯಾಗಿರುವ ಡಿ.ಕೆ. ಶಿವಕುಮಾರ್‌ ಸಿಎಂ ಆಗಬೇಕೆನ್ನುವುದು ನನ್ನ ಕನಸು ಎಂದು ಹುಬ್ಬಳ್ಳಿಯ ವರೂರಿನ ಗುಣಧರನಂದಿ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ವರೂರಿನ ನವಗ್ರಹ ತೀರ್ಥಂಕರ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಸಿಎಂ ಆಗುವುದು, ಜೈನ ನಿಗಮ ಸ್ಥಾಪನೆ ಇವರೆಡೂ ನನ್ನ ಕನಸು. ಎಷ್ಟೇ ಕಾಟ ಇರಲಿ, ಎಷ್ಟೇ ಸಂಕಟ ಇರಲಿ ಡಿಕೆಶಿ ಸಿಎಂ ಆಗುತ್ತಾರೆ. ಇದು ನಮ್ಮ ಭವಿಷ್ಯವಾಣಿ ಎಂದ ವರೂರಿನ ಗುಣಧರನಂದಿ ಸ್ವಾಮೀಜಿ ಹೇಳಿದ್ದಾರೆ.

ಮುಂದಿನ ಅವಧಿಗೆ ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಡಿ.ಕೆ. ಶಿವಕುಮಾರ್‌ ಕಾಂಗ್ರೆಸ್‌ ಪಕ್ಷಕ್ಕೆ ಕಷ್ಟಪಟ್ಟಷ್ಟು ಯಾರೂ ಪಟ್ಟಿಲ್ಲ. ಕಾಂಗ್ರೆಸ್‌ಗೆ ಮರುಜೀವ ಕೊಟ್ಟಿದ್ದಾರೆ, ಇದನ್ನು ಕರ್ನಾಟಕ ಜನರು ಮರೆತಿಲ್ಲ. ಡಿ.ಕೆ. ಶಿವಕುಮಾರ್‌ ಸಿಎಂ ಆಗುವುದು ನಮ್ಮ ಕನಸು ಎಂದು ಜೈನಮುನಿ ಗುಣಧರನಂದಿ ಸ್ವಾಮೀಜಿ ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ತವರು ವರುಣಾ ಕ್ಷೇತ್ರದ ಗ್ರಾಮಸ್ಥರಿಂದ ಕಾಂಗ್ರೆಸ್ ಮುಖಂಡರಿಗೆ ಬಹಿಷ್ಕಾರ

ಜೈನ ಸಮುದಾಯಕ್ಕೆ ಕೊಡುವುದು ಗೊತ್ತು, ಬೇಡುವುದು ಗೊತ್ತಿಲ್ಲ. ಆದರೆ, ಈಗ ನಿಗಮ ಮಂಡಳಿಗೆ ಬೇಡುತ್ತಿದ್ದೇವೆ, ಇದು ಸಮಾಜದ ಅಪೇಕ್ಷೆ ಎಂದು ಹುಬ್ಬಳ್ಳಿಯ ವರೂರಿನ ಗುಣಧರನಂದಿ ಸ್ವಾಮೀಜಿ ಹೇಳಿದ್ದಾರೆ. ಈ ವೇಳೆ ವೇದಿಕೆ ಮೇಲಿನ ಎಲ್ಲಾ ಆಚಾರ್ಯರು, ಜೈನಮುನಿಗಳು ಕೈ ಮೇಲೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಆಶೀರ್ವದಿಸಿದ್ದಾರೆ.

ಈ ವೇಳೆ ವರೂರಿನ ನವಗ್ರಹ ತೀರ್ಥಂಕರ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​, ನಾನು ಸಿಎಂ ಆಗಲೆಂದು ಗುಣಧರನಂದಿ ಶ್ರೀಗಳು ಆಶೀರ್ವದಿಸಿದ್ದಾರೆ. ನೀವು ಆಶೀರ್ವಾದಿಸಿದಾಗಲೆಲ್ಲಾ ನಮಗೆ ಏಟು ಕೊಡುತ್ತಿರುತ್ತಾರೆ. ವಿನಯ್ ಗುರೂಜಿ ಈ ಮಾತನ್ನು ಮೊದಲೇ ಹೇಳಿದ್ದರು ಎಂದು ಜೈನ ಮುನಿಗಳ ಆಶೀರ್ವಾದಕ್ಕೆ ಡಿಕೆಶಿ ಮಾರ್ಮಿಕ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಆರ್​ಎಸ್​ಎಸ್​ ಸಿದ್ಧಾಂತವನ್ನು ಬಿಜೆಪಿ ಭಾರತೀಯರ ಮೇಲೆ ಹೇರುತ್ತಿದೆ; ಸಿಎಂ ಸಿದ್ದರಾಮಯ್ಯ ಆರೋಪ

ಅಹಿಂಸೆ, ಸತ್ಯ, ತ್ಯಾಗಕ್ಕೆ ಮತ್ತೊಂದು ಹೆಸರು ಜೈನ ಧರ್ಮ. ಈ ಡಿಕೆಶಿ ನಿಮ್ಮ ಧರ್ಮದ ಜೊತೆ ಇರುತ್ತಾನೆ. ನನ್ನ ಮೇಲೆ ನಂಬಿಕೆ ಇಡಿ. ಜೈನ ಅಭಿವೃದ್ಧಿ ನಿಗಮ ಮಾಡಲು ಮನವಿ ಮಾಡಿದ್ದಾರೆ. ಈ ಬಗ್ಗೆ ಸಿಎಂ ಜೊತೆ ಮಾತನಾಡಿ, ಮುಂಬರುವ ಬಜೆಟ್​ನಲ್ಲಿಯೇ ರಚನೆ ಮಾಡಲು ಮನವಿ ಮಾಡ್ತೇನೆ. ಜೈನರಿಗೆ ಅಲ್ಪಸಂಖ್ಯಾತ ಸ್ಥಾನಮಾನ ಕೊಟ್ಟಿದ್ದು ನಮ್ಮ ಕಾಂಗ್ರೆಸ್. ಮನಮೋಹನ್ ಸಿಂಗ್ ಪ್ರಧಾನಿ ಇದ್ದಾಗ ಅಲ್ಪಸಂಖ್ಯಾತ ಸ್ಥಾನಮಾನ ಕೊಡಲಾಗಿದೆ. ನಮ್ಮ ಸರ್ಕಾರ, ನಮ್ಮ ಪಕ್ಷ ನಿಮ್ಮ ಜೊತೆಗೆ ಇರುತ್ತದೆ ಎಂದು ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:12 pm, Tue, 21 January 25

ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ