AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನೇ ಅಡ್ಡಿ ಬಂದರೂ ಡಿಕೆ ಶಿವಕುಮಾರ್ ಸಿಎಂ ಆಗುವುದು ಖಚಿತ; ಭವಿಷ್ಯ ನುಡಿದ ವರೂರಿನ ಜೈನ ಮುನಿ

ಮಹಾಮಸ್ತಕಾಭಿಷೇಕ ಕಾರ್ಯಕ್ರಮದ ವೇದಿಕೆಯ ಮೇಲೆ ಮುಖ್ಯಮಂತ್ರಿ ಬದಲಾವಣೆ ಮಾತು ಕೇಳಿಬಂದಿದೆ. ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಬೇಕೆಂದು ಗುಣಧರನಂದಿ ಸ್ವಾಮೀಜಿ ಹೇಳಿದ್ದಾರೆ. ಜೈನರಿಗೆ ನಿಗಮ ಮಂಡಳಿ ಆಗಬೇಕು, ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕು. ಇದೇ ನನ್ನ ಕನಸು ಎಂದು ಜೈನ ಮುನಿ ಹೇಳಿದ್ದಾರೆ.

ಏನೇ ಅಡ್ಡಿ ಬಂದರೂ ಡಿಕೆ ಶಿವಕುಮಾರ್ ಸಿಎಂ ಆಗುವುದು ಖಚಿತ; ಭವಿಷ್ಯ ನುಡಿದ ವರೂರಿನ ಜೈನ ಮುನಿ
Dk Shivakumar
ಶಿವಕುಮಾರ್ ಪತ್ತಾರ್
| Edited By: |

Updated on:Jan 21, 2025 | 10:12 PM

Share

ಹುಬ್ಬಳ್ಳಿ: ಕರ್ನಾಟಕದ ಉಪಮುಖ್ಯಮಂತ್ರಿಯಾಗಿರುವ ಡಿ.ಕೆ. ಶಿವಕುಮಾರ್‌ ಸಿಎಂ ಆಗಬೇಕೆನ್ನುವುದು ನನ್ನ ಕನಸು ಎಂದು ಹುಬ್ಬಳ್ಳಿಯ ವರೂರಿನ ಗುಣಧರನಂದಿ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ವರೂರಿನ ನವಗ್ರಹ ತೀರ್ಥಂಕರ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಸಿಎಂ ಆಗುವುದು, ಜೈನ ನಿಗಮ ಸ್ಥಾಪನೆ ಇವರೆಡೂ ನನ್ನ ಕನಸು. ಎಷ್ಟೇ ಕಾಟ ಇರಲಿ, ಎಷ್ಟೇ ಸಂಕಟ ಇರಲಿ ಡಿಕೆಶಿ ಸಿಎಂ ಆಗುತ್ತಾರೆ. ಇದು ನಮ್ಮ ಭವಿಷ್ಯವಾಣಿ ಎಂದ ವರೂರಿನ ಗುಣಧರನಂದಿ ಸ್ವಾಮೀಜಿ ಹೇಳಿದ್ದಾರೆ.

ಮುಂದಿನ ಅವಧಿಗೆ ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಡಿ.ಕೆ. ಶಿವಕುಮಾರ್‌ ಕಾಂಗ್ರೆಸ್‌ ಪಕ್ಷಕ್ಕೆ ಕಷ್ಟಪಟ್ಟಷ್ಟು ಯಾರೂ ಪಟ್ಟಿಲ್ಲ. ಕಾಂಗ್ರೆಸ್‌ಗೆ ಮರುಜೀವ ಕೊಟ್ಟಿದ್ದಾರೆ, ಇದನ್ನು ಕರ್ನಾಟಕ ಜನರು ಮರೆತಿಲ್ಲ. ಡಿ.ಕೆ. ಶಿವಕುಮಾರ್‌ ಸಿಎಂ ಆಗುವುದು ನಮ್ಮ ಕನಸು ಎಂದು ಜೈನಮುನಿ ಗುಣಧರನಂದಿ ಸ್ವಾಮೀಜಿ ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ತವರು ವರುಣಾ ಕ್ಷೇತ್ರದ ಗ್ರಾಮಸ್ಥರಿಂದ ಕಾಂಗ್ರೆಸ್ ಮುಖಂಡರಿಗೆ ಬಹಿಷ್ಕಾರ

ಜೈನ ಸಮುದಾಯಕ್ಕೆ ಕೊಡುವುದು ಗೊತ್ತು, ಬೇಡುವುದು ಗೊತ್ತಿಲ್ಲ. ಆದರೆ, ಈಗ ನಿಗಮ ಮಂಡಳಿಗೆ ಬೇಡುತ್ತಿದ್ದೇವೆ, ಇದು ಸಮಾಜದ ಅಪೇಕ್ಷೆ ಎಂದು ಹುಬ್ಬಳ್ಳಿಯ ವರೂರಿನ ಗುಣಧರನಂದಿ ಸ್ವಾಮೀಜಿ ಹೇಳಿದ್ದಾರೆ. ಈ ವೇಳೆ ವೇದಿಕೆ ಮೇಲಿನ ಎಲ್ಲಾ ಆಚಾರ್ಯರು, ಜೈನಮುನಿಗಳು ಕೈ ಮೇಲೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಆಶೀರ್ವದಿಸಿದ್ದಾರೆ.

ಈ ವೇಳೆ ವರೂರಿನ ನವಗ್ರಹ ತೀರ್ಥಂಕರ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​, ನಾನು ಸಿಎಂ ಆಗಲೆಂದು ಗುಣಧರನಂದಿ ಶ್ರೀಗಳು ಆಶೀರ್ವದಿಸಿದ್ದಾರೆ. ನೀವು ಆಶೀರ್ವಾದಿಸಿದಾಗಲೆಲ್ಲಾ ನಮಗೆ ಏಟು ಕೊಡುತ್ತಿರುತ್ತಾರೆ. ವಿನಯ್ ಗುರೂಜಿ ಈ ಮಾತನ್ನು ಮೊದಲೇ ಹೇಳಿದ್ದರು ಎಂದು ಜೈನ ಮುನಿಗಳ ಆಶೀರ್ವಾದಕ್ಕೆ ಡಿಕೆಶಿ ಮಾರ್ಮಿಕ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಆರ್​ಎಸ್​ಎಸ್​ ಸಿದ್ಧಾಂತವನ್ನು ಬಿಜೆಪಿ ಭಾರತೀಯರ ಮೇಲೆ ಹೇರುತ್ತಿದೆ; ಸಿಎಂ ಸಿದ್ದರಾಮಯ್ಯ ಆರೋಪ

ಅಹಿಂಸೆ, ಸತ್ಯ, ತ್ಯಾಗಕ್ಕೆ ಮತ್ತೊಂದು ಹೆಸರು ಜೈನ ಧರ್ಮ. ಈ ಡಿಕೆಶಿ ನಿಮ್ಮ ಧರ್ಮದ ಜೊತೆ ಇರುತ್ತಾನೆ. ನನ್ನ ಮೇಲೆ ನಂಬಿಕೆ ಇಡಿ. ಜೈನ ಅಭಿವೃದ್ಧಿ ನಿಗಮ ಮಾಡಲು ಮನವಿ ಮಾಡಿದ್ದಾರೆ. ಈ ಬಗ್ಗೆ ಸಿಎಂ ಜೊತೆ ಮಾತನಾಡಿ, ಮುಂಬರುವ ಬಜೆಟ್​ನಲ್ಲಿಯೇ ರಚನೆ ಮಾಡಲು ಮನವಿ ಮಾಡ್ತೇನೆ. ಜೈನರಿಗೆ ಅಲ್ಪಸಂಖ್ಯಾತ ಸ್ಥಾನಮಾನ ಕೊಟ್ಟಿದ್ದು ನಮ್ಮ ಕಾಂಗ್ರೆಸ್. ಮನಮೋಹನ್ ಸಿಂಗ್ ಪ್ರಧಾನಿ ಇದ್ದಾಗ ಅಲ್ಪಸಂಖ್ಯಾತ ಸ್ಥಾನಮಾನ ಕೊಡಲಾಗಿದೆ. ನಮ್ಮ ಸರ್ಕಾರ, ನಮ್ಮ ಪಕ್ಷ ನಿಮ್ಮ ಜೊತೆಗೆ ಇರುತ್ತದೆ ಎಂದು ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:12 pm, Tue, 21 January 25

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು