AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಬಲ್ ಪೇಮೆಂಟ್ ಹಗರಣ; ಧಾರವಾಡ ಕೆಐಎಡಿಬಿ ನಿವೃತ್ತ ಭೂಸ್ವಾಧೀನಾಧಿಕಾರಿ ಸೇರಿ ಇಬ್ಬರು ಇಡಿ ವಶಕ್ಕೆ

ಕೆಐಎಡಿಬಿ(KIADB)ಯಲ್ಲಿ ನಕಲಿ ರೈತರ ಖಾತೆಗಳನ್ನು ಸೃಷ್ಟಿಸಿ, ಇಲಾಖೆಯ ವಿಶೇಷ ಭೂ ಸ್ವಾಧೀನ ಅಧಿಕಾರಿಯಾಗಿದ್ದ ವ್ಹಿ. ಡಿ. ಸಜ್ಜನ್ ಸೇರಿ ಹಲವರು ಜೈಲು ಸೇರಿದ್ದರು. ಇದೀಗ ಈ ಇಬ್ಬರನ್ನು ಇಡಿ(ED) ವಶಕ್ಕೆ ಪಡೆದಿದ್ದು, ಇಬ್ಬರನ್ನು ವಾಹನದಲ್ಲಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ಡಬಲ್ ಪೇಮೆಂಟ್ ಹಗರಣ; ಧಾರವಾಡ ಕೆಐಎಡಿಬಿ ನಿವೃತ್ತ ಭೂಸ್ವಾಧೀನಾಧಿಕಾರಿ ಸೇರಿ ಇಬ್ಬರು ಇಡಿ ವಶಕ್ಕೆ
ಧಾರವಾಡ ಕೆಐಎಡಿಬಿ ನಿವೃತ್ತ ಭೂಸ್ವಾಧೀನಾಧಿಕಾರಿ ಸೇರಿ ಇಬ್ಬರು ಇಡಿ ವಶಕ್ಕೆ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Sep 05, 2024 | 9:29 PM

Share

ಧಾರವಾಡ, ಸೆ.05: ಕೆಐಎಡಿಬಿ(KIADB) ಡಬಲ್ ಪೇಮೆಂಟ್ ಹಗರಣಕ್ಕೆ ಸಂಬಂಧಿಸಿದಂತೆ ನಿವೃತ್ತ ವಿಶೇಷ ಭೂಸ್ವಾಧೀನಾಧಿಕಾರಿ ವಿ.ಡಿ. ಸಜ್ಜನ್ ಹಾಗೂ ಕೆಐಎಡಿಬಿಯಲ್ಲಿ ಏಜೆಂಟ್​ ಆಗಿ ಕೆಲಸ ಮಾಡ್ತಿದ್ದ ಅಶ್ಫಾಕ್​ ​ದುಂಡಸಿ ಇಬ್ಬರನ್ನು ಇಡಿ(ED) ವಶಕ್ಕೆ ಪಡೆದಿದ್ದು, ಇಬ್ಬರನ್ನು ವಾಹನದಲ್ಲಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಜಾಮೀನು ಸಿಗದ ಹಿನ್ನೆಲೆ ಈ ಇಬ್ಬರು ಧಾರವಾಡ ಜಿಲ್ಲಾ ಕಾರಾಗೃಹದಲ್ಲಿದ್ದರು. ಇತ್ತೀಚೆಗೆ ಕೆಐಎಡಿಬಿ ಕಚೇರಿ ಮೇಲೆ ದಾಳಿ ಮಾಡಿದ್ದ ಇಡಿ ತಂಡ, ಅನೇಕ ದಾಖಲೆ ಪತ್ರ ವಶಕ್ಕೆ ಪಡೆದು ಪರಿಶೀಲನೆ ನಡೆಸಿತ್ತು. ಅದರಂತೆ ಪ್ರಕರಣದ ಹೆಚ್ಚಿನ ವಿಚಾರಣೆಗಾಗಿ ಇಬ್ಬರನ್ನೂ ಕರೆದೊಯ್ಯಲಾಗಿದೆ.

ಏನಿದು ಘಟನೆ?

ಕೆಐಎಡಿಬಿ(KIADB)ಯಲ್ಲಿ ನಕಲಿ ರೈತರ ಖಾತೆಗಳನ್ನು ಸೃಷ್ಟಿಸಿ, ಇಲಾಖೆಯ ವಿಶೇಷ ಭೂ ಸ್ವಾಧೀನ ಅಧಿಕಾರಿಯಾಗಿದ್ದ ವ್ಹಿ. ಡಿ. ಸಜ್ಜನ್ ತಮ್ಮ ನಿವೃತ್ತಿಯ ಕೊನೆಯ ದಿನವೇ 30 ಕೋಟಿ ರೂಪಾಯಿ ಹಣವನ್ನು ವರ್ಗಾವಣೆ ಮಾಡಿರುವುದು ಬೆಳಕಿಗೆ ‌ಬಂದಿತ್ತು. ಅದರಲ್ಲಿ ಸಜ್ಜನ್ ಮೊದಲನೇ ಆರೋಪಿ ಆಗಿ, ಜೈಲು ಸೇರಿದ್ದರು. ಡಬಲ್ ಪೇಮೆಂಟ್ ಕುರಿತು ಸಿಐಡಿ ತನಿಖೆಯ ಚಾರ್ಜ್ ಶೀಟ್​ನಲ್ಲಿ ಒಂದೇ ದಿನದಲ್ಲಿ 30 ಕೋಟಿ ರೂಪಾಯಿ ಹಣ ವರ್ಗಾವಣೆ ಬಗ್ಗೆ ಆರೋಪಿಸಲಾಗಿತ್ತು. ಇದೇ ವೇಳೆ ಸಿಐಡಿ ತನಿಖೆಯಲ್ಲಿ ಸಾಕಷ್ಟು ಲೋಪಗಳಾಗಿವೆ ಎನ್ನುವ ಆರೋಪವೂ ಕೇಳಿ ಬಂದಿತ್ತು. ಈ ಹಿನ್ನಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಎಂಟ್ರಿ ಕೊಟ್ಟು ಕೆಐಎಡಿಬಿ ಕಚೇರಿಗೆ ದಾಳಿ ಮಾಡಿತ್ತು.

ಇದನ್ನೂ ಓದಿ:ಧಾರವಾಡ ಕೆಐಎಡಿಬಿ ಅಕ್ರಮ ಪ್ರಕರಣ; ಸಿಐಡಿ ತನಿಖೆ ಬೆನ್ನಲ್ಲೇ ಎಂಟ್ರಿ ಕೊಟ್ಟ ಇಡಿ

ಸರ್ಕಾರ ಹಾಗೂ ರೈತರ ನಡುವೆ ಕೆಲಸ ಮಾಡುವ ಇಲಾಖೆ ಇದಾಗಿದ್ದು, ರೈತರಿಂದ ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಕೈಗಾರಿಕೆಗಳಿಗೆ ನೀಡಲಾಗುತ್ತದೆ. ಆದರೆ, ಇದನ್ನೇ ದಂಧೆ ಮಾಡಿಕೊಂಡ ಅಧಿಕಾರಿಗಳು ಹಾಗೂ ಏಜೆಂಟರು ನಿರಂತರವಾಗಿ ಹಣವನ್ನು ಲೂಟಿ ಮಾಡುತ್ತಲೇ ಬಂದಿದ್ದಾರೆ. ಇದೀಗ ಜಾರಿ ನಿರ್ದೇಶನಾಲಯ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ಶುರು ಮಾಡಿದೆ. ಈ ತನಿಖೆಯಲ್ಲಿ ಮತ್ತೆ ಯಾವೆಲ್ಲ ಹೊಸ ಅಕ್ರಮಗಳು ಹೊರಗೆ ಬರುತ್ತವೆಯೋ ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ