Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಲ ಮಂಡಳಿಯ ಅಸಹಕಾರ ನೀತಿ! ಹುಬ್ಬಳ್ಳಿ ಧಾರವಾಡದ ಭಾಗದಗಳಲ್ಲಿ 15 ದಿನ ಕಳೆದರೂ ಕುಡಿಯಲು ನೀರು ಬರುತ್ತಿಲ್ಲ

ಈಗಾಗಲೇ ಮಹಾನಗರ ಪಾಲಿಕೆ ಅಸಮಾಧಾನ ನಿವಾರಣೆ ಮಾಡುವ ನಿಟ್ಟಿನಲ್ಲಿ ಸಾಕಷ್ಟು ಸಭೆ ಮಾಡಿದೆ. ಜೊತೆಗೆ ಎಲ್ ಆ್ಯಂಡ್ ಟಿ ಕಂಪನಿಗೆ ನೀರಿನ ಸರಬರಾಜು ಹಸ್ತಾಂತರ ಕಾರ್ಯ ಕೂಡ ಮಾಡಲಾಗಿದೆ. ಹೀಗಿದ್ದರೂ ಜನರ ನೀರಿನ ಬವಣೆ ಮಾತ್ರ ಬಗೆಹರಿಯುತ್ತಿಲ್ಲ.

ಜಲ ಮಂಡಳಿಯ ಅಸಹಕಾರ ನೀತಿ! ಹುಬ್ಬಳ್ಳಿ ಧಾರವಾಡದ ಭಾಗದಗಳಲ್ಲಿ 15 ದಿನ ಕಳೆದರೂ ಕುಡಿಯಲು ನೀರು ಬರುತ್ತಿಲ್ಲ
ಹುಬ್ಬಳ್ಳಿ ಧಾರವಾಡದ ಭಾಗದಲ್ಲಿ 15 ದಿನ ಕಳೆದರೂ ಕುಡಿಯಲು ನೀರು ಬರುತ್ತಿಲ್ಲ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Dec 13, 2022 | 6:19 PM

ವಿಶ್ವದರ್ಜೆಯ ನಗರವನ್ನಾಗಿಸುವ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ನಗರಳಿಗೆ ಕೋಟಿ ಕೋಟಿ ರೂಪಾಯಿ ಅನುದಾನ ನೀಡಲಾಗುತ್ತಿದೆ. ಜನರ ಜೀವನಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ವಿದೇಶಿ ಕಂಪನಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಟೆಂಡರ್ ನೀಡಲಾಗಿದೆ. ಹೀಗಿದ್ದರೂ ಹುಬ್ಬಳ್ಳಿ ಮಂದಿಗೆ ನೆಮ್ಮದಿ ಮಾತ್ರ ಸಿಗುತ್ತಿಲ್ಲ.‌ ದುಡ್ಡು ಕೊಡತ್ವಿ ಅಂದ್ರೂ ಹನಿ ನೀರು ಬೇಕು (drinking water problem) ಅಂದರೆ 15 ರಿಂದ 20 ದಿನ ಕಾಯಕಬೇಕು.. ಈಗ ಅದು ಸಹ ಸಿಗುತ್ತಿಲ್ಲ… ಅಂತಾರೆ ಇಲ್ಲಿನ ಮಂದಿ.

ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ (hubballi, dharwad) ಜನರು ಕುಡಿಯುವ ನೀರಿಗಾಗಿ ದಿನವೂ ಹೋರಾಟ ನಡೆಸುವಂತಾಗಿದೆ. ಜಲಮಂಡಳಿಯಿಂದ ನೀರು ಸರಬರಾಜು ಜವಾಬ್ದಾರಿಯನ್ನು ಖಾಸಗೀಕರಣದ ಮೂಲಕ ಎಲ್ ಆ್ಯಂಡ್ ಟಿ ಕಂಪನಿಗೆ ನೀಡಿದೆ. ಈಗ ಇದೇ ಜನರಿಗೆ ಮುಳುವಾಗಿದೆ. ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬುವಂತೇ ಜಲಮಂಡಳಿ ಸಿಬ್ಬಂದಿ ಮತ್ತು ಎಲ್ ಆ್ಯಂಡ್ ಟಿ ತಿಕ್ಕಾಟದಲ್ಲಿ ಹುಬ್ಬಳ್ಳಿ ಮಂದಿ ಹೈರಾಣಾಗಿದ್ದು,15 ದಿನಗಳಿಂದ ಕುಡಿಯುವ ನೀರಿಗಾಗಿ (water problem) ಪರದಾಡುವಂತಾಗಿದೆ.

Also Read: ಚಿತ್ರದುರ್ಗ ಮುರುಘಾಮಠಕ್ಕೆ ಆಡಳಿತಾಧಿಕಾರಿಯಾಗಿ ನಿವೃತ್ತ IAS ಅಧಿಕಾರಿ ವಸ್ತ್ರದ್ ನೇಮಕ

ಬಿಸಿಲುನಾಡಿನ ಜನ ಅನುಭವಿಸಿದ ಯಾತನೆಯನ್ನು ಸ್ಮಾರ್ಟ್ ಸಿಟಿ ಮಂದಿ ಅನುಭವಿಸುತ್ತಿದ್ದಾರೆ. ಕುಡಿಯುವ ನೀರಿನ ಸರಬರಾಜು ಜವಾಬ್ದಾರಿಯನ್ನು ಎಲ್ ಆ್ಯಂಡ್ ಟಿ ಕಂಪನಿಗೆ ಕೊಟ್ಟಿರುವುದನ್ನು ಮೊದಲಿಂದಲೂ ವಿರೋಧಿಸುತ್ತಿರುವ ಜಲ ಮಂಡಳಿ ಸಿಬ್ಬಂದಿ, ಈಗ ಕಂಪನಿಗೆ ಅಸಹಕಾರ ನೀಡುತ್ತಿದ್ದಾರೆ. ಈ ಪರಿಣಾಮ ಈ ಪರಿಸ್ಥಿತಿ ನಿರ್ಮಾಣವಾಗಿದೆ. ನೀರು ಕೊಡದೆ ಹೋದ್ರೆ ನಾವು ಹೋರಾಟ ಮಾಡ್ತೀವಿ ಅಂತೀದಾರೆ ಸ್ಥಳೀಯರು.

ಈಗಾಗಲೇ ಮಹಾನಗರ ಪಾಲಿಕೆ ಅಸಮಾಧಾನ ನಿವಾರಣೆ ಮಾಡುವ ನಿಟ್ಟಿನಲ್ಲಿ ಸಾಕಷ್ಟು ಸಭೆ ಮಾಡಿದೆ. ಜೊತೆಗೆ ಎಲ್ ಆ್ಯಂಡ್ ಟಿ ಕಂಪನಿಗೆ ನೀರಿನ ಸರಬರಾಜು ಹಸ್ತಾಂತರ ಕಾರ್ಯ ಕೂಡ ಮಾಡಲಾಗಿದೆ. ಹೀಗಿದ್ದರೂ ಜನರ ನೀರಿನ ಬವಣೆ ಮಾತ್ರ ಬಗೆಹರಿಯುತ್ತಿಲ್ಲ. drinking water problem intensifies in hubballi and dharwad twin cities ಹಳೇ ಹುಬ್ಬಳ್ಳಿ, ಬೀಡಿ ಕಾರ್ಮಿಕರ ನಗರ, ಸ್ವರಾಜನಗರ, ಪಂಪನಗರ, ಬಂಜಾರ ಕಾಲೊನಿ, ಜಗದೀಶ ನಗರ, ಹುಬ್ಬಳ್ಳಿ, ಅಯೋಧ್ಯಾನಗರ, ಎಸ್‌.ಎಂ. ಕೃಷ್ಣ ನಗರ, ವೀರಾಪುರ ಓಣಿ, ಬಿಡನಾಳ, ಕರ್ಕಿ ಬಸವೇಶ್ವರನಗರ, ಗೋಕುಲ ರಸ್ತೆ, ಹೊಸುರು, ವಿದ್ಯಾನಗರ ಸೇರಿದಂತೆ ಹುಬ್ಬಳ್ಳಿ ಧಾರವಾಡ ಅವಳಿನಗರದ ಬಹುತೇಕ ಕಡೆಯಲ್ಲಿ ಸುಮಾರು 15 ದಿನ ಕಳೆದರೂ ಕುಡಿಯುವ ನೀರು ಬರುತ್ತಿಲ್ಲ. ಅಲ್ಲದೇ ಉಣಕಲ್ ಗ್ರಾಮದ ವೀರಭದ್ರೇಶ್ವರ ಕಾಲೋನಿಯಲ್ಲಿ ವಾಟರ್ ಟ್ಯಾಂಕ್ ಬರದೇ ಇದ್ದರೆ ಜನರು ಕುಡಿಯಲು ನೀರು ಕಾಣುವುದೇ ದೊಡ್ಡ ಸವಾಲಾಗಿದೆ. ಇನ್ನು ದುಡ್ಡು ಕೊಟ್ಟು ನೀರು ಕುಡಿಯೋ ಪರಿಸ್ಥಿತಿ ನಿರ್ಮಾಣವಾಗಿದೆ.

ಒಟ್ಟಿನಲ್ಲಿ ಜನರ ಜ್ವಲಂತ ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳು ಹಾಗೂ ಸ್ಥಳೀಯ ಆಡಳಿತ ಮಂಡಳಿ ಧ್ವನಿ ಎತ್ತಬೇಕಿದೆ‌. ಕೂಡಲೇ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಕಾರ್ಯಕ್ಕೆ ಮುಂದಾಗಬೇಕಿದೆ. ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ನಗರದಲ್ಲಿ ಕುಡಿಯುವ ನೀರಿಗಾಗಿ ಜನ ಪರದಾಡುತ್ತಿರುವುದು ಶೋಭೆ ತರುವ ಸಂಗತಿಯಲ್ಲ.

ವರದಿ: ಶಿವಕುಮಾರ್ ಪತ್ತಾರ್, ಟಿವಿ 9, ಹುಬ್ಬಳ್ಳಿ

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ