Sign In

By signing in or creating an account, you agree with Associated Broadcasting Company's Terms & Conditions and Privacy Policy.

2023ಕ್ಕೆ ಸಂಪೂರ್ಣ ವಿದ್ಯುತ್ ಚಾಲಿತ ರೈಲು ಸಂಚಾರ; ನೈಋತ್ಯ ರೈಲ್ವೆಯಿಂದ ಆಧುನೀಕರಣದತ್ತ ಚಿಂತನೆ

ಈಗಾಗಲೇ ಎಲೆಕ್ಟ್ರಿಕ್ ಕಾಮಗಾರಿ ಚುರುಕುಗೊಂಡಿದ್ದು, 2023 ಮಾರ್ಚ್ ಅಂತ್ಯದೊಳಗೆ ನೈಋತ್ಯ ರೈಲ್ವೆ ಸಂಪೂರ್ಣ ವಿದ್ಯುತ್ ಚಾಲಿತ ರೈಲುಗಳಾಗಿ ಪರಿವರ್ತನೆಗೊಳ್ಳಲಿದೆ. ಇದರಿಂದ ಇಂಧನದ ಬಹುದೊಡ್ಡ ಆರ್ಥಿಕ ಹೊರೆ ನೈಋತ್ಯ ರೈಲ್ವೆಗೆ ತಪ್ಪಲಿದೆ.

2023ಕ್ಕೆ ಸಂಪೂರ್ಣ ವಿದ್ಯುತ್ ಚಾಲಿತ ರೈಲು ಸಂಚಾರ; ನೈಋತ್ಯ ರೈಲ್ವೆಯಿಂದ ಆಧುನೀಕರಣದತ್ತ ಚಿಂತನೆ
ನೈಋತ್ಯ ರೈಲ್ವೆ
Follow us
TV9 Web
| Updated By: preethi shettigar

Updated on:Oct 13, 2021 | 10:14 AM

ಹುಬ್ಬಳ್ಳಿ: ಪ್ರಯಾಣಿಕರಿಗೆ ಹಾಗೂ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುವ ಮೂಲಕ ಹೆಸರುವಾಸಿಯಾಗಿರುವ ನೈಋತ್ಯ ರೈಲ್ವೆ ಈಗ ಮತ್ತಷ್ಟು ಆಧುನೀಕರಣದತ್ತ ಚಿಂತನೆ ನಡೆಸಿದ್ದು, ಈ ಚಿಂತನೆ ಪ್ರಯಾಣಿಕರ ಚಿಂತೆಯನ್ನು ದೂರ ಮಾಡಲಿದೆ. ಅಲ್ಲದೇ ಸಾಕಷ್ಟು ಪ್ರಮಾಣದಲ್ಲಿ ನೈಋತ್ಯ ರೈಲ್ವೆಗೆ ಆರ್ಥಿಕ ಹೊರೆ ತಗ್ಗಲಿದೆ. ಇಷ್ಟು ದಿನ ಡಿಸೇಲ್ ಮೂಲಕ ಚಲಿಸುತ್ತಿದ್ದ ರೈಲು ಇನ್ನು ಮುಂದೆ ಸಂಪೂರ್ಣ ವಿದ್ಯುತ್ ಚಾಲಿತ ರೈಲುಗಳಾಗಿ ಪರಿವರ್ತನೆ ಆಗುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರವಹಿಸಲಿವೆ.

ಈಗಾಗಲೇ ಎಲೆಕ್ಟ್ರಿಕ್ ಕಾಮಗಾರಿ ಚುರುಕುಗೊಂಡಿದ್ದು, 2023 ಮಾರ್ಚ್ ಅಂತ್ಯದೊಳಗೆ ನೈಋತ್ಯ ರೈಲ್ವೆ ಸಂಪೂರ್ಣ ವಿದ್ಯುತ್ ಚಾಲಿತ ರೈಲುಗಳಾಗಿ ಪರಿವರ್ತನೆಗೊಳ್ಳಲಿದೆ. ಇದರಿಂದ ಇಂಧನದ ಬಹುದೊಡ್ಡ ಆರ್ಥಿಕ ಹೊರೆ ನೈಋತ್ಯ ರೈಲ್ವೆಗೆ ತಪ್ಪಲಿದೆ.

ಈಗಾಗಲೇ ಕೊವಿಡ್ ಸಂದರ್ಭದಲ್ಲಿ ಕೊವಿಡ್ ಎಕ್ಸ್‌ಪ್ರೆಸ್‌, ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಹಾಗೂ ಹಲವಾರು ಯೋಜನೆ ಮತ್ತು ಜನಪರ ಕಾರ್ಯದ ಮೂಲಕ ಜನರಿಗೆ ಉತ್ಕೃಷ್ಟ ಮಟ್ಟದ ಸಾರಿಗೆ ಸೇವೆಯನ್ನು ನೀಡುತ್ತ ಬಂದಿರುವ ರೈಲ್ವೆ 2023ರ ಹೊತ್ತಿಗೆ ಜೀರೋ ಕಾರ್ಬನ್ ಎಮಿಟರ್ ಚಿಂತನೆಯನ್ನು ನಡೆಸಿದ್ದು, ಪರಿಸರ ಸಂರಕ್ಷಣೆ ಬಹುದೊಡ್ಡ ಹೊಣೆಯನ್ನು ನೈಋತ್ಯ ರೈಲ್ವೆ ಹೊಂದಿದೆ. ಅದಕ್ಕೆ ತಕ್ಕನಾಗಿ ಕಾರ್ಯವೈಖರಿಯನ್ನು ಮೈಗೂಡಿಸಿಕೊಂಡಿದೆ.

2030ರ ಹೊತ್ತಿಗೆ ಭಾರತೀಯ ರೈಲ್ವೆ ಸಂಪೂರ್ಣವಾಗಿ ವಿದ್ಯುತ್ತೀಕರಣಗೊಳ್ಳಲಿದೆ. ಈ ನಿಟ್ಟಿನಲ್ಲಿ ನೈಋತ್ಯ ರೈಲ್ವೆ ಈಗಾಗಲೇ ಕಾರ್ಯ ಪ್ರವೃತ್ತವಾಗಿದ್ದು, 2023ರ ಹೊತ್ತಿಗೆ ನಮ್ಮ ವಿಭಾಗ ಸಂಪೂರ್ಣವಾಗಿ ವಿದ್ಯುತ್ತೀಕರಣಗೊಳ್ಳಲಿದೆ. ಇದರಿಂದ ಪರಿಸರ ಸಂರಕ್ಷಣೆ ಆಗಲಿದೆ ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗ್ಡೆ ಹೇಳಿದ್ದಾರೆ.

ಒಟ್ಟಿನಲ್ಲಿ ಮೇಕ್ ಇನ್ ಇಂಡಿಯಾ ಯೋಜನೆಯಲ್ಲಿ ಈಗಾಗಲೇ ಎಲೆಕ್ಟ್ರಿಕ್ ರೈಲುಗಳು ಸಿದ್ಧವಾಗುತ್ತಿವೆ. ಅಲ್ಲದೇ ಎಲೆಕ್ಟ್ರಿಕ್ ಕಾಮಗಾರಿ ಕೂಡ ಪೂರ್ಣಗೊಳ್ಳುವ ಹಂತದಲ್ಲಿವೆ. ಈ ನಿಟ್ಟಿನಲ್ಲಿ ಕೂಡಲೇ ಎಲೆಕ್ಟ್ರಿಕ್ ಕಾಮಗಾರಿ ಪೂರ್ಣಗೊಂಡು ಭಾರತೀಯ ರೈಲ್ವೆಯ ಪರಿಸರ ಸಂರಕ್ಷಣೆ ಕನಸು ನನಸಾಗಲಿ ಎಂಬುವುದು ನಮ್ಮ ಆಶಯ.

ವರದಿ: ರಹಮತ್ ಕಂಚಗಾರ್

ಇದನ್ನೂ ಓದಿ: ವಿದ್ಯುತ್​ ವ್ಯತ್ಯಯ ತಪ್ಪಿಸಲು ಮಹತ್ವದ ಹೆಜ್ಜೆ; 24ಗಂಟೆಯೂ ಕಲ್ಲಿದ್ದಲು ಪೂರೈಕೆಗಾಗಿ ರೈಲು ಸಂಚಾರ

ರಾಮನಗರ, ಮಾಗಡಿ ಕಡೆಗೆ ನಮ್ಮ ಮೆಟ್ರೋ; 4ನೇ ಹಂತದಲ್ಲಿ ಬಿಡದಿಗೂ ಸಿಗಲಿದೆ ಮೆಟ್ರೋ ರೈಲು ಸಂಚಾರ ಭಾಗ್ಯ

Published On - 9:55 am, Wed, 13 October 21

Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ