AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2023ಕ್ಕೆ ಸಂಪೂರ್ಣ ವಿದ್ಯುತ್ ಚಾಲಿತ ರೈಲು ಸಂಚಾರ; ನೈಋತ್ಯ ರೈಲ್ವೆಯಿಂದ ಆಧುನೀಕರಣದತ್ತ ಚಿಂತನೆ

ಈಗಾಗಲೇ ಎಲೆಕ್ಟ್ರಿಕ್ ಕಾಮಗಾರಿ ಚುರುಕುಗೊಂಡಿದ್ದು, 2023 ಮಾರ್ಚ್ ಅಂತ್ಯದೊಳಗೆ ನೈಋತ್ಯ ರೈಲ್ವೆ ಸಂಪೂರ್ಣ ವಿದ್ಯುತ್ ಚಾಲಿತ ರೈಲುಗಳಾಗಿ ಪರಿವರ್ತನೆಗೊಳ್ಳಲಿದೆ. ಇದರಿಂದ ಇಂಧನದ ಬಹುದೊಡ್ಡ ಆರ್ಥಿಕ ಹೊರೆ ನೈಋತ್ಯ ರೈಲ್ವೆಗೆ ತಪ್ಪಲಿದೆ.

2023ಕ್ಕೆ ಸಂಪೂರ್ಣ ವಿದ್ಯುತ್ ಚಾಲಿತ ರೈಲು ಸಂಚಾರ; ನೈಋತ್ಯ ರೈಲ್ವೆಯಿಂದ ಆಧುನೀಕರಣದತ್ತ ಚಿಂತನೆ
ನೈಋತ್ಯ ರೈಲ್ವೆ
TV9 Web
| Edited By: |

Updated on:Oct 13, 2021 | 10:14 AM

Share

ಹುಬ್ಬಳ್ಳಿ: ಪ್ರಯಾಣಿಕರಿಗೆ ಹಾಗೂ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುವ ಮೂಲಕ ಹೆಸರುವಾಸಿಯಾಗಿರುವ ನೈಋತ್ಯ ರೈಲ್ವೆ ಈಗ ಮತ್ತಷ್ಟು ಆಧುನೀಕರಣದತ್ತ ಚಿಂತನೆ ನಡೆಸಿದ್ದು, ಈ ಚಿಂತನೆ ಪ್ರಯಾಣಿಕರ ಚಿಂತೆಯನ್ನು ದೂರ ಮಾಡಲಿದೆ. ಅಲ್ಲದೇ ಸಾಕಷ್ಟು ಪ್ರಮಾಣದಲ್ಲಿ ನೈಋತ್ಯ ರೈಲ್ವೆಗೆ ಆರ್ಥಿಕ ಹೊರೆ ತಗ್ಗಲಿದೆ. ಇಷ್ಟು ದಿನ ಡಿಸೇಲ್ ಮೂಲಕ ಚಲಿಸುತ್ತಿದ್ದ ರೈಲು ಇನ್ನು ಮುಂದೆ ಸಂಪೂರ್ಣ ವಿದ್ಯುತ್ ಚಾಲಿತ ರೈಲುಗಳಾಗಿ ಪರಿವರ್ತನೆ ಆಗುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರವಹಿಸಲಿವೆ.

ಈಗಾಗಲೇ ಎಲೆಕ್ಟ್ರಿಕ್ ಕಾಮಗಾರಿ ಚುರುಕುಗೊಂಡಿದ್ದು, 2023 ಮಾರ್ಚ್ ಅಂತ್ಯದೊಳಗೆ ನೈಋತ್ಯ ರೈಲ್ವೆ ಸಂಪೂರ್ಣ ವಿದ್ಯುತ್ ಚಾಲಿತ ರೈಲುಗಳಾಗಿ ಪರಿವರ್ತನೆಗೊಳ್ಳಲಿದೆ. ಇದರಿಂದ ಇಂಧನದ ಬಹುದೊಡ್ಡ ಆರ್ಥಿಕ ಹೊರೆ ನೈಋತ್ಯ ರೈಲ್ವೆಗೆ ತಪ್ಪಲಿದೆ.

ಈಗಾಗಲೇ ಕೊವಿಡ್ ಸಂದರ್ಭದಲ್ಲಿ ಕೊವಿಡ್ ಎಕ್ಸ್‌ಪ್ರೆಸ್‌, ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಹಾಗೂ ಹಲವಾರು ಯೋಜನೆ ಮತ್ತು ಜನಪರ ಕಾರ್ಯದ ಮೂಲಕ ಜನರಿಗೆ ಉತ್ಕೃಷ್ಟ ಮಟ್ಟದ ಸಾರಿಗೆ ಸೇವೆಯನ್ನು ನೀಡುತ್ತ ಬಂದಿರುವ ರೈಲ್ವೆ 2023ರ ಹೊತ್ತಿಗೆ ಜೀರೋ ಕಾರ್ಬನ್ ಎಮಿಟರ್ ಚಿಂತನೆಯನ್ನು ನಡೆಸಿದ್ದು, ಪರಿಸರ ಸಂರಕ್ಷಣೆ ಬಹುದೊಡ್ಡ ಹೊಣೆಯನ್ನು ನೈಋತ್ಯ ರೈಲ್ವೆ ಹೊಂದಿದೆ. ಅದಕ್ಕೆ ತಕ್ಕನಾಗಿ ಕಾರ್ಯವೈಖರಿಯನ್ನು ಮೈಗೂಡಿಸಿಕೊಂಡಿದೆ.

2030ರ ಹೊತ್ತಿಗೆ ಭಾರತೀಯ ರೈಲ್ವೆ ಸಂಪೂರ್ಣವಾಗಿ ವಿದ್ಯುತ್ತೀಕರಣಗೊಳ್ಳಲಿದೆ. ಈ ನಿಟ್ಟಿನಲ್ಲಿ ನೈಋತ್ಯ ರೈಲ್ವೆ ಈಗಾಗಲೇ ಕಾರ್ಯ ಪ್ರವೃತ್ತವಾಗಿದ್ದು, 2023ರ ಹೊತ್ತಿಗೆ ನಮ್ಮ ವಿಭಾಗ ಸಂಪೂರ್ಣವಾಗಿ ವಿದ್ಯುತ್ತೀಕರಣಗೊಳ್ಳಲಿದೆ. ಇದರಿಂದ ಪರಿಸರ ಸಂರಕ್ಷಣೆ ಆಗಲಿದೆ ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗ್ಡೆ ಹೇಳಿದ್ದಾರೆ.

ಒಟ್ಟಿನಲ್ಲಿ ಮೇಕ್ ಇನ್ ಇಂಡಿಯಾ ಯೋಜನೆಯಲ್ಲಿ ಈಗಾಗಲೇ ಎಲೆಕ್ಟ್ರಿಕ್ ರೈಲುಗಳು ಸಿದ್ಧವಾಗುತ್ತಿವೆ. ಅಲ್ಲದೇ ಎಲೆಕ್ಟ್ರಿಕ್ ಕಾಮಗಾರಿ ಕೂಡ ಪೂರ್ಣಗೊಳ್ಳುವ ಹಂತದಲ್ಲಿವೆ. ಈ ನಿಟ್ಟಿನಲ್ಲಿ ಕೂಡಲೇ ಎಲೆಕ್ಟ್ರಿಕ್ ಕಾಮಗಾರಿ ಪೂರ್ಣಗೊಂಡು ಭಾರತೀಯ ರೈಲ್ವೆಯ ಪರಿಸರ ಸಂರಕ್ಷಣೆ ಕನಸು ನನಸಾಗಲಿ ಎಂಬುವುದು ನಮ್ಮ ಆಶಯ.

ವರದಿ: ರಹಮತ್ ಕಂಚಗಾರ್

ಇದನ್ನೂ ಓದಿ: ವಿದ್ಯುತ್​ ವ್ಯತ್ಯಯ ತಪ್ಪಿಸಲು ಮಹತ್ವದ ಹೆಜ್ಜೆ; 24ಗಂಟೆಯೂ ಕಲ್ಲಿದ್ದಲು ಪೂರೈಕೆಗಾಗಿ ರೈಲು ಸಂಚಾರ

ರಾಮನಗರ, ಮಾಗಡಿ ಕಡೆಗೆ ನಮ್ಮ ಮೆಟ್ರೋ; 4ನೇ ಹಂತದಲ್ಲಿ ಬಿಡದಿಗೂ ಸಿಗಲಿದೆ ಮೆಟ್ರೋ ರೈಲು ಸಂಚಾರ ಭಾಗ್ಯ

Published On - 9:55 am, Wed, 13 October 21

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?