AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2023ಕ್ಕೆ ಸಂಪೂರ್ಣ ವಿದ್ಯುತ್ ಚಾಲಿತ ರೈಲು ಸಂಚಾರ; ನೈಋತ್ಯ ರೈಲ್ವೆಯಿಂದ ಆಧುನೀಕರಣದತ್ತ ಚಿಂತನೆ

ಈಗಾಗಲೇ ಎಲೆಕ್ಟ್ರಿಕ್ ಕಾಮಗಾರಿ ಚುರುಕುಗೊಂಡಿದ್ದು, 2023 ಮಾರ್ಚ್ ಅಂತ್ಯದೊಳಗೆ ನೈಋತ್ಯ ರೈಲ್ವೆ ಸಂಪೂರ್ಣ ವಿದ್ಯುತ್ ಚಾಲಿತ ರೈಲುಗಳಾಗಿ ಪರಿವರ್ತನೆಗೊಳ್ಳಲಿದೆ. ಇದರಿಂದ ಇಂಧನದ ಬಹುದೊಡ್ಡ ಆರ್ಥಿಕ ಹೊರೆ ನೈಋತ್ಯ ರೈಲ್ವೆಗೆ ತಪ್ಪಲಿದೆ.

2023ಕ್ಕೆ ಸಂಪೂರ್ಣ ವಿದ್ಯುತ್ ಚಾಲಿತ ರೈಲು ಸಂಚಾರ; ನೈಋತ್ಯ ರೈಲ್ವೆಯಿಂದ ಆಧುನೀಕರಣದತ್ತ ಚಿಂತನೆ
ನೈಋತ್ಯ ರೈಲ್ವೆ
TV9 Web
| Edited By: |

Updated on:Oct 13, 2021 | 10:14 AM

Share

ಹುಬ್ಬಳ್ಳಿ: ಪ್ರಯಾಣಿಕರಿಗೆ ಹಾಗೂ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುವ ಮೂಲಕ ಹೆಸರುವಾಸಿಯಾಗಿರುವ ನೈಋತ್ಯ ರೈಲ್ವೆ ಈಗ ಮತ್ತಷ್ಟು ಆಧುನೀಕರಣದತ್ತ ಚಿಂತನೆ ನಡೆಸಿದ್ದು, ಈ ಚಿಂತನೆ ಪ್ರಯಾಣಿಕರ ಚಿಂತೆಯನ್ನು ದೂರ ಮಾಡಲಿದೆ. ಅಲ್ಲದೇ ಸಾಕಷ್ಟು ಪ್ರಮಾಣದಲ್ಲಿ ನೈಋತ್ಯ ರೈಲ್ವೆಗೆ ಆರ್ಥಿಕ ಹೊರೆ ತಗ್ಗಲಿದೆ. ಇಷ್ಟು ದಿನ ಡಿಸೇಲ್ ಮೂಲಕ ಚಲಿಸುತ್ತಿದ್ದ ರೈಲು ಇನ್ನು ಮುಂದೆ ಸಂಪೂರ್ಣ ವಿದ್ಯುತ್ ಚಾಲಿತ ರೈಲುಗಳಾಗಿ ಪರಿವರ್ತನೆ ಆಗುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರವಹಿಸಲಿವೆ.

ಈಗಾಗಲೇ ಎಲೆಕ್ಟ್ರಿಕ್ ಕಾಮಗಾರಿ ಚುರುಕುಗೊಂಡಿದ್ದು, 2023 ಮಾರ್ಚ್ ಅಂತ್ಯದೊಳಗೆ ನೈಋತ್ಯ ರೈಲ್ವೆ ಸಂಪೂರ್ಣ ವಿದ್ಯುತ್ ಚಾಲಿತ ರೈಲುಗಳಾಗಿ ಪರಿವರ್ತನೆಗೊಳ್ಳಲಿದೆ. ಇದರಿಂದ ಇಂಧನದ ಬಹುದೊಡ್ಡ ಆರ್ಥಿಕ ಹೊರೆ ನೈಋತ್ಯ ರೈಲ್ವೆಗೆ ತಪ್ಪಲಿದೆ.

ಈಗಾಗಲೇ ಕೊವಿಡ್ ಸಂದರ್ಭದಲ್ಲಿ ಕೊವಿಡ್ ಎಕ್ಸ್‌ಪ್ರೆಸ್‌, ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಹಾಗೂ ಹಲವಾರು ಯೋಜನೆ ಮತ್ತು ಜನಪರ ಕಾರ್ಯದ ಮೂಲಕ ಜನರಿಗೆ ಉತ್ಕೃಷ್ಟ ಮಟ್ಟದ ಸಾರಿಗೆ ಸೇವೆಯನ್ನು ನೀಡುತ್ತ ಬಂದಿರುವ ರೈಲ್ವೆ 2023ರ ಹೊತ್ತಿಗೆ ಜೀರೋ ಕಾರ್ಬನ್ ಎಮಿಟರ್ ಚಿಂತನೆಯನ್ನು ನಡೆಸಿದ್ದು, ಪರಿಸರ ಸಂರಕ್ಷಣೆ ಬಹುದೊಡ್ಡ ಹೊಣೆಯನ್ನು ನೈಋತ್ಯ ರೈಲ್ವೆ ಹೊಂದಿದೆ. ಅದಕ್ಕೆ ತಕ್ಕನಾಗಿ ಕಾರ್ಯವೈಖರಿಯನ್ನು ಮೈಗೂಡಿಸಿಕೊಂಡಿದೆ.

2030ರ ಹೊತ್ತಿಗೆ ಭಾರತೀಯ ರೈಲ್ವೆ ಸಂಪೂರ್ಣವಾಗಿ ವಿದ್ಯುತ್ತೀಕರಣಗೊಳ್ಳಲಿದೆ. ಈ ನಿಟ್ಟಿನಲ್ಲಿ ನೈಋತ್ಯ ರೈಲ್ವೆ ಈಗಾಗಲೇ ಕಾರ್ಯ ಪ್ರವೃತ್ತವಾಗಿದ್ದು, 2023ರ ಹೊತ್ತಿಗೆ ನಮ್ಮ ವಿಭಾಗ ಸಂಪೂರ್ಣವಾಗಿ ವಿದ್ಯುತ್ತೀಕರಣಗೊಳ್ಳಲಿದೆ. ಇದರಿಂದ ಪರಿಸರ ಸಂರಕ್ಷಣೆ ಆಗಲಿದೆ ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗ್ಡೆ ಹೇಳಿದ್ದಾರೆ.

ಒಟ್ಟಿನಲ್ಲಿ ಮೇಕ್ ಇನ್ ಇಂಡಿಯಾ ಯೋಜನೆಯಲ್ಲಿ ಈಗಾಗಲೇ ಎಲೆಕ್ಟ್ರಿಕ್ ರೈಲುಗಳು ಸಿದ್ಧವಾಗುತ್ತಿವೆ. ಅಲ್ಲದೇ ಎಲೆಕ್ಟ್ರಿಕ್ ಕಾಮಗಾರಿ ಕೂಡ ಪೂರ್ಣಗೊಳ್ಳುವ ಹಂತದಲ್ಲಿವೆ. ಈ ನಿಟ್ಟಿನಲ್ಲಿ ಕೂಡಲೇ ಎಲೆಕ್ಟ್ರಿಕ್ ಕಾಮಗಾರಿ ಪೂರ್ಣಗೊಂಡು ಭಾರತೀಯ ರೈಲ್ವೆಯ ಪರಿಸರ ಸಂರಕ್ಷಣೆ ಕನಸು ನನಸಾಗಲಿ ಎಂಬುವುದು ನಮ್ಮ ಆಶಯ.

ವರದಿ: ರಹಮತ್ ಕಂಚಗಾರ್

ಇದನ್ನೂ ಓದಿ: ವಿದ್ಯುತ್​ ವ್ಯತ್ಯಯ ತಪ್ಪಿಸಲು ಮಹತ್ವದ ಹೆಜ್ಜೆ; 24ಗಂಟೆಯೂ ಕಲ್ಲಿದ್ದಲು ಪೂರೈಕೆಗಾಗಿ ರೈಲು ಸಂಚಾರ

ರಾಮನಗರ, ಮಾಗಡಿ ಕಡೆಗೆ ನಮ್ಮ ಮೆಟ್ರೋ; 4ನೇ ಹಂತದಲ್ಲಿ ಬಿಡದಿಗೂ ಸಿಗಲಿದೆ ಮೆಟ್ರೋ ರೈಲು ಸಂಚಾರ ಭಾಗ್ಯ

Published On - 9:55 am, Wed, 13 October 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!